ಉಪಚುನಾವಣೆ; ಜೆಡಿಎಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ: ಹೆಚ್ ಡಿ ರೇವಣ್ಣಗೆ ಕೊಕ್
ಬೆಂಗಳೂರು , ಅಕ್ಟೋಬರ್ 31: ರಾಜ್ಯದಲ್ಲಿ ಮೂರು ಕ್ಷೇತ್ರ ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಮಾಡಿದೆ. ಮೂರು ಕ್ಷೇತ್ರಗಳ ಪೈಕಿ ಜೆಡಿಎಸ್ ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನ ಕಣಕ್ಕಿಳಿಸ್ದು, ಈ ಒಂದು ಕ್ಷೇತ್ರದ ಚುನಾವಣೆಗಾಗಿ ನಲವತ್ತು ಜನರ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ರಾಜ್ಯ ಜೆಡಿಎಸ್ ನಾಯಕರ ಪೈಕಿ ಬಹುತೇಕ ಎಲ್ಲರ ಹೆಸರೂ ಈ ಪಟ್ಟಿಯಲ್ಲಿದೆ. ಆದರೆ, ಪ್ರಮುಖವಾಗಿ, ಹಳೇ ಮೈಸೂರು ಭಾಗದ ಇಬ್ಬರು ನಾಯಕರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. 40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿಗೆ ಸ್ಥಾನ ನೀಡಲಾಗಿದ್ದು,ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ.

ಹಾಸನದ ಹೊಳೇನರಸೀಪುರ ಕ್ಷೇತ್ರದ ಶಾಸಕ ಮತ್ತು ಸಹೋದರರೂ ಆಗಿರುವ ಎಚ್.ಡಿ.ರೇವಣ್ಣ ಹೆಸರು ಪಟ್ಟಿಯಲ್ಲಿ ಅಚ್ಚರಿಯಾಗಿ ಕೈಬಿಡಲಾಗಿದೆ. ಅಲ್ಲದೇ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ, ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನವನ್ನು ಪಡೆದಿದ್ದಾರೆ.
ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಇದಕ್ಕೆ ಪ್ರಮುಖ ಕಾರಣವೆಂದರೇ, ಮುಡಾ ಹಗರಣದ ಕುರಿತು ಸಿದ್ದರಾಮಯ್ಯ ರಾಜೀನಾಮೆ ಕುರಿತು ಮಾತನಾಡಿದ ಜೆಡಿಎಸ್ ನಾಯಕ ಜಿ ಟಿ ದೇವೇಗೌಡ ಅವರು, ಕುಮಾರಸ್ವಾಮಿ ವಿರುದ್ಧವೇ ವಾಗ್ಧಾಳಿ ನಡೆಸಿ ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ್ದರು.
ಜಿಡಿಎಲ್ ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದರು. ದಸರಾ ಮಹೋತ್ಸವದಲ್ಲಿ ಮಾತನಾಡಿದ ಜಿ.ಟಿ. ದೇವೇಗೌಡ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಎಫ್ ಐಆರ್ ಆದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾ? ಎಂದು ಸಿಎಂ ಪರ ಮಾತನಾಡಿದ್ದರು. ಹೀಗಾಗಿ ಜಿಟಿ ದೇವೇಗೌಡರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರ ಹೆಸರನ್ನು ಕೈಬಿಟ್ಟಿದ್ದರೂ, ಜೆಡಿಎಸ್ ಹಿರಿಯ ನಾಯಕ ಜಿ ಟಿ ದೇವೇಗೌಡ ಪುತ್ರ ಹಾಗೂ ಹುಣಸೂರು ಶಾಸಕ ಹರೀಶ್ ಅವರಿಗೆ ಪಟ್ಟಿಯಲ್ಲಿ ಸ್ಥಾನವನ್ನ ಕಲ್ಪಿಸಿಕೊಡಲಾಗಿದೆ.
ಜೆಡಿಎಸ್ ಪ್ರಮುಖ ಸ್ಟಾರ್ ಪಟ್ಟಿ ಇಲ್ಲಿದೆ ನೋಡಿ
1. ಎಚ್.ಡಿ.ದೇವೇಗೌಡ
2. ಎಚ್.ಡಿ.ಕುಮಾರಸ್ವಾಮಿ
3. ಎಂ. ಮಲ್ಲೇಶ್ ಬಾಬು
4. ಸುರೇಶ್ ಬಾಬು ಸಿ.ಬಿ
5. ಅನಿತಾ ಕುಮಾರಸ್ವಾಮಿ
6. ಹರೀಶ್ ಗೌಡ
7. ಬಂಡೆಪ್ಪ ಕಾಶಾಂಪೂರ
8. ಸಾ.ರಾ.ಮಹೇಶ್
9. ಎಚ್.ಕೆ.ಕುಮಾರಸ್ವಾಮಿ
10. ಸಿ.ಎಸ್.ಪುಟ್ಟರಾಜು
11. ಡಾ.ಕೆ.ಅನ್ನದಾನಿ
12. ಸಮೃದ್ದಿ ಮಂಜುನಾಥ್
13. ಡಾ. ಟಿ.ಎ.ಸರವಣ
14. ಎಸ್.ಎಲ್.ಭೋಜೇಗೌಡ
15. ಸುರೇಶ್ ಗೌಡ
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications