ಕರ್ನಾಟಕ ಬಜೆಟ್ 2018 : ಅನ್ನಭಾಗ್ಯ ಯೋಜನೆಯಲ್ಲಿ ಕೆಲವು ಬದಲಾವಣೆ
Recommended Video

ಬೆಂಗಳೂರು, ಜುಲೈ 05 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ಹಿಂದಿನ ಸರ್ಕಾರದ ಜನಪ್ರಿಯ ಕಾರ್ಯಕ್ರಮ ಅನ್ನಭಾಗ್ಯದಲ್ಲಿ ಅವರು ಹಲವು ಬದಲಾವಣೆಗಳನ್ನು ಮಾಡಿದ್ದಾರೆ.
ಗುರುವಾರ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಅನ್ನಭಾಗ್ಯ ಯೋಜನೆಯಲ್ಲಿ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದರು.

ಅನ್ನಭಾಗ್ಯ ಯೋಜನೆಯ ಬದಲಾವಣೆಗಳು
* ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ ಅಕ್ಕಿ 7 ರಿಂದ 5 ಕೆಜಿಗೆ ಇಳಿಕೆ
* ಬಿಪಿಎಲ್ ಪಡಿತರ ಚೀಟಿಗೆ 1 ಕೆಜಿ ಪಾಮ್ ಎಣ್ಣೆ, ರಿಯಾಯಿತಿ ದರದಲ್ಲಿ ಅರ್ಧ ಕೆಜಿ ತೊಗರಿ ಬೇಳೆ ವಿತರಣೆ
* 1 ಕೆಜಿ ಅಯೋಡಿನ್ ಉಪ್ಪು, 1 ಕೆಜಿ ಸಕ್ಕರೆ ವಿತರಣೆ
ಬಜೆಟ್ನಲ್ಲಿನ ಘೋಷಣೆಗಳು
* ಅನ್ನಭಾಗ್ಯ ಯೋಜನೆಯ ಮೌಲ್ಯವರ್ಧನೆ. ಪ್ರತಿ ಫಲಾನುಭವಿಗೆ 5 ಕೆ.ಜಿ ಉಚಿತ ಅಕ್ಕಿ ಮತ್ತು ರಿಯಾಯಿತಿ ದರದಲ್ಲಿ ಅರ್ಧ ಕೆ.ಜಿ. ತೊಗರಿಬೇಳೆ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 1 ಕೆ.ಜಿ. ಪಾಮ್ ಎಣ್ಣೆ, 1 ಕೆ.ಜಿ. ಅಯೋಡಿನ್ ಮತ್ತು ಕಬ್ಬಿಣಾಂಶಯುಕ್ತ ಉಪ್ಪು ಹಾಗೂ 1 ಕೆ.ಜಿ. ಸಕ್ಕರೆ ವಿತರಣೆ.
* ವರ್ಷಕ್ಕೊಂದು ತಿಂಗಳು ಆಹಾರ ಸುರಕ್ಷಾ ಮಾಹೆ ಆಯೋಜನೆ; ಜಾಗೃತ ಸಮಿತಿಯ ಸದಸ್ಯರ ಸಹಕಾರದೊಂದಿಗೆ ಪಡಿತರ ಚೀಟಿಗಳ ವಾರ್ಷಿಕ ಪರಿಷ್ಕರಣೆ.












Click it and Unblock the Notifications