ರಾಜ್ಯದಲ್ಲಿ ಉಪ ಚುನಾವಣೆ: ಮಹತ್ವದ ಬದಲಾವಣೆಗೆ ಮುಂದಾದ ಕಾಂಗ್ರೆಸ್, ತುರ್ತು ಸಭೆ
ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುಲಿದೆ. ಈ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಅತ್ಯಂತ ನಿರ್ಣಾಯಕವಾಗಿದೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಕಾಂಗ್ರೆಸ್ ಹಾಗೂ ಬಿಜೆಪಿ - ಜೆಡಿಎಸ್ ಪಕ್ಷಗಳು ಚುನಾವಣಾ ರಣತಂತ್ರ ರೂಪಿಸುತ್ತಿವೆ. ಈ ನಡುವೆ ಕಾಂಗ್ರೆಸ್ ನಾಯಕರು ತುರ್ತು ಸಭೆ ನಡೆಸಿದ್ದಾರೆ.
ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಡೆಯುತ್ತಿರುವ ಎರಡನೇ ಉಪ ಚುನಾವಣೆ ಇದಾಗಿದೆ. ಈ ಹಿಂದೆ ಅಂದರೆ ಇದೇ ವರ್ಷ ಜೂನ್ನಲ್ಲಿ ಸುರಪುರ ವಿಧಾನಸಭೆ ಕ್ಷೇತ್ರದಲ್ಲೂ ಉಪ ಚುನಾವಣೆ ನಡೆದಿತ್ತು. ಆಗ ಕಾಂಗ್ರೆಸ್ನ ಅಭ್ಯರ್ಥಿ ರಾಜಾ ವೇಣುಗೋಪಾಲ್ ನಾಯಕ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಆದರೆ, ಈಗ ರಾಜ್ಯದಲ್ಲಿ ಪರಿಸ್ಥಿತಿ ತುಂಬಾ ಭಿನ್ನವಾಗಿದೆ.

ಇದೇ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಅಲರ್ಟ್ ಆಗಿದ್ದು. ಕಾಂಗ್ರೆಸ್ನ ರಾಷ್ಟ್ರೀಯ ನಾಯಕರೊಂದಿಗೆ ತುರ್ತು ಸಭೆ ನಡೆಸಿದೆ. ಮೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ. ರಾಜ್ಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣಗೋಪಾಲ ಅವರು ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಮೂರು ಕ್ಷೇತ್ರದಲ್ಲಿ ಗೆಲ್ಲಲು ಪ್ರಾಥಮಿಕ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಲಾಗಿದೆ ಎನ್ನಲಾಗಿದೆ.
ಸಚಿವರನ್ನು ಚುನಾವಣೆಗೆ ನೇಮಿಸಿ: ಇನ್ನು ಮೂರು ಕ್ಷೇತ್ರದ ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್. ಏಕಕಾಲಕ್ಕೆ ಎರಡು ಹಣ್ಣುಗಳನ್ನು ಹೊಡೆಯಲು ಮುಂದಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವರ ರಹಸ್ಯ ಸಭೆಯನ್ನು ತಪ್ಪಿಸಲು ಸಚಿವರಿಗೆ ಈ ಕ್ಷೇತ್ರಗಳ ಉಸ್ತುವಾರಿ ನೀಡುವ ಸಾಧ್ಯತೆ ಇದೆ. ಇದರಿಂದ ಸಚಿವರು ಉಪ ಚುನಾವಣೆಯಲ್ಲಿ ಬ್ಯುಸಿಯಾಗುತ್ತಾರೆ ಅದರಿಂದ ಚುನಾವಣೆ ಕೆಲಸವೂ ಆಗುತ್ತೆ. ಅತ್ತ ಕಡೆ ಸಚಿವರ ರಹಸ್ಯ ಸಭೆ ಮಾಡುವುದು ಸಹ ತಪ್ಪುತ್ತದೆ. ಇಂತಹದೊಂದು ಐಡಿಯಾವನ್ನು ಕೆ.ಸಿ ವೇಣುಗೋಪಾಲ್ ಅವರು ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಅಭ್ಯರ್ಥಿ ಘೋಷಿಸಲಿ: ಕಾಂಗ್ರೆಸ್ ಈ ಬಾರಿ ಕಾದು ನೋಡುವ ತಂತ್ರವನ್ನು ಅನುಸರಿಸಲು ನಿರ್ಧರಿಸಿದಂತೆಯಂತೆ. ಮೊದಲು ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿ - ಜೆಡಿಎಸ್ ತನ್ನ ಮೈತ್ರಿ ಅಭ್ಯರ್ಥಿಯನ್ನು ಘೋಷಿಸಲಿ. ಆ ಮೇಲೆ ಕಾಂಗ್ರೆಸ್ ಅಭ್ಯರ್ಥಿಯಾರಾಗಬೇಕು ಎಂದು ನಿರ್ಧರಿಸೋಣ ಎಂದು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎನ್ನಲಾಗಿದೆ.
ಸಂಡೂರಿನಲ್ಲಿ ಮೊದಲು ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಇ ತುಕಾರಂ ಅವರು ಗೆದಿದ್ದರು. ಅಲ್ಲದೇ ಲೋಕಸಭೆ ಚುನಾವಣೆಯಲ್ಲೂ ಅವರು ಗೆದಿದ್ದಾರೆ. ಹೀಗಾಗಿ ಅವರ ಕುಟುಂಬದವರೊಬ್ಬರಿಗೆ ಟಿಕೆಟ್ ಸಿಗುವುದು ಬಹುತೇಕ ಕನ್ಫರ್ಮ್ ಎನ್ನಲಾಗಿದೆ. ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್ ಅವರ ಸಹೋದರ ಡಿ.ಕೆ ಸುರೇಶ್ ಅವರನ್ನೇ ನಿಲ್ಲಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇನ್ನು ಶಿಗ್ಗಾಂವಿ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆಯಾಗಿದೆಯಾರೂ, ಸ್ಪಷ್ಟತೆ ಮೂಡಿಲ್ಲ. ಸಿಪಿ ಯೋಗೇಶ್ವರ್ ಅವರ ನಡೆಯ ಬಗ್ಗೆಯೂ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
ಮುಟ್ಟಿನ ರಜೆ ಮಹಿಳೆಯರ ಹಕ್ಕು: ಸುಪ್ರೀಂ ಕೋರ್ಟ್ ನಿಲುವನ್ನು ತೀವ್ರವಾಗಿ ಖಂಡಿಸಿದ CPI -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ 2026: ಒಂದೇ ಹಂತದಲ್ಲಿ 140 ಸ್ಥಾನಗಳಿಗೆ ಚುನಾವಣೆ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ












Click it and Unblock the Notifications