ಕರ್ನಾಟಕ ಬಜೆಟ್ ಅಧಿವೇಶನ: ಸದನ ಕುತೂಹಲ, ಕಾಂಗ್ರೆಸ್ ನ 8 ಶಾಸಕರು ಗೈರು!
ಬೆಂಗಳೂರು, ಫೆಬ್ರವರಿ 06: ಕರ್ನಾಟಕ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಅತೃಪ್ತರ ನಡೆ ಏನು ಎಂಬುದು ಕುತೂಹಲ ಕೆರಳಿಸಿದೆ.
ಅತೃಪ್ತರಿಗೆ ಮೂಗುದಾರ, ಶಾಸಕರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್
ಕಾಂಗ್ರೆಸ್ಸಿನ ಆರು ಮಂದಿ ಅತೃಪ್ತ ಶಾಸಕರು ಬಜೆಟ್ ಅಧಿವೇಶನಕ್ಕೆ ಗೈರಾಗಬಹುದು ಎಂಬ ಎಚ್ಚರಿಕೆಯಿಂದ ಈಗಾಗಲೇ ಕಾಂಗ್ರೆಸ್ ತನ್ನೆಲ್ಲ ಶಾಸಕರಿಗೂ ವ್ಹಿಪ್ ಜಾರಿಗೊಳಿಸಿದೆ.
ಅಧಿವೇಶನಕ್ಕೆ ಆರು 'ಕೈ' ಶಾಸಕರು ಗೈರು? ಬಿಜೆಪಿಯ ಭಾರಿ ರಣತಂತ್ರ
ಫೆಬ್ರವರಿ 6 ರಂದು ಅಧಿವೇಶನ ಆರಂಭದಿಂದ ಅಧಿವೇಶನ ಅಂತ್ಯವಾಗುವವರೆಗೂ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಕೆಪಿಸಿಸಿಯ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ಅವರು ಕಾಂಗ್ರೆಸ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದ್ದಾರೆ.
ಬಿಜೆಪಿಯು ಕಾಂಗ್ರೆಸ್ ಶಾಸಕರನ್ನು ಗೈರಾಗಿಸಿ ಬಜೆಟ್ ಗೆ ಅನುಮೋದನೆ ದೊರಕದಂತೆ ಮಾಡಿ, ಅವಿಶ್ವಾಸ ಗೊತ್ತುವಳಿ ಮಂಡಿಸಲು ಸಜ್ಜಾಗಿದೆ
Bengaluru: Protest in Karnataka Assembly by opposition parties during Governor Vajubhai Vala's address. BJP alleged that the present government doesn't have the numbers & is a minority government. pic.twitter.com/lqbxyvsSav
— ANI (@ANI) February 6, 2019