ಬೆಂಗಳೂರು, ನವೆಂಬರ್ 23: ಕರ್ನಾಟಕದ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ 2024ರ ನವೆಂಬರ್ 13ರಂದು ನಡೆದಿದೆ. ಇಂದು ನೆವೆಂಬರ್ 23ರಂದು ಶನಿವಾರ ಚುನಾವಣೆ ಫಲಿತಾಂಶ ಹೊರ ಬೀಳಲಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಕಾಂಗ್ರೆಸ್ ಪಕ್ಷ ತೀವ್ರ ಪೈಪೋಟಿ ಒಡ್ಡಿದ್ದು, ಯಾರಿಗೆ ಅಧಿಕಾರ ಸಿಗಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುತ್ತದೆ.
ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು ಹಾಗೂ ಸಂಡೂರಿನಲ್ಲಿ 76.24ರಷ್ಟು ಮತದಾನ ನಡೆದಿದೆ. ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ (ಚನ್ನಪಟ್ಟಣ), ಭರತ್ ಬೊಮ್ಮಾಯಿ ವಿರುದ್ಧ ಯಾಸಿರ್ ಖಾನ್ ಪಠಾಣ್ (ಶಿಗ್ಗಾವಿ), ಬಂಗಾರು ಹನುಮಂತು ವಿರುದ್ಧ ಅನ್ನಪೂರ್ಣ (ಸಂಡೂರು) ಸ್ಪರ್ಧಿಸಿದ್ದಾರೆ. ಮತದಾರರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂದು ಇಂದು ತಿಳಿಯಲಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗೆ 'ಒನ್ ಇಂಡಿಯಾ ಕನ್ನಡ' ವೀಕ್ಷಿಸಬಹುದು.
Nov 24, 2024, 11:23 am IST
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿ.ಪಿ.ಯೋಗೇಶ್ವರ್ ಪತ್ನಿ ಅವರಿಂದು ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ
Nov 24, 2024, 1:07 am IST
ನಿಖಿಲ್ ಸೋಲಿನಿಂದಾಗಿ ರಾಮನಗರದಲ್ಲಿ ಜೆಡಿಎಸ್ ಬಲ ಸಂಪೂರ್ಣ ಇಲ್ಲವಾಗಿದೆ. ಸದ್ಯ ದೇವೇಗೌಡರ ಕುಟುಂಬಕ್ಕೆ ಕಾಂಗ್ರೆಸ್ ಗೇಟ್ ಪಾಸ್ ನೀಡಿದೆ. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗುವ ಮೂಲಕ ಹಿಡಿತ ಸಾಧಿಸಿದೆ.
Nov 24, 2024, 12:17 am IST
ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿದ ಸಿ.ಪಿ.ಯೋಗೇಶ್ವರ್ ಅವರನ್ನು ಸಚಿವ ಸಂತೋಷ್ ಲಾಡ್ ಹೂಗುಚ್ಛ ನೀಡಿ ಅಭಿನಂದಿಸಿದರು.
Nov 23, 2024, 10:59 pm IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವಿವರ
ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್ಖಾನ್ ಒಟ್ಟು 1,00,756 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಭರತ್ ಬೊಮ್ಮಾಯಿ ಅವರನ್ನು 13,448 ಮತಗಳ ಅಂತದಲ್ಲಿ ಸೋಲಿಸಿದ್ದಾರೆ.
ಮತಗಳ ವಿವರ:
ಪಠಾಣ್ ಯಾಸಿರ್ ಅಹ್ಮದ್ಖಾನ್- 1,00,756
ಭರತ್ ಬೊಮ್ಮಾಯಿ- 87,308
ಅಂತರ- 13,448
Nov 23, 2024, 10:42 pm IST
ಸಂಡೂರು ವಿಧಾನಸಭಾ ಕ್ಷೇತ್ರದ ವಿವರ
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಈ ತುಕಾರಾಮ್ ಗೆಲುವು ಸಾಧಿಸಿದ್ದಾರೆ. ಅನ್ನಪೂರ್ಣ ಈ ತುಕಾರಾಮ್ 93,616 ಮತಗಳನ್ನು ಪಡೆದುಕೊಂಡಿದ್ದು, ಬಿಜೆಪಿಯ ಬಂಗಾರು ಹನುಮಂತು ಅವರನ್ನು 9,649 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಮತಗಳ ವಿವರ:
ಅನ್ನಪೂರ್ಣ ಈ ತುಕಾರಾಮ್-93,616
ಬಂಗಾರು ಹನುಮಂತು- 83,967
ಅಂತರ- 9,649- Live
Nov 23, 2024, 10:26 pm IST
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವಿವರ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. 20 ಸುತ್ತಿನಲ್ಲಿ ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಒಟ್ಟು 1,12,642 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಸಾಧಿಸಿದ್ದಾರೆ. ಈ ಮೂಲಕ 25,413 ಮತಗಳ ಅಂತರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಮತ್ತೊಮ್ಮೆ ಸೋಲುಣಿಸಿದ್ದಾರೆ.
ಮತಗಳ ವಿವರ:
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್- 1,12,642
ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ-87,229
ಅಂತರ- 25,413
Nov 23, 2024, 9:53 pm IST
ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿ ಕೆಲಸಗಳು ಹಾಗೂ ಜನಪರ ಆಡಳಿತವನ್ನು ಬೆಂಬಲಿಸುವ ಮೂಲಕ ರಾಜ್ಯದ ಸರ್ವತೋಮುಖದ ಅಭಿವೃದ್ಧಿಗೆ ಮತ ನೀಡಿರುವುದು ಖುಷಿಯ ಸಂಗತಿ. ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿ, ಯಾಸೀರ್ ಅಹಮದ್ ಖಾನ್ ಪಠಾಣ್ ಅವರಿಗೆ ಮತ ನೀಡಿದ ಶಿಗ್ಗಾಂವಿ-ಸವಣೂರು ಕ್ಷೇತ್ರದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
Nov 23, 2024, 9:18 pm IST
ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಜನತೆಯ ಬೆಂಬಲ ಹೆಚ್ಚಾಗಿದೆ ಎಂಬುದಕ್ಕೆ ಇಂದಿನ ಉಪಚುನಾವಣೆಯ ಫಲಿತಾಂಶಗಳೇ ಸಾಕ್ಷಿ. ಶಿಗ್ಗಾಂವಿ-ಸವಣೂರ, ಸಂಡೂರು, ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಶ್ರಮಿಸಿದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ಗ್ಯಾರಂಟಿ ಸರ್ಕಾರದ ಗೆಲುವು ಮುಂದುವರಿಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Nov 23, 2024, 8:58 pm IST
ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ, 40 ವರ್ಷ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಆದರೆ, ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ ಮುನ್ನೆಲೆಗೆ ತಂದ ಪ್ರತಿಪಕ್ಷಗಳ ನಡೆಗೆ ಜನಾಕ್ರೋಶ ಮೂರು ಉಪ ಚುನಾವಣೆಯಲ್ಲಿ ಹೊರಬಿದ್ದಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಎಚ್.ಆಂಜನೇಯ ಹೇಳಿದ್ದಾರೆ
Nov 23, 2024, 8:11 pm IST
ಉಪ ಚುನಾವಣೆಯಲ್ಲಿ ಜನ ಆಡಳಿತಾರೂಢ ಪಕ್ಷಕ್ಕೆ ಜೈಕಾರ ಹಾಕುವುದು ಸಹಜ. ಜೊತೆಗೆ ರಾಜ್ಯದಲ್ಲಿ ಹಣ, ಹೆಂಡ ಮತ್ತು ಸರ್ಕಾರಿ ಮಶಿನರಿಗಳ ಅವ್ಯಾಹತ ಬಳಕೆ ಈ ಫಲಿತಾಂಶಕ್ಕೆ ಕಾರಣ ಎಂದು ಕರ್ನಾಟಕದ ಉಪಚುನಾವಣೆ ಫಲಿತಾಂಶದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.
Nov 23, 2024, 8:04 pm IST
ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದಿದೆ, ಸಿಪಿ ಯೋಗೇಶ್ವರ್ ಕ್ಷೇತ್ರದಲ್ಲಿ ಬಹಳ ಶ್ರಮ ಪಟ್ಟಿದ್ದಾರೆ. ಡಿಕೆ ಶಿವಕುಮಾರ್ ಜೊತೆ ಎರಡು ವಾರ ಕೆಲಸ ಮಾಡಿದ್ದಾರೆ ಅವರ ಬದ್ಧತೆ ಅನುಕರಣೀಯವಾಗಿದೆ. ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ನಾಯಕರು ಇಲ್ಲಸಲ್ಲದ ಆರೋಪದ ನಡುವೆಯು ಈ ಚುನಾವಣೆಯು ಸಿದ್ದರಾಮಯ್ಯ ಅಹಿಂದದ ಪ್ರಶ್ನಾತೀತ ನಾಯಕ ಮತ್ತು ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.
Nov 23, 2024, 7:29 pm IST
ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರು ಉಪಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಶ್ರೀ ಸಿ.ಪಿ.ಯೋಗೇಶ್ವರ್, ಶ್ರೀ ಪಠಾಣ್ ಯಾಸಿರ್ ಮತ್ತು ಶ್ರೀಮತಿ ಅನ್ನಪೂರ್ಣ ತುಕಾರಾಂ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಭರ್ಜರಿ ಫಲಿತಾಂಶವು ಮೂರು ಕ್ಷೇತ್ರಗಳ ಜನತೆ, ಮುಖಂಡರು ಹಾಗೂ ಕಾರ್ಯಕರ್ತರು ನಮ್ಮ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಗೆ ಪ್ರಬಲ ಸಾಕ್ಷಿಯಾಗಿದ್ದು, ನಮ್ಮ ಈ ಜನಪರ ಸರ್ಕಾರಕ್ಕೆ ಇನ್ನಷ್ಟು ‘ಶಕ್ತಿ’ ನೀಡಿದ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
Nov 23, 2024, 7:18 pm IST
ಮೂರು ಕ್ಷೇತ್ರಗಳ ಉಪಚುನಾವಣೆ ಬಳಿಕ ನಡೆದ ಚುನಾವಣೋತ್ತರ ಸಮೀಕ್ಷೆಗಳು ಇಲ್ಲಿ ಸುಳ್ಳಾಗಿವೆ. ಮೂರಕ್ಕೆ ಮೂರು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿಶ್ವಾಸವೂ ನಿಜವಾಗಿದೆ. ಅಲ್ಲಿಗೆ ಒಂದು ಹಂತದಲ್ಲಿ ವಿಪಕ್ಷಗಳಿಗೆ ನಾವು ಇನ್ನಷ್ಟು ಗಟ್ಟಿಯಾಗಿದ್ದೇವೆ ಎಂಬುದನ್ನು ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ತೋರಿಸಿದೆ.
Nov 23, 2024, 5:36 pm IST
ತೀವ್ರ ಕುತೂಹಲ ಮೂಡಿಸಿದ್ದ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ಕರ್ನಾಟಕದ ಮಹಾಜನತೆಗೆ ಧನ್ಯವಾದಗಳು. ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳು. ಇದೇ ವೇಳೆ ಕಾಂಗ್ರೆಸ್ ಪಕ್ಷದ ಎಲ್ಲ ಮೂರೂ ಅಭ್ಯರ್ಥಿಗಳನ್ನು ಗೆಲ್ಲಿಸಿ, ಜನಪರ ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಸೂಚಿಸಿರುವ ಕರ್ನಾಟಕದ ಮಹಾಜನತೆಗೆ ನನ್ನ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
Nov 23, 2024, 4:26 pm IST
ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ ಎಂದು ಸಿಎಂ ಸಿದ್ದರಾಮಯ್ಯ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ.
Nov 23, 2024, 4:11 pm IST
ನಿಖಿಲ್ಗೆ ಚುನಾವಣಾ ಕುರುಕ್ಷೇತ್ರದಲ್ಲಿ ಅಭಿಮನ್ಯು ಪಾತ್ರವೇ ಆಗಿದೆ. ನಾವು ಅರ್ಜುನ ಪಾತ್ರಕ್ಕೆ ಹೋಗುತ್ತಾರೆ ಅಂತಾ ತಿಳಿದುಕೊಂಡಿದ್ದೇವು. ಮತ್ತೆ ಅಭಿಮನ್ಯು ಪಾತ್ರದಲ್ಲಿ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸೋಲಿನಿಂದ ಬಹಳ ನೋವಾಗುತ್ತಿದೆ. ಅವರು ಗೆಲ್ಲಬೇಕಿತ್ತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
Nov 23, 2024, 3:51 pm IST
ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು: ಆರ್.ಅಶೋಕ್
ಕರ್ನಾಟಕ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ಸರ್ಕಾರದ ಹಗರಣ ಬಯಲಿಗೆಳೆಯುವ ಕೆಲಸವನ್ನು ಬಿಜೆಪಿ ಮುಂದುವರಿಸಲಿದೆ ಎಂದು ಆರ್.ಅಶೋಕ್ ಪ್ರತಿಕ್ರಿಯಿಸಿದರು.
Nov 23, 2024, 2:54 pm IST
ಈ ಗೆಲುವು ಸರ್ಕಾರಕ್ಕೆ ಸರ್ಟಿಫಿಕೇಟ್ ಅಲ್ಲ: ಬೊಮ್ಮಾಯಿ
ಒಂದು ಕಾಲದಲ್ಲಿ 17 ಉಪ ಚುನಾವಣೆಯಲ್ಲಿ 13 ಕ್ಷೇತ್ರ ಗೆದ್ದಿದ್ದೇವು. ಈ ಸರ್ಕಾರದ ಕೆಲಸದ ಮೇಲೆ ಮತ ಬಂದಿದೆ ಅಂತೇನಿಲ್ಲ. ನಾವು ಉಪ ಚುನಾವಣೆಯಲ್ಲಿ ಅಷ್ಟು ಸ್ಥಾನ ಗೆದ್ದು ಅದಾದ ಮೇಲೆ ಸರ್ಕಾರ ಕಳೆದುಕೊಂಡಿದ್ದೇವು. ಹೀಗಾಗಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದ ಆಡಳಿತಕ್ಕೆ ಸರ್ಟಿಫಿಕೇಟ್ ಅಂತ ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
Nov 23, 2024, 2:49 pm IST
ವಿಜೇತರಿಗೆ, ಮತದಾರರಿಗೆ ಗೃಹ ಸಚಿವರ ಅಭಿನಂದನೆ
ರಾಜ್ಯದಲ್ಲಿ ನಡೆದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಅಭೂತಪೂರ್ವ ಜಯ ಗಳಿಸಿದಕ್ಕೆ ವಿಜೇತ ಅಭ್ಯರ್ಥಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅಭಿನಂದನೆ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಸಿ.ಪಿ.ಯೋಗೇಶ್ವರ, ಅನ್ನಪೂರ್ಣ ತುಕರಾಂ ಮತ್ತು ಯಾಸೀರ್ ಖಾನ್ ಪಠಾಣ್ ವಿಜೇತರಾಗಿದ್ದಾರೆ.
ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರದ ಕಾರ್ಯವೈಖರಿಯನ್ನು ಸ್ಪಷ್ಟವಾಗಿ ಒಪ್ಪಿ, ಅಛಲವಾದ ವಿಶ್ವಾಸವಿಟ್ಟು ಪಕ್ಷದ ಅಭ್ಯರ್ಥಿಗಳ ಕೈ ಹಿಡಿದಿರುವ ಮತದಾರರಿಗೆ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.
Nov 23, 2024, 2:40 pm IST
ಕಾಂಗ್ರೆಸ್ ವಿಜೇತ ಪಠಾಣ್ಗೆ ಬೊಮ್ಮಾಯಿ ಅಭಿನಂದನೆ
ಶಿಗ್ಗಾವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಬಂದ ಫಲಿತಾಂಶವನ್ನು ಸ್ವೀಕಾರ ಮಾಡುವೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುವೆ. ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಶಾಸಕರು ಜನ ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
Nov 23, 2024, 2:31 pm IST
ಸಂಡೂರು ಗೆಲುವು: ತುಕಾರಾಂ ಪ್ರತಿಕ್ರಿಯೆ
ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಳಿಕ ಸಂಸದ ಈ ತುಕಾರಾಂ ಅವರು ಪಕ್ಷದ ಎಲ್ಲ ಹೈಕಮಾಂಡ್ ನಾಯಕರಿಗೂ ಅಭಿನಂದನೆ ತಿಳಿಸಿದ್ದಾರೆ. ಸಿಎಂ, ಡಿಸಿಎಂ ಸೇರಿ ಹಲವು ಸಚಿವರು ನಮ್ಮ ಪರವಾಗಿ ಪ್ರಚಾರ ಮಾಡಿದ್ದಾರೆ. ಅನ್ನಪೂರ್ಣ ತುಕಾರಂ ಮೇಲೆ ವಿಶ್ವಾಸವಿಟ್ಟು ಜನರು ಆಶಿರ್ವಾದ ಮಾಡಿದ್ದಾರೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
Nov 23, 2024, 2:29 pm IST
ಕೊನೆಯ ಹಂತದ ಬೆಳವಣಿಗೆಯಲ್ಲಿ ಹದಿನೆಂಟು ದಿನಗಳ ತನ್ನ ಚುನಾವಣಾ ಪ್ರಚಾರದಲ್ಲಿ ಪ್ರತಿ ಹಳ್ಳಿಗಳಲ್ಲೂ ಜನರು ಬಹಳ ಪ್ರೀತಿ ವಾತ್ಸಲ್ಯ ತೋರಿಸಿದ್ದಾರೆ. 86 ಸಾವಿರಕ್ಕಿಂತಲೂ ಹೆಚ್ಚು ಮತಗಳು ನನಗೆ ಕೊಟ್ಟಿದ್ದಾರೆ. ಚುನಾವಣೆಗಳಲ್ಲಿ ತೀರ್ಪು ತೆಗೆದುಕೊಳ್ಳುವ ಶಕ್ತಿ ಜನರಿಗೆ ಮಾತ್ರ ಇರುವುದು. ಅಂತಿಮವಾಗಿ ಜನರು ತೀರ್ಮಾನ ಮಾಡಿದ್ದಾರೆ. ಅದಕ್ಕೆ ನಾನು ತಲೆ ಬಾಗುತ್ತೇನೆ. ಹಾಗೂ ನನ್ನ ಪರವಾಗಿ ಪ್ರಚಾರ ನಡೆಸಿದ ಕಾರ್ಯಕರ್ತರಿಗೂ ಹಾಗೂ ಬೆಂಬಲ ನೀಡಿದ ಮಾಧ್ಯಮಗಳಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಚನ್ನಪಟ್ಟಣ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ
Nov 23, 2024, 1:27 pm IST
ನನ್ನ ಮೇಲೆ ವಿಶ್ವಾಸ ಇಟ್ಟು ಗೆಲ್ಲಿಸಿದ ಜನರಿಗೆ ಧನ್ಯವಾದಗಳು. ಸರ್ಕಾರದ ಗ್ಯಾರೆಂಟಿ ಯೋಜನೆ, ಅಭಿವೃದ್ಧಿಗಳು ಕ್ಷೇತ್ರದಲ್ಲಿ ಕೈ ಹಿಡಿದಿವೆ ಎಂದು ಬಳ್ಳಾರಿಯಲ್ಲಿ ಭರ್ಜರಿ ಗೆಲುವಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಪ್ರತಿಕ್ರಿಯಿಸಿದರು.
Nov 23, 2024, 1:05 pm IST
ಶಿಗ್ಗಾವಿ ಮತ ಎಣಿಕೆ ಪೂರ್ಣ: ಕಾಂಗ್ರೆಸ್ ಗೆಲುವು
ಶಿಗ್ಗಾವಿ ವಿಧಾನಸಭಾ ಚುನಾವಣೆ ಹಿನ್ನೆಲೆ ಕೊನೆಯ 18ನೇ ಸುತ್ತು ಮತ ಎಣಿಕೆ ಮುಕ್ತಾಯವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರು ಒಡೆದಿದ್ದಾರೆ. ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಕಾಂಗ್ರೆಸ್ 13,448 ಅಂತರದಲ್ಲಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿಗೆ 86960 ಮತಗಳು ಬಂದರೆ, ಕಾಂಗ್ರೆಸ್ ಅಭ್ಯರ್ಥಿ 1,00,587 ಮತಗಳನ್ನು ದಾಖಲಿಸಿದ್ದಾರೆ.
Nov 23, 2024, 12:49 pm IST
ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಮತದಾರರಿಂದ ತಕ್ಕ ಉತ್ತರ: ಮಾಜಿ ಸಂಸದ ಡಿ.ಕೆ. ಸುರೇಶ್
Nov 23, 2024, 12:22 pm IST
'ಸ್ವಾರ್ಥ ಇತ್ತು ಹೀಗಾಗಿ ವರ್ಕೌಟ್ ಆಗಿಲ್ಲ' ಸಿಪಿ ಯೋಗೇಶ್ವರ್
'ಮೈತ್ರಿ ಪಕ್ಷದಲ್ಲಿ ಸ್ವಾರ್ಥ ಇತ್ತು. ಜನ ಅವರ ಕುಟುಂಬ ರಾಜಕಾರಣಕ್ಕೆ ತೆರೆ ಎಳೆದಿದ್ದಾರೆ, ಜೆಡಿಎಸ್ ಬಿಜೆಪಿ ಮೈತ್ರಿ ವರ್ಕೌಟ್ ಆಗಿಲ್ಲ. ಯಡಿಯೂರಪ್ಪ ತನ್ನ ಮಗ ಮತ್ತು ಕುಮಾರಸ್ವಾಮಿ ತನ್ನ ಮಗನನ್ನು ಬೆಳೆಸಬೇಕು ಅಂತ ಹೋರಾಡುತ್ತಿದ್ದಾರೆ. ಇವರ ಷಡ್ಯಂತ್ರದಿಂದ ನಾನು ಎನ್ಡಿಎ ಪಕ್ಷದಿಂದ ಹೊರ ಬರಬೇಕಾಯಿತು. ಆದರೆ ಕ್ಷೇತ್ರದ ಜನ ಹಾಗೂ ಕಾಂಗ್ರೆಸ್ ಪಕ್ಷ ನನ್ನನ್ನು ಕೈ ಬಿಡಲಿಲ್ಲ' ಎಂದು ಸಿಪಿ ಯೋಗೇಶ್ವರ್ ಹೇಳಿದರು.
Nov 23, 2024, 12:19 pm IST
ಶಿಗ್ಗಾವಿಯಲ್ಲಿ ಯಾಸಿರ್ ಖಾನ್ ಪಠಾನ್ 13,700ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಬಿಜೆಪಿಗೆ ಹೀನಾಲಯ ಸೋಲಾಗಿದೆ. ಮಾಜಿ ಸಿಎಂ ಪುತ್ರ ಮೊದಲ ಚುನಾವಣೆಯಲ್ಲಿಯೇ ಸೋಲಿನ ಅನುಭವ ಕಂಡಿದ್ದಾರೆ.
Nov 23, 2024, 12:15 pm IST
ಶಿಗ್ಗಾಂವಿಯಿಂದ ಕಾಲ್ಕಿತ್ತ ಭರತ್ ಬೊಮ್ಮಾಯಿ!
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನ ಹಾದಿಯಲ್ಲಿದೆ. ಇದರಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸ ಇತ್ತು. ಆದರೆ ಶಿಗ್ಗಾಂವಿ ಮತದಾರರು ಕಮಲ ಬಿಟ್ಟು ಕೈ ಹಿಡಿದಿದ್ದಾರೆ. ಇದರಿಂದಾಗಿ ಬೇಸರಗೊಂಡ ಭರತ್ ಬೊಮ್ಮಾಯಿ ಶಿಗ್ಗಾಂವಿಯಿಂದ ಹೊರಟಿರುವುದು ಕಂಡು ಬಂದಿದೆ.
Nov 23, 2024, 12:15 pm IST
ಉಪಚುನಾವಣೆ ಕಾಂಗ್ರೆಸ್ ಗೆಲುವಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಸ, ಇದು ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು. ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವು, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಹಳೆಯ ಮೈಸೂರು ಭಾಗ ಮತ್ತು ಸಮಗ್ರ ಕರ್ನಾಟಕದ ಅಭಿವೃದ್ಧಿಯ ಗೆಲುವು...#KarnatakaCongress
ಶಿಗ್ಗಾವಿ: ಕಾಂಗ್ರೆಸ್ ಪಕ್ಷ ಮುನ್ನಡೆ, ಬೈ ಬೈ ಬೊಮ್ಮಾಯಿ ಪೋಸ್ಟರ್
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಲವು ಕಾಂಗ್ರೆಸ್ ಪಕ್ಷದ ಸಚಿವ ಜಾರಕಿ ಹೋಳಿ, ಸಿದ್ದರಾಮಯ್ಯ ಹಲವು ನಾಯಕರ ಹೆಸರನ್ನು ಕೂಗುವ ಮೂಲಕ ಸಂಭ್ರಮಿಸಿದರು. ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಮತ್ತೊಂದೆಡೆ ಬಿಜೆಪಿ ವಿರುದ್ಧ ''BYE BYE ಬೊಮ್ಮಾಯಿ'' ಎಂದು ತಲೆಕೆಳಗಾದ ಬಿಜೆಪಿ ಬಾವುಟ ಪ್ರದರ್ಶಿಸಿದರು.
READ MORE
7:37 PM, 22 Nov
ಇಂದು ಶನಿವಾರ ಬೆಳಗ್ಗೆ 7 ಗಂಟೆಯಿಂದಲೇ ಕರ್ನಾಟಕ ಉಪ ಚುನಾವಣೆ ಮತ ಎಣಿಕೆ ಆರಂಭವಾಗಲಿದೆ. ಆರಂಭದಲ್ಲಿ ಪೋಸ್ಟಲ್ ಮತಗಳನ್ನು ಎಣಿಸುವ ಚುನಾವಣಾಧಿಕಾರಿಗಳು ಬಳಿಕ ಇವಿಎಂ ಯಂತ್ರಗಳ ಮತಗಳನ್ನು ಎಣಿಕೆ ಮಾಡಲಿದ್ದಾರೆ.
7:37 PM, 22 Nov
ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿದೆ. ಇಲ್ಲಿ ಇಬ್ಬರು ಕಳೆದ ಎರಡು ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳೇ ಆಗಿದ್ದಾರೆ.
7:38 PM, 22 Nov
2023ರಲ್ಲಿ ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ವಿಜೇತರು 2024ರ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿದು ಸಂಸತ್ಗೆ ಆಯ್ಕೆ ಆದ ಹಿನ್ನೆಲೆಯಲ್ಲಿ ಆ ಎರಡು ಕ್ಷೇತ್ರ ಹಾಗೂ ಸಂಡೂರು ಸೇರಿ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಿತು.
5:35 AM, 23 Nov
ಉಪ ಚುನಾವಣೆಯಲ್ಲಿ ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಮೂರು ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
5:45 AM, 23 Nov
ಕರ್ನಾಟಕ ಉಪ ಚುನಾವಣೆ ಕುರಿತು ಬುಧವಾರ ಎಕ್ಸಿಟ್ ಪೋಲ್ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ಎನ್ಡಿಎ ನೇತೃತ್ವದ ಬಿಜೆಪಿ-ಜೆಡಿಎಸ್ ಗೆಲ್ಲುವ ವಿಶ್ವಾಸ ಇದೆ ಎಂಬ ಫಲಿತಾಂಶ ನೀಡಲಾಗಿದೆ. ಇಂದು ರಾಜ್ಯ ಚುನಾವಣೆ ಆಯೋಗದಿಂದ ಅಧಿಕೃತ ಮಾಹಿತಿ ಸಿಗಲಿದೆ.
5:56 AM, 23 Nov
ಶಿಗ್ಗಾವಿ ಉಪ ಚುನಾವಣೆ ಮತ ಎಣಿಕೆಗೂ ಒಂದು ದಿನ ಮೊದಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಕುಟುಂಬ ಸಮೇತವಾಗಿ ಬೆಳಗಾವಿ ಜಿಲ್ಲೆ ಸವದತ್ತಿಯ ಶ್ರೀ ರೇಣುಕಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದರು. ತಾಯಿ ಯಲ್ಲಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದುಕೊಂಡೆವು ಎಂದು ಮಾಜಿ ಸಿಎಂ ತಿಳಿಸಿದ್ದಾರೆ.
ಇಂದು ಕೆಲವೇ ಕ್ಷಣಗಳಲ್ಲಿ ರಾಜ್ಯ ಉಪಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲಿದೆ. ಭರತ್ ಬೊಮ್ಮಾಯಿ-ಯಾಸಿರ್ ಖಾನ್ ಪಠಾಣ್, ಅನ್ನಪೂರ್ಣ-ಬಂಗಾರು ಹನುಮಂತು ಹಾಗೂ ಸಿಪಿ ಯೋಗೇಶ್ವರ್-ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.
6:23 AM, 23 Nov
ನವೆಂಬರ್ 13ರಂದು ನಡೆದ ಕರ್ನಾಟಕ ಉಪಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರದಲ್ಲಿ ಶೇ.88.81ರಷ್ಟು ಮತದಾನವಾಗಿದ್ದರೆ, ಶಿಗ್ಗಾವಿಯಲ್ಲಿ ಶೇ.80.72 ಮತ್ತು ಸಂಡೂರು ಕ್ಷೇತ್ರದಲ್ಲಿ ಶೇ.76.24ರಷ್ಟು ಮತದಾನ ಆಗಿದೆ. ಕ್ಷೇತ್ರದ ಜನರಲ್ಲಿ ಗೆಲುವು ಯಾರಿಗೆ ಸಿಗಲಿದೆ, ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಮನೆ ಮಾಡಿದೆ.
6:33 AM, 23 Nov
ಕಾಂಗ್ರೆಸ್ನ ಭದ್ರಕೋಟೆಯಾಗಿರುವ ಸಂಡೂರಿನಲ್ಲಿ ಈ ಬಾರಿಯೂ ಕೈವಶವಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಸಮೀಕ್ಷೆಗಳ ಪ್ರಕಾರ ಸಂಡೂರಿನಲ್ಲಿ ಕಾಂಗ್ರೆಸ್, ಚನ್ನಪಟ್ಟಣ ಜೆಡಿಎಸ್ ಹಾಗೂ ಶಿಗ್ಗಾಂವಿ ಬಿಜೆಪಿ ಪಾಲಾಗಲಿದೆ ಎಂದು ತಿಳಿಸಿವೆ. ಆದ್ರೆ, ಬಿಜೆಪಿ ನಾಯಕರು ಗೆಲುವಿನ ಆಶಾಭಾವನೆ ಹೊಂದಿದ್ದಾರೆ.
6:40 AM, 23 Nov
ಶಿಗ್ಗಾವಿಯಲ್ಲಿ ಮತದಾನ ಮಾಡಿದವರ ಸಂಖ್ಯೆ 1.91 ಲಕ್ಷ
ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾ ಹಣಿ ಏರ್ಪಟ್ಟಿತ್ತು. ಕ್ಷೇತ್ರದಲ್ಲಿ ಒಟ್ಟು 2,37,525 ಮತದಾರರ ಇದ್ದಾರೆ. ಅದರಲ್ಲಿ ಮತ ಚಲಾಯಿಸಿದ ಮತದಾರರ ಸಂಖ್ಯೆ 1,91,728ರಷ್ಟಿದೆ. ಅದರಲ್ಲಿ ಪುರುಷ ಮತದಾರರು 99,241 ಹಾಗೂ ಮತ ಚಲಾಯಿಸಿದ ಮಹಿಳಾ ಮತದಾರರು 92,485ರಷ್ಟಿದ್ದಾರೆ. ಒಟ್ಟು 80.72ರಷ್ಟು ಮತದಾನ ಆಗಿದೆ.
6:48 AM, 23 Nov
ಉಪಚುನಾವಣೆಯ ಮತದಾನ ಪ್ರಮಾಣ
ನವೆಂಬರ್ 13ರಂದು ನಡೆದ ಕರ್ನಾಟಕ ಉಪಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರದಲ್ಲಿ ಶೇ.88.81ರಷ್ಟು ಮತದಾನವಾಗಿದ್ದರೆ, ಶಿಗ್ಗಾವಿಯಲ್ಲಿ ಶೇ.80.72 ಮತ್ತು ಸಂಡೂರು ಕ್ಷೇತ್ರದಲ್ಲಿ ಶೇ.76.24ರಷ್ಟು ಮತದಾನ ಆಗಿದೆ. ಕ್ಷೇತ್ರದ ಜನರಲ್ಲಿ ಗೆಲುವು ಯಾರಿಗೆ ಸಿಗಲಿದೆ, ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಮನೆ ಮಾಡಿದೆ.
6:58 AM, 23 Nov
ಚನ್ನಪಟ್ಟಣ: ಲೋಕನೀತಿ ಎಕ್ಸಿಟ್ ಪೋಲ್ ರಿಸಲ್ಟ್ ಪ್ರಕಟ
ಚನ್ನಪಟ್ಟಣ ಉಪಚುನಾವಣೆ 2024ರ ಕುರಿತು ಲೋಕನೀತಿ (CSDS) ಚುನಾವಣೋತ್ತರ ಸಮೀಕ್ಷೆ ನಡೆಸಿದೆ. ಇದರಲ್ಲಿ ತಮ್ಮ ಮತದ ಬಗ್ಗೆ ಮಾತಾಡದ ಕ್ಷೇತ್ರದ ಶೇಕಡಾ 13 ಪ್ರತಿಶತ ಮತದಾರರಿಂದಲೇ ಇಲ್ಲಿನ ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ ಎಂದು ತಿಳಿಸಲಾಗಿದೆ.
7:11 AM, 23 Nov
ಸಂಡೂರು: 19 ಸುತ್ತುಗಳಲ್ಲಿ ಮತ ಎಣಿಕೆ
ಇಂದು ಸಂಡೂರು ಉಪಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಬಾರಿ ಶೇಕಡಾ 76.2 ರಷ್ಟು ಮತದಾನವಾಗಿದೆ. ಸ್ಟ್ರಾಂಗ್ ರೂಂ ನಲ್ಲಿ 253 ಮತಗಟ್ಟೆಗಳ ಮತಯಂತ್ರಗಳಿವೆ. ಬೆಳಗ್ಗೆ 07 ಗಂಟೆಗೆ ಸ್ಟ್ರಾಂಗ್ ರೂಂ ಓಪನ್ ಮಾಡಲಿರುವ ಸಿಬ್ಬಂದಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಿಸಲಿದ್ದಾರೆ. ಒಟ್ಟು ಒಟ್ಟು 19 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.
7:16 AM, 23 Nov
ಸಂಡೂರು ವಿಧಾನಸಭೆ ಉಪ ಚುನಾವಣೆ ಮತ ಎಣಿಕೆ ಇಂದು ನಡೆಯಲಿದೆ. ಬಳ್ಳಾರಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಮತ್ತು ಇಟಿಪಿಬಿಎಸ್ 4 ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಉಪ ಚುನಾವಣೆಯ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ರಾಜೇಶ್ ಹೆಚ್. ಡಿ. ಹೇಳಿದ್ದಾರೆ. ಒಟ್ಟು 6 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
7:21 AM, 23 Nov
ಸಂಡೂರು: ಬಳ್ಳಾರಿಯಲ್ಲಿ ಇಂದು ಮದ್ಯ ನಿಷೇಧ
ಸಂಡೂರು ಕ್ಷೇತ್ರ ಮತ ಎಣಿಕೆ ಕ್ಷೇಂದ್ರದಲ್ಲಿ 15 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ ನಿಯೋಜನೆಗೊಂಡಿದ್ದಾರೆ. ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿದ್ದು, ಅಗತ್ಯ ಪೊಲೀಸ್ ಇಬ್ಬಂದಿ ನಿಯೋಜನೆಗೊಂಡಿದ್ದರೆ.
7:34 AM, 23 Nov
ಶಿಗ್ಗಾವಿ: ಮತ ಎಣಿಕೆ ಪ್ರಕ್ರಿಯೆ ಹೇಗಿದೆ
ಶಿಗ್ಗಾವಿ ಮತ ಎಣಿಕೆಯು ಹಾವೇರಿ ತಾಲೂಕು ದೇವಗಿರಿ ಗ್ರಾಮದ ಬಳಿಯ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದೆ. ಬೆಳಿಗ್ಗೆ 7.30 ಕ್ಕೆ ಸ್ಟ್ರಾಂಗ್ ರೂಂ ಓಪನ್ ಆಗಲಿದ್ದು, ಬೆಳಿಗ್ಗೆ 8 ಗಂಟೆಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಬಳಿಕ ಇವಿಎಂ ಮತ ಎಣಿಕೆ ಆರಂಭವಾಗಲಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆಗಾಗಿ ಒಟ್ಟು 14 ಟೇಬಲ್ ನಿಗದಿ ಮಾಡಲಾಗಿದೆ. ಅಗತ್ಯ ಸಿಬ್ಬಂದ ನಿಯೋಜಿಸಲಾಗಿದೆ.
7:34 AM, 23 Nov
ಸಂಡೂರು ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಬಿಜೆಪಿ ಅಭ್ಯರ್ಥಿ ಬಂಗಾರಿ ಹನುಮಂತ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತ ಎಣಿಕೆ ಕೇಂದ್ರದ ಬಳಿ ಮಾತನಾಡಿದ ಅವರು, ಸಂಡೂರು ಕ್ಷೇತ್ರದ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಬಿಜೆಪಿ ನಾಯಕರು ಈ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸಿದ್ದೇವೆ. ಕಾಂಗ್ರೆಸ್ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಸಿದೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ದಿನ ಕ್ಷೇತ್ರದಲ್ಲಿ ಇದ್ದರು.
14 ವರ್ಷಗಳ ಬಳಿಕ ಜನಾರ್ಧನರೆಡ್ಡಿ ಜಿಲ್ಲೆಗೆ ಬಂದಿರುವುದು ನಮಗೆ ಅನುಕೂಲ ಆಗಿದೆ ಎಂದಿದ್ದಾರೆ.
8:05 AM, 23 Nov
ಸಂಡೂರು: ಬಿಜೆಪಿ ಗೆದ್ದೆ ಗೆಲ್ಲಲಿದೆ
ಸಂಡೂರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ದಿನ ವಾಸ್ತವ್ಯ ಹೂಡಿದ್ದರು. 14 ವರ್ಷಗಳ ಬಳಿಕ ಜನಾರ್ಧನರೆಡ್ಡಿ ಜಿಲ್ಲೆಗೆ ಬಂದಿರುವುದು ನಮಗೆ ಅನುಕೂಲ ಆಗಿದೆ. ಜನಾರ್ಧನರೆಡ್ಡಿ ಶ್ರೀರಾಮುಲು ಕೆಎಸ್ ದಿವಾಕರ್ ಸೇರಿ ರಾಜ್ಯ ನಾಯಕರು ಸಾಕಷ್ಟು ಪ್ರಚಾರ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದೆ ಗೆಲ್ಲಲಿದೆ ಅನ್ನೋ ವಿಶ್ವಾಸ ಇದೆ ಎಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪ್ರತಿಕ್ರಿಯಿಸಿದ್ದಾರೆ.
8:09 AM, 23 Nov
ಭರತ್ ಬೊಮ್ಮಾಯಿ ಆಗಮನ: ಮತ ಎಣಿಕೆ ಶುರು
ಶಿಗ್ಗಾವಿ ಉಪ ಚುನಾವಣೆಯ ಮತ ಎಣಿಕೆ ಆರಂಭ. ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ. ಬಿಜೆಪಿ ಪಕ್ಷದ ಕೌಂಟಿಂಗ್ ಏಂಜಟರ್ ಜೊತೆಗೆ ಮಾತುಕತೆ ನಡೆಸಿದರು. ಅಭ್ಯರ್ಥಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಮಾಡಲಾಯಿತು.
8:22 AM, 23 Nov
ಆರಂಭಿಕ ಹಂತದಲ್ಲಿ ಸಂಡೂರಿನಲ್ಲಿ ಅನ್ನಪೂರ್ಣ ಮುನ್ನಡೆ
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಈ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರ ಹನುಮಂತು, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎನ್. ಅಂಜಿನಪ್ಪ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿ ಟಿ.ಎಂ. ಮಾರುತಿ, ಟಿ. ಎರಿಸ್ವಾಮಿ, ಎನ್. ವೆಂಕಣ್ಣ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸಂಡೂರಿನಲ್ಲಿ ಮತ ಎಣಿಕೆ ಆರಂಭವಾಗಿದ್ದು ಸಂಜೆ ವೇಳೆಗೆ ಸ್ಪಷ್ಟ ಫಲಿತಾಂಶ ಹೊರಬೀಳಲಿದೆ.
8:22 AM, 23 Nov
ಚನ್ನಪಟ್ಟಣದಲ್ಲಿ ನಿಖಿಲ್ ಮುನ್ನಡೆ
ಅಂಚೆಮತ ಏಣಿಕೆಯಲ್ಲಿ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮುನ್ನಡೆಯನ್ನ ಸಾಧಿಸಿದ್ದಾರೆ.
8:28 AM, 23 Nov
ಅಂಚೆ ಮತಗಳಲ್ಲಿ ಕಾಂಗ್ರೆಸ್ ಮುನ್ನಡೆ, ಇವಿಎಂ ಮತ ಎಣಿಕೆ ಆರಂಭ
ಸಂಡೂರು ಉಪಚುನಾವಣೆ ಮತ ಎಣಿಕೆ ಪ್ರಾರಂಭವಾಗಿದೆ. ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಅಂಚೆ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ಗೆ ಮುನ್ನಡೆಯಾಗಿದೆ. ಇವಿಎಂ ಮತ ಎಣಿಕೆ ಆರಂಭವಾಗಿದೆ.
ಒಟ್ಟು 14 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. 19 ಸುತ್ತುಗಳಲ್ಲಿ ಮತ ಎಣಿಕೆ ನಡೆಯಲಿದೆ.
8:36 AM, 23 Nov
ಶಿಗ್ಗಾವಿ: ಭರತ್ ಬೊಮ್ಮಾಯಿ ಮುನ್ನಡೆ
ಶಿಗ್ಗಾವಿಯಲ್ಲಿ ಇವಿಎಂ ಮತ ಎಣಿಕೆ ಆರಂಭವಾದ ಬೆನ್ನಲ್ಲೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಮುನ್ನಡೆ ಸಾಧಿಸಿದ್ದಾರೆ
8:43 AM, 23 Nov
ನನಗೆ ಆತ್ಮವಿಶ್ವಾಸವಿದೆ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ಜನತೆ ಕೈ ಹಿಡಿಯುತ್ತಾರೆ ಎಂಬ ಆತ್ಮವಿಶ್ವಾಸವಿದೆ. ಇವತ್ತು ನನ್ನ ಹೋರಾಟಕ್ಕೆ ಪ್ರತಿಫಲ ಸಿಗುವ ವಿಶ್ವಾಸವಿದೆ ಎಂದು ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.
8:55 AM, 23 Nov
ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ಫಲಿತಾಂಶ ಬೆನ್ನಲ್ಲೆ ಇಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜೆಪಿ ನಗರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, 'ನಾವು ಇನ್ನೂ ತುಂಬಾ ದೂರ ಹೋಗುವುದು ಇದೆ. ಚುನಾವಣೆಗೂ ಮುಂಚೆ ನಾನು ಒಂದು ಮಾತನ್ನು ಹೇಳಿದ್ದೇ. ಗೆಲುವಿನ ಆತ್ಮವಿಶ್ವಾಸ ನನಗೆ ಇದೆ. ಚನ್ನಪಟ್ಟಣ ಜನ ನನ್ನ ಕೈಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ. ಚನ್ನಪಟ್ಟಣದ ಮತದಾರರು ಆತ್ಮವಿಶ್ವಾಸ ಮೂಡಿಸಿದ್ದಾರೆ. ಗೆಲ್ಲುವ ವಿಶ್ವಾಸ ನನಗಿದೆ' ಎಂದು ಹೇಳಿದರು
9:03 AM, 23 Nov
ಶಿಗ್ಗಾವಿಯಲ್ಲಿ ಎರಡು ಸುತ್ತುಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಇದೀಗ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರು 1973 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
9:10 AM, 23 Nov
ಕರ್ನಾಟಕ ವಿಧಾನಸಭೆಯ 3 ಕ್ಷೇತ್ರಗಳ ಉಪಚುನಾವಣೆಯ ಮತದಾನದ ಶೇಕಡವಾರು ವಿವರ ಇಲ್ಲಿದೆ