ಕರ್ನಾಟಕ ಬಜೆಟ್ 2026 ಬಳಿಕ ನಾಯಕತ್ವ ಬದಲಾವಣೆ ಅಂತಿಮ ಕಾದಾಟ ಆಗುತ್ತೆ: ಮಾಜಿ ಸಿಎಂ ಭವಿಷ್ಯ
ಹಾವೇರಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕುರ್ಚಿಯ ಗುದ್ದಾಟ ತೀವ್ರವಾಗಿದೆ. ಮಾರ್ಚ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ಬಜೆಟ್ 2026 (Karnataka Budget 2026) ನಂತರ ನಾಯಕತ್ವ ಬದಲಾವಣೆ ಅಂತಿಮ ಘಟಕ್ಕೆ ತಲುಪಲಿದೆ. ಅದು ಕಾದಾಟವೇ ಆಗಲಿದೆ. ಸಂಧಾನ ಆಗಲು ಸಾಧ್ಯವಿಲ್ಲ. ಅದು ಯಾವ ರೀತಿ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಸರ್ಕಾರದ ಮೇಲೆ ಜನರ ವಿಶ್ವಾಸ ಸಂಪೂರ್ಣ ಹೋಗಿದೆ. ಜನ ಈ ಸರ್ಕಾರ ಕಿತ್ತೊಗೆಯಲು ಕಾಯುತ್ತಿದ್ದಾರೆ. ಈಗ ಅದರ ಕಾವು ಶಾಸಕರಿಗೆ ಮುಟ್ಟುತ್ತಿದೆ. ಅನಿಶ್ಚಿತೆಯ ವಾತಾವರಣ ಬಹಳ ದಿನ ಅದರ ತಾವು ಮತ್ತೊಮ್ಮೆ ಆರಿಸಿ ಬರುವುದಿಲ್ಲ ಎನ್ನುವ ಆತಂಕ ಶಾಸಕರಿಗಿದೆ. ಕೆಲವರು ವಿದೇಶಕ್ಕೆ ಕೆಲವರು ರೆಸಾರ್ಟ್ಗೆ ಹೋಗುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಿಯಂತ್ರಿಲು ಯಾವುದೇ ಶಕ್ತಿ ಇಲ್ಲ. ಬರುವಂತಹ ದಿನಗಳಲ್ಲಿ ಇವರನ್ನು ಜನರು ಫಾರಿನ್ನಿಗಾದರೂ, ದೆಹಲಿಗಾದರೂ ಕರ್ನಾಟಕದ ಚುಕ್ಕಾಣಿಯನ್ನು ಕೈಬಿಡಿಸಿ ಮನೆಗೆ ಕಳುಹಿಸುತ್ತಾರೆ ಎಂದರು.

ಶಿವಮೊಗ್ಗದಲ್ಲಿ ನಡೆದ ಅಪ್ರಾಪ್ತ ಬಾಲಕನ ಕೊಲೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದ ಘಟನೆ ಅತ್ಯಂತ ಮನಸಿಗೆ ನೋವಾಗುವಂತದ್ದು ಸಣ್ಣ ವಯಸ್ಸಿನಲ್ಲಿ ಗಾಂಜಾ ಸೇದಿದ್ದಾರೆ ಎನ್ನುವ ಸಂಶಯ ಶುರುವಾಗಿದೆ. ಕರ್ನಾಟಕದಲ್ಲಿ ಗಾಂಜಾ ಬಳಕೆ ಶಾಲೆ ಮಟ್ಟಕ್ಕೆ ಹೋಗಿದೆ ಎಂದು ನಾವು ಹೇಳುತ್ತಿದ್ದೆವು ಅದು ಸತ್ಯವಾಗಿದೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಸಣ್ಣ ಮಕ್ಕಳಲ್ಲಿ ಈ ರೀತಿಯ ಕೋಮು ಭಾವನೆ ಮೂಡಿದರೆ ಸಮಾಜ ಮುಂದೆ ಹೇಗೆ ಹೋಗುತ್ತದೆ. ಇವರು ಕೇವಲ ಕುರ್ಚಿ ಸಲುವಾಗಿ ಕಚ್ಚಾಡುತ್ತ ಕುಳಿತರೆ ಸಮಾಜ ಹೇಗೆ ನಡೆಯುತ್ತದೆ. ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಅಷ್ಟೇ ಅಲ್ಲ, ಸಾಮಾಜಿಕ ಸಾಮರಸ್ಯ ಕಾಯ್ದುಕೊಂಡು ಹೋಗಲು ವಿಫಲವಾಗಿದೆ ಎಂದು ಆರೋಪಿಸಿದರು.
ಯಡಿಯೂರಪ್ಪ ಅವರ ಮಾರ್ಗದರ್ಶನ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಯ ಅತ್ಯಂತ ಹಿರಿಯ ನಾಯಕರು. ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಧೀಮಂತ ನಾಯಕರು, ಬಿಜೆಪಿಯನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಕಟ್ಟಿ ಬೆಳೆಸಿದ್ದಾರೆ. ಅವರು ಯಾತಕ್ಕಾಗಿ ಹೋರಾಟ ಮಾಡಿದ್ದರು ಅದನ್ನು ಅಧಿಕಾರದಲ್ಲಿದ್ದಾಗ ಮಾಡಿದ್ದಾರೆ. ಹೀಗಾಗಿ ಜನ ಮಾನಸದಲ್ಲಿ ಉಳಿಸಿದ್ದಾರೆ. ಅವರಲ್ಲಿರುವ ಛಲ ಉತ್ಸಾಹ ನೋಡಿದರೆ ಅವರಿಗೆ ವಯಸ್ಸು ಅಡ್ಡಿಯಾಗುವುದಿಲ್ಲ. ಅವರೇ ಪಕ್ಷ ಕಟ್ಟಲು ಮತ್ತೆ ರಾಜ್ಯ ಸುತ್ತುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಅಂತ ಹೇಳಿದ್ದಾರೆ. ನಾವೆಲ್ಲರೂ ಸಂತೋಷದಿಂದ ಬಿಜೆಪಿ ಕಟ್ಟಲು ಅವರ ಆಶೀರ್ವಾದ ಮಾರ್ಗದರ್ಶನ ಪಡೆದುಕೊಳ್ಳುತ್ತೇವೆ. ಅವರೊಂದು ಆಸ್ತಿ ಮತ್ತು ಶಕ್ತಿ ಅದನ್ನು ಬಳಕೆ ಮಾಡಿಕೊಳ್ಳುವುದರಲ್ಲಿ ತಪ್ಪಿಲ್ಲ ಎಂದರು.
ಬಿಎಸ್ವೈ 50 ವರ್ಷದ ಸಾರ್ಥಕ ಸೇವೆಯ ಉತ್ಸವ
ಯಡಿಯೂರಪ್ಪ ಅವರು ಐವತ್ತು ವರ್ಷ ರಾಜಕಾರಣ ಮಾಡಿ ನಾಲ್ಕು ಬಾರಿ ಸಿಎಂ ಆಗಿದ್ದಾರೆ. ಇವತ್ತಿನ ಕಾಂಗ್ರೆಸ್ಗೆ ಉತ್ತರ ಕೊಡಲು ಭವಿಷ್ಯದ ದಿನಗಳಲ್ಲಿ ಒಳ್ಳೆಯ ಆಡಳಿತ ಕೊಡಲು ಅವರ ಮಾರ್ಗದರ್ಶನ ಅಗತ್ಯವಿದೆ. ಯಡಿಯೂರಪ್ಪ ಅವರ 50 ವರ್ಷದ ಸಾರ್ಥಕ ಸೇವೆಯ ಉತ್ಸವ 2028ರ ವಿಧಾನಸಭೆ ಚುನಾವಣೆಯ ಪರಿವರ್ತನೆಯ ಮುನ್ನುಡಿ ಅದಕ್ಕೆ ನಾವೆಲ್ಲರೂ ಸಿದ್ದರಾಗಿದ್ದೇವೆ ಎಂದು ಹೇಳಿದರು.
ಬಿಜೆಪಿ ತೊರೆದಿರುವ ನಾಯಕರನ್ನು ಘರ್ ವಾಪಸಿ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಅವರು, ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಾಗುತ್ತದೆ. ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚಿಸಿ ಅಂತಿಮವಾಗಿ ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರು ತೀರ್ಮಾನ ಮಾಡುತ್ತಾರೆ, 2028 ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರಲು ಏನೆಲ್ಲ ಕ್ರಮ ಕೈಗೊಳ್ಳಬೇಕೊ ಅದನ್ನು ಪಕ್ಷ ಮಾಡುತ್ತದೆ ಎಂದು ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications