ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ರೂ. ಘೋಷಣೆ ಮಾಡಿದ ಸಿಎಂ

|
Google Oneindia Kannada News

ಬೆಂಗಳೂರು. ಮಾ. 06: ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ ಹಾಗೂ 30 ಹಳ್ಳಿಗಳ ಪುನರ್ವಸತಿ ಹಾಗೂ ಪುನರ್ ನಿರ್ಮಾಣಕ್ಕೆ 10,000 ಕೋಟಿ ರೂ. ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೆ ಮಹತ್ವದ ಹೇಳಿಕೆ ಕೊಟ್ಟಿರುವ ಸಿಎಂ ಯಡಿಯೂರಪ್ಪ ಅವರು, ಮೂರು ವರ್ಷಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ಭರವಸೆ ಕೊಟ್ಟಿದ್ದಾರೆ. ನಿನ್ನೆ ಹಣಕಾಸು ಇಲಾಖೆಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ತೀರ್ಮಾನ ಮಾಡಿದ್ದೇವೆ. ಇಂದು ದೆಹಲಿಗೆ ಹೋಗುತ್ತಿದ್ದೇನೆ. ಕೇಂದ್ರ ಸರ್ಕಾರದ ಪ್ರಮುಖರ ಜತೆ ಮಾತುಕತೆ ನಡೆಸಿ, ಹೇಗಾದರೂ ಸರಿಯೇ ಹೆಚ್ಚುವರಿ ಅನುದಾನ ತರುವ ಪ್ರಯತ್ನ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇಳಿವಯಸ್ಸಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರ ದರ್ಶನಕ್ಕೆ ಸರ್ಕಾರದಿಂದ ಹಣ!ಇಳಿವಯಸ್ಸಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರ ದರ್ಶನಕ್ಕೆ ಸರ್ಕಾರದಿಂದ ಹಣ!

CM Yeddyurappa has announced a grant of Rs 10,000 crore for the Upper Krishna Project

ಬಜೆಟ್‌ನಲ್ಲಿಯೆ ಹೇಳಬಹುದಿತ್ತು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿನ್ನೆ ಬಜೆಟ್ ಮಂಡಿಸುವಾಗಲೇ ಅದನ್ನು ಸೇರ್ಪಡೆ ಮಾಡಬಹುದಿತ್ತು.ಹೋಗಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವಾಗ ಹೇಳಬಹುದಿತ್ತು. ಆದರೂ ಈಗ ಹೇಳಿದ್ದಾರೆ‌, ಸಂತೋಷ. ಆದರೆ ಹತ್ತು ಸಾವಿರ ಕೋಟಿ ರೂ ಮೀಸಲಿಡುತ್ತೇವೆ ಎಂದಿದ್ದಾರೆ‌. ಆದರೆ ಹಣ ಎಲ್ಲಿದೆ? ಕೇವಲ ಭರವಸೆ ಆಗಬಾರದು‌. ನಾನು ಕೂಡ ಬಾಗಲಕೋಟೆ ಜಿಲ್ಲೆಯವನೇ.‌ ಬಾದಾಮಿ‌ ಕ್ಷೇತ್ರವನ್ನು ಪ್ರತಿನಿಧಿಸುವವನೇ ಎಂದಿದ್ದಾರೆ.

English summary
Chief Minister yediyurappa has announced a grant of Rs 10,000 crore for the Upper Krishna Project. Chief Minister BS yediyurappa made a significant announcement in the Assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X