Karnataka Budget 2026: ಕರ್ನಾಟಕ ಬಜೆಟ್ 2026ಕ್ಕೆ ಕ್ಷಣಗಣನೆ: ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 17ನೇ ಬಜೆಟ್ ಮಂಡನೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಕರ್ನಾಟಕ ಸರ್ಕಾರದ 2026 - 2027ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ ಬಜೆಟ್ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ದಾಖಲೆಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿಯ ಕರ್ನಾಟಕ ಬಜೆಟ್ ಹಲವು ಕಾರಣಕ್ಕೆ ಗಮನ ಸೆಳೆದಿದೆ. ಅಲ್ಲದೆ ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಗೂ ರಾಜಕೀಯ ದೃಷ್ಟಿಯಿಂದಲೂ ಈ ಬಾರಿಯ ಬಜೆಟ್ ಮಹತ್ವವನ್ನು ಪಡೆದುಕೊಂಡಿದೆ. ಶುಕ್ರವಾರ ಮಾರ್ಚ್ 6ರಂದು 10.15ಕ್ಕೆ ಬಜೆಟ್ ಮಂಡನೆ ಆಗಲಿದೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಮಂಡನೆ ಮಾಡುತ್ತಿರುವ ಬಜೆಟ್ ರಾಜ್ಯದಲ್ಲೇ ಅತ್ಯಂತ ಹೆಚ್ಚು ಹಾಗೂ ದೇಶದಲ್ಲೇ ಎರಡನೇ ಅತಿ ಹೆಚ್ಚು ಆಯವ್ಯಯ ಎನ್ನುವ ದಾಖಲೆಯನ್ನು ಬರೆಯಲಿದೆ. ಗ್ಯಾರಂಟಿ ಯೋಜನೆಗಳ ಭಾರ ಹಾಗೂ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಆದಾಯ ಬರೆದೆ ಇರುವುದರಿಂದ ಈ ಬಾರಿಯ ಬಜೆಟ್ ಆರ್ಥಿಕ ಶಿಸ್ತನ್ನು ಒಳಗೊಂಡಿರಲಿದೆ. ಅಲ್ಲದೆ ಹೊಸ ಘೋಷಣೆಗಳ ಸಾಧ್ಯತೆ ವಿರಳ ಎಂದೂ ಹೇಳಲಾಗುತ್ತಿದೆ.

ಈ ವಿಷಯಗಳಿಗೆ ಒತ್ತು ನೀಡುವ ಸಾಧ್ಯತೆ
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ಬಾರಿ ಬಜೆಟ್ ಮಂಡನೆ ಮಾಡಿದ್ದು, ಅವರ ದಾಖಲೆಯನ್ನು ಸಿದ್ದರಾಮಯ್ಯ ಅವರೇ ಮುರಿಯಲಿದ್ದಾರೆ. ಈ ಬಾರಿಯ ಕರ್ನಾಟಕ ಬಜೆಟ್ ಹಲವು ಕಾರಣಗಳಿಗೆ ಮುಖ್ಯವಾಗಿದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳ ಚುನಾವಣೆ ನಡೆಯಲಿವೆ. ಈ ಕಾರಣಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ವಿಷಯಗಳನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಇಲ್ಲವೇ ಈ ಕ್ಷೇತ್ರಗಳಿಗೆ ಪೂರಕವಾಗಿ ಹೆಚ್ಚು ಅನುದಾನವನ್ನು ಮೀಸಲಿರಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ಮೇಲೆ ಬಜೆಟ್ ಒಲವು ಇರುವ ಸಾಧ್ಯತೆ ಇದೆ.
ಗ್ಯಾರಂಟಿ ಯೋಜನೆಯೇ ಸವಾಲು
ಇನ್ನು ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ ಬಜೆಟ್ ಮುಖ್ಯವಾಗಿ ಗ್ಯಾರಂಟಿ ಯೋಜನೆಗಳಿಂದಲೂ ಪ್ರಮುಖವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಮೀಸಲಿರಿಸಬೇಕಾಗಿರುವುದು ಸವಾಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದಾಗಿನಿಂದಲೂ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿರಿಸುವುದಕ್ಕೆ ತಿಣುಕಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಅಂದಾಜು 60 ಸಾವಿರ ಕೋಟಿ ರೂ. ಅನುದಾನ ಬೇಕಾಗುತ್ತದೆ. ಹೀಗಾಗಿ, ಈ ಬಾರಿಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಹೇಗೆ ಹೊಂದಾಣಿಕೆ ಮಾಡುತ್ತಾರೆ ಎನ್ನುವ ಕುತೂಹಲವಿದೆ. ಇದೇ ಸಂದರ್ಭದಲ್ಲಿ ಹೊಸ ಹೊರೆಗಳ ಬಗ್ಗೆಯೂ ಆತಂಕ ಹೆಚ್ಚಾಗಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications