Karnataka Bundh: ರಾಜ್ಯದಲ್ಲಿ ಶಾಲಾ-ಕಾಲೇಜು ರಜೆ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದೇನು?
School Holiday: ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್ ಕರೆ ನೀಡಲಾಗಿದೆ. ಈ ಹಿನ್ನೆಲೆ ಅಂದು ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆಯೇ? ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇತ್ತೀಚೆಗಷ್ಟೇ ಎಂಇಎಸ್, ಶಿವಸೇನೆ ಕೆಲ ಪುಂಡರು ಕರ್ನಾಟಕ ಸಾರಿಗೆ ಕೆಎಸ್ಆರ್ಟಿಸಿ ಬಸ್ ಚಾಲಕ, ನಿರ್ವಾಹಕರಿಗೆ ಮಸಿ ಬಳಿದು ಹಲ್ಲೆಯನ್ನು ಸಹ ಮಾಡಿದ್ದರು. ಆದರೆ ಪುಂಡಾಟಿಕೆ ಮೆರೆದ ಪುಂಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ಒತ್ತಡ ಹೇರಲು ಕರ್ನಾಟಕ ಬಂದ್ ಮಾಡಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದರು.

ಮತ್ತೊಂದೆಡೆ ಅಂದೇ ಕೆಲ ತರಗತಿಗಳಿಗೆ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಬೇರೆ ದಿನ ಬಂದ್ಗೆ ಕರೆ ನೀಡಿ ಎನ್ನುವ ಮಾತುಗಳು ಕೇಳಿಬಂದಿದ್ದವು. ಅಲ್ಲದೆ, ಪೋಷಕರು ಕೂಡ ತಮ್ಮ ಮಕ್ಕಳನ್ನು ಅಂದು ಶಾಲೆಗೆ ಕಳುಹಿಸುವುದಾ ಬೇಡವಾ ಎನ್ನುವ ಆತಂಕದಲ್ಲಿದ್ದರು. ಇದೀಗ ಈ ಬಗ್ಗೆ ಮಧು ಬಂಗಾರಪ್ಪ ಮಾತನಾಡಿದ್ದಾರೆ.
ಶಾಲಾ-ಕಾಲೇಜುಗಳ ರಜೆ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಮಾರ್ಚ್ 21ರಂದು ಅಂದರೆ ಇಂದು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶನಿವಾರ ಎಸ್ಎಸ್ಎಲ್ಸಿ ಪರೀಕ್ಷೆ ಇಲ್ಲ. ಸಾರ್ವಜನಿಕ ವಾಹನ ಇಲ್ಲದೆ ಇದ್ದರೆ ಮಕ್ಕಳಿಗೆ ತೊಂದರೆ ಆಗುತ್ತದೆ. ಗೃಹ ಇಲಾಖೆ ಜೊತೆ ಚರ್ಚೆ ನಡೆಸಿ ಮಾರ್ಚ್ 21ರಂದು ತೀರ್ಮಾನ ಮಾಡುತ್ತೇವೆ. ಬಂದ್ಗೆ ಸಾರಿಗೆ ಬೆಂಬಲ ನೀಡಿದರೆ, ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ಓಲಾ ಉಬರ್ ಸಂಘಟನೆ ಈ ಬಂದ್ಗೆ ಸಂಪೂರ್ಣ ಬೆಂಬಲ ನೀಡಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಓಲಾ, ಉಬರ್ ಡ್ರೈವರ್ ಅಸೋಸಿಯೇಷನ್ ಅಧ್ಯಕ್ಷ ತನ್ವೀರ್ ಪಾಷ ಮಾತನಾಡಿದ್ದು, ನೆಲ, ಜಲ, ಭಾಷೆ ವಿಚಾರವಾಗಿ ಬಂದ್ಗೆ ಕರೆ ನೀಡಲಾಗಿದೆ. ಈ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.
ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಮ್ಮ ವಾಹನಗಳು ರಸ್ತೆಗೆ ಇಳಿಯುವುದಿಲ್ಲ. ಶನಿವಾರ ಬಂದ್ ವೇಳೆ ಓಲಾ ಉಬರ್ ಸೇವೆ ಇರುವುದಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ಹಲವು ಪರೀಕ್ಷೆಗಳು ನಡೆಯುತ್ತಲಿವೆ. ಈ ಮಧ್ಯೆಯೇ ಕರ್ನಾಟಕ ಬಂದ್ಗೆ ಕನ್ನಡ ಪರ ಸಂಘಟನೆ ಕರೆ ನೀಡಿದೆ. ಪರಿಣಾಮ ಪೋಷಕರು ಚಿಂತೆಗೆ ಒಳಗಾಗಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಬಂದ್ ಪರಿಣಾಮ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಾ ಎಂಬ ಪ್ರಶ್ನೆ ಕೂಡ ಎದುರಾಗಿದೆ. ಈ ನಡುವೆ ಕೆಲ ಶಾಲಾ-ಕಾಲೇಜುಗಳು ನೈತಿಕ ಬೆಂಬಲ ವ್ಯಕ್ತಪಡಿಸಿವೆ ಎನ್ನಲಾಗುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications