ಬಜೆಟ್ ಅಧಿವೇಶನಕ್ಕೆ ಮೂವರು ಬಿಜೆಪಿ ಶಾಸಕರು ಗೈರಾಗಿದ್ದೇಕೆ?

ಬೆಂಗಳೂರು, ಫೆಬ್ರವರಿ 06: ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನ ಬಹಳ ಕುತೂಹಲ ಕೆರಳಿಸಿದೆ.

ಅಧಿವೇಶನಕ್ಕೆ ಸುಮಾರು 8 ಕಾಂಗ್ರೆಸ್ , ಓರ್ವ ಜೆಡಿಎಸ್ ಮತ್ತು ಮೂವರು ಬಿಜೆಪಿ ಶಾಸಕರು ಗೈರಾಗಿರುವುದು ರಾಜ್ಯ ರಾಜಕಾರಣದಲ್ಲಿ ಯಾವುದೋ ಮಹತ್ವದ ಘಟನೆಯೊಂದು ಘಟಿಸುವ ಸೂಚನೆ ಎನ್ನಿಸಿದೆ.

ಕಾಂಗ್ರೆಸ್ ನ ಅತೃಪ್ತ ಶಾಸಕರು ಗೈರಾಗಿರುವುದೇನೋ ಸರಿ, ಆದರೆ ಬಿಜೆಪಿಯ ಮೂವರು ಶಾಸಕರೂ ಅಧಿವೇಶನಕ್ಕೆ ಹಾಜರಾಗಿಲ್ಲ!

ಬಿಜೆಪಿಯ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಅಶ್ವತ್ಥ್ ನಾರಾಯಣ್, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಮಹದೇವಪುರ ಶಾಸಕ ಅರವಿಂದ್ ಲಿಂಬಾವಳಿ ಅವರು ಆಪರೇಶನ್ ಕಮಲದ ನೇತೃತ್ವ ಹೊತ್ತಿದ್ದು, ಕಾಂಗ್ರೆಸ್ ನ ಅತೃಪ್ತ ಶಾಸಕರನ್ನು ತಮ್ಮ ಸುಪರ್ದಿಯಲ್ಲಿಟ್ಟುಕೊಂಡಿರುವ ಕಾರಣ ಅವರು ಸದನಕ್ಕೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Karnataka budget session 2019: Here is Why 3 BJP MLAs are absent

ಈ ಮೂವರು ಶಾಸಕರೂ ಮುಂಬೈಯಲ್ಲಿಯೇ ಇದ್ದಾರೆ ಎನ್ನಲಾಗುತ್ತಿದೆ.

ಇದರೊಟ್ಟಿಗೆ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ(ಗೋಕಾಕ), ಮಹೇಶ್ ಕುಮಟಳ್ಳಿ(ಅಥಣಿ), ನಾಗೇಂದ್ರ(ಬಳ್ಳಾರಿ ಗ್ರಾಮಾಂತರ), ಉಮೇಶ್ ಜಾಧವ್(ಚಿಂಚೋಳಿ), ಗಣೇಶ್(ಕಂಪ್ಲಿ), ಡಾ ಸುಧಾಕರ್ (ಚಿಕ್ಕಬಳ್ಳಾಪುರ), ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ, ಸದನಕ್ಕೆ ಗೈರು ಹಾಜರಾಗಿದ್ದಾರೆ. ಜೆಡಿಎಸ್ ನ ಓರ್ವ ಶಾಸಕರೂ ಗೈರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+