ಕರ್ನಾಟಕದ 15 ವಿಧಾನಸಭಾ ಉಪ ಚುನಾವಣಾ ಫಲಿತಾಂಶದ ಸಮಗ್ರ ಚಿತ್ರಣ
ಬೆಂಗಳೂರು, ಡಿಸೆಂಬರ್ 09: ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಗೆ ಸೋಮವಾರ ಉತ್ತರ ಸಿಕ್ಕಿದೆ. ರಾಜ್ಯದಲ್ಲಿ ನಡೆದ 15 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 12, ಕಾಂಗ್ರೆಸ್ 2, ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಗೆಲುವು ದಾಖಲಿಸಿದ್ದಾರೆ.
15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಡಿಸೆಂಬರ್ 9ರಂದು ನಡೆಯಿತು. ಗುರುವಾರ(ಡಿಸೆಂಬರ್ 05)ರಂದು ಎಲ್ಲಾ ಕ್ಷೇತ್ರಗಳಿಂದ ಶೇ 67.90ರಷ್ಟು ಮತದಾನ ದಾಖಲಾಗಿತ್ತು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿತ್ತು.
ಡಿಸೆಂಬರ್ 09ರಂದು ಸೋಮವಾರ ಬೆಳಗ್ಗೆ 8 ಗಂಟೆಗೆ 15 ಕ್ಷೇತ್ರಗಳಲ್ಲಿಯೂ ಮತ ಎಣಿಕೆ ಆರಂಭವಾಯಿತು. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ಹೊರ ಬಿದ್ದು, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುರಕ್ಷಿತವಾಯಿತು.

ಬೆಳಗ್ಗೆ 6.30ಕ್ಕೆ ಮತ ಎಣಿಕೆ ಸಿಬ್ಬಂದಿ ಕೇಂದ್ರಕ್ಕೆ ಆಗಮಿಸಿದ್ದು, 7.30ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗುತ್ತದೆ.
ಮಾಧ್ಯಮ ಪ್ರತಿನಿಧಿಗಳಿಗೆ ಮೊಬೈಲ್ ಬಳಕೆ ಮಾಡಲು ಅವಕಾಶವಿದ್ದು, ಅವರಿಗೆ ಪ್ರತ್ಯೇಕ ಸ್ಥಳ ನಿಗದಿ ಮಾಡಲಾಗಿದೆ. ಮತ ಎಣಿಕೆಯ ನೇರ ವರದಿ, ಕ್ಷಣಕ್ಷಣದ ಅಪ್ಡೇಟ್ ಗಳ ಜೊತೆಗೆ ರಾಜಕೀಯ ಚಟುವಟಿಕೆಗಳ ಸ್ಪಷ್ಟ ಮಾಹಿತಿಗಾಗಿ ಈ ಪುಟವನ್ನು ಓದಿರಿ.
Read in English
ಬೆಂಗಳೂರಿನಲ್ಲಿ ಕಾರ್ಬೇಜ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯವಾಗ ಗಮನ ಹರಿಸಬೇಕಿದೆ- ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರನ್ನು ಮಾಡ್ರನ್ ಸಿಟಿ ಮಾಡಬೇಕಿದೆ. ಪ್ರಾಮಾಣಿಕ ಕಾರ್ಯದಿಂದ ಎಲ್ಲವೂ ಸಾಧ್ಯವಾಗುತ್ತದೆ. ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಯಬೇಕು -ಸಿಎಂ ಬಿ.ಎಸ್.ಯಡಿಯೂರಪ್ಪ
ಸಾಮೂಹಿತ ನೇತೃತ್ವವೇ ನಮ್ಮ ದೊಡ್ಡ ಗೆಲುವಿಗೆ ಕಾರಣವಾಗಿದ್ದು, ಪಕ್ಷ ಮತ್ತು ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತೇವೆ - ಸಿಎಂ ಬಿ.ಎಸ್.ಯಡಿಯೂರಪ್ಪ
ಕರ್ನಾಟಕ ಅಭಿವೃದ್ಧಿ ಬಗ್ಗೆ ಸಾಮಾನ್ಯ ಜನರು ಕುಳಿತಲ್ಲಿ, ನಿಂತಲ್ಲಿ ಮಾತನಾಡುವಂತೆ ಮಾಡುವುದೇ ನನ್ನ ಉದ್ದೇಶ - ಸಿಎಂ ಬಿ.ಎಸ್.ಯಡಿಯೂರಪ್ಪ
ಕಾಂಗ್ರೆಸ್, ಜೆಡಿಎಸ್ ಬಗ್ಗೆ ಟೀಕಿಸಿದರೆ ನಾವು ಸಾಧನೆ ಮಾಡುವುದೇನಿಲ್ಲ. ಅವರ ರಾಜೀನಾಮೆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ - ಸಿಎಂ ಬಿ.ಎಸ್.ಯಡಿಯೂರಪ್ಪ
ರೈತರ ಬಗ್ಗೆ ಹೆಚ್ಚು ಕಾಳಜಿ, ನಿರುದ್ಯೋಗ ಸಮಸ್ಯೆ ಬಗೆಹರಿಸುವತ್ತ ಹೆಚ್ಚು ಗಮನ ಹರಿಸ ಕೆಲಸ ಮಾಡುತ್ತೇವೆ - ಸಿಎಂ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ನಾಯಕರು, ಕಾರ್ಯಕರ್ತರ ಪರಿಶ್ರಮದ ಪ್ರಭಾವದಿಂದ 12 ಕ್ಷೇತ್ರಗಳಲ್ಲಿ ಗೆಲುವು. 45 ರಿಂದ 50 ಸಾವಿರ ಅಂತರದಿಂದ ಗೆದ್ದಿರುವುದು ಒಂದು ದಾಖಲೆ - ಸಿಎಂ ಬಿ.ಎಸ್.ಯಡಿಯೂರಪ್ಪ
ದೇಶದ ಗಮನ ಸೆಳೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ 12 ಸ್ಥಾನ ಗೆದ್ದು ದಾಖಲೆ ನಿರ್ಮಿಸಿದ್ದೇವೆ- ಸಿಎಂ ಬಿ.ಎಸ್.ಯಡಿಯೂರಪ್ಪ
ಕಾಂಗ್ರೆಸ್ ಪಾಲಿಗೆ ಇದು ಅತ್ಯಂತ ಕೆಟ್ಟ ಫಲಿತಾಂಶ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭವಿಷ್ಯ ಸುಳ್ಳಾಗಿದೆ - ಸಚಿವ ಆರ್.ಅಶೋಕ್
ಹೊಸಕೋಟೆಯಲ್ಲಿ ಕೂಡಾ ಬಿಜೆಪಿ ಗೆಲುವು ದಾಖಲಿಸಬೇಕಿತ್ತು, ನಮ್ಮ ಪಕ್ಷದವರೇ ದ್ರೋಹ ಮಾಡಿದ್ದಕ್ಕೆ ಸೋಲು ಕಂಡಿದ್ದೇವೆ - ಸಚಿವ ಆರ್.ಅಶೋಕ್
ಕಾಂಗ್ರೆಸ್ ನಲ್ಲಿ ನಾಯಕರ ಮಧ್ಯೆ ಹೊಂದಾಣಿಕೆಯಿಲ್ಲ, ಕಾರ್ಯಕರ್ತರಲ್ಲಿ ಉತ್ಸಾಹ ಇರಲಿಲ್ಲ. ನಮ್ಮ ಪಕ್ಷದಲ್ಲಿ ಈ ರೀತಿಯ ಕೊರತೆ ಇರಲಿಲ್ಲ - ಸಚಿವ ಆರ್.ಅಶೋಕ್
ಸ್ಥಿರ ಸರ್ಕಾರಕ್ಕಾಗಿ ರಾಜ್ಯದ ಜನರು ಮತದಾನ ಮಾಡಿದ್ದಾರೆ. ಬಹು ವರ್ಷಗಳ ನಂತರ ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ- ಅರವಿಂದ್ ಲಿಂಬಾವಳಿ
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಹಿನ್ನೆಲೆಯಲ್ಲಿ ಕೃತಜ್ಞತಾ ಸಭೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಾಂಗ್ರೆಸ್ ಹೈಕಮಾಂಡ್ ಗೆ ರಾಜೀನಾಮೆ ಪತ್ರ ರವಾನಿಸಿದ ಈಶ್ವರ್ ಖಂಡ್ರೆ, ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ
ಕೆಪಿಸಿಸಿ ಕಾರ್ಯಾಧ್ಯಕ್ಷರ ಸ್ಥಾನಕ್ಕೆ ಈಶ್ವರ ಖಂಡ್ರೆ ರಾಜೀನಾಮೆ ಘೋಷಣೆ, ಇಂದು ಸಂಜೆ 5.30ಕ್ಕೆ ಸುದ್ದಿಗೋಷ್ಠಿ
ಹೈಕಮಾಂಡ್ ನನ್ನ ಮೇಲೆ ನಂಬಿಕೆ ಇಟ್ಟಿತ್ತು
ಹೈಕಮಾಂಡ್ ನನ್ನ ಮೇಲೆ ನಂಬಿಕೆ ಇಟ್ಟಿತ್ತು, ನನಗೆ ವಹಿಸಿದ್ದ ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಕೂಡ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ-ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್ ರಾಜೀನಾಮೆ
ಉಪ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ- ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ
ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ, ಫಲಿತಾಂಶ ನೋಡಿ ನಮ್ಮ ನಿರೀಕ್ಷೆ ಹುಸಿಯಾಗಿದೆ. ನಮ್ಮ ನಾಯಕರೂ ಪ್ರಚಾರ ಮಾಡಿದ್ದರು. ಜನತೆ ಒಳ್ಳೆಯ ತೀರ್ಪು ನೀಡುತ್ತೆ ಎಂಬ ನಿರೀಕ್ಷೆ ಇತ್ತು. ಆದರೆ ಹುಸಿಯಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟಿದ್ದಾರೆ.












Click it and Unblock the Notifications