ಕರ್ನಾಟಕ ವಿಧಾನಸಭೆ ಅಧಿವೇಶನ: ರೈತಪರ ಬಜೆಟ್ ಮಂಡಿಸಿದ ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 08: ಮೈತ್ರಿ ಸರ್ಕಾರ ಉಳಿಯುತ್ತಾ, ಬೀಳುತ್ತಾ ಎಂಬ ಪ್ರಶ್ನೆಗೆ ಇಂದು ಸ್ಪಷ್ಟ ಉತ್ತರ ಸಿಕ್ಕಲಿದ್ದು, ಬಜೆಟ್ ಮಂಡನೆಯತ್ತ ಇಡೀ ರಾಜ್ಯದ ಚಿತ್ತ ನೆಟ್ಟಿದೆ.
ಕರ್ನಾಟಕ ಬಜೆಟ್ ಅಧಿವೇಶನ, ಎಚ್ಡಿಕೆ ಬಜೆಟ್ ಮಂಡನೆ, ಬಿಜೆಪಿ ಪ್ರತಿಭಟನೆ : ಚಿತ್ರಗಳು
ಬುಧವಾರದಿಂದ ಆರಂಭವಾಗಿದ್ದ ಬಜೆಟ್ ಅಧಿವೇಶನಕ್ಕೆ ಹಲವು ಕಾಂಗ್ರೆಸ್ ಶಾಸಕರು ಗೈರಾಗಿದ್ದ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಬಹುಮತವಿಲ್ಲ ಎಂಬ ಗಲಾಟೆ ಎಬ್ಬಿಸಿ, ಎರಡೂ ದಿನಗಳ ಕಲಾಪವನ್ನು ಬಿಜೆಪಿ ನಡೆಯುವುದಕ್ಕೆ ಬಿಟ್ಟಿರಲಿಲ್ಲ.
ಆದರೆ ಇಂದು 12:30 ಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಡಿಸಲಿರುವ ಬಜೆಟ್ ಸಮಯದಲ್ಲಿ ಎಲ್ಲಾ ಶಾಸಕರೂ ಹಾಜರಿರುತ್ತಾರಾ ಎಂಬುದೇ ಕುತೂಹಲದ ಪ್ರಶ್ನೆಯಾಗಿದ್ದು, ಇಂದು ಬಜೆಟ್ ಮಂಡಿಸಲು ಅವಕಾಶ ನೀಡದೆ ಇರಲು ಬಿಜೆಪಿ ನಿರ್ಧರಿಸಿದ್ದು, ಅದಕ್ಕಾಗಿ ಕೆಲವು ಯೋಜನೆಗಳನ್ನು ಹಾಕಿಕೊಂಡಿದೆ.
Karnataka Budget 2019 LIVE : ಇಂದು ಬಜೆಟ್ ಮಂಡನೆಯಾಗುತ್ತಾ?
ಅತೃಪ್ತ ಶಾಸಕರ ಮನವೊಲಿಸಿ, ವಾಪಸ್ ಕರೆಸಿಕೊಂಡು ಮತ್ತೊಮ್ಮೆ ಅಗ್ನಿಪರೀಕ್ಷೆಯಿಂದ ಮೈತ್ರಿ ಸರ್ಕಾರ ಪಾರಾಗುತ್ತಾ, ಅಥವಾ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯೊಂದು ಇಂದು ಘಟಿಸುತ್ತಾ ಎಂಬುದು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ.

ಇಂದಿನ ಅಧಿವೇಶನ ಮತ್ತು ಬಜೆಟ್ ಮಂಡನೆಯ ಕ್ಷಣಕ್ಷಣದ ಮಾಹಿತಿಯನ್ನು ಒನ್ ಇಂದಿಯಾ ಕನ್ನಡ ನೀಡಲಿದೆ.
Listen to the audio that has exposed your party's 'Niyat', Mr. @narendramodi.
— Siddaramaiah (@siddaramaiah) February 8, 2019
ಮಾಡೋದೆಲ್ಲಾ ಅನಾಚಾರ, ಮನೆ ಮುಂದೆ ಬೃಂದಾವನ
Shame on You!!












Click it and Unblock the Notifications