ಆಗದ ಸಂಪುಟ ವಿಸ್ತರಣೆ: ಎಲ್ಲರ ಚಿತ್ತ ತ್ರಿಮೂರ್ತಿಗಳ ಮುಂದಿನ ಹೆಜ್ಜೆಯತ್ತ
ಸಚಿವ ಸಂಪುಟ ವಿಸ್ತರಣೆ ಇಂದು ಆಗಬಹುದು, ನಾಳೆ ಆಗಬಹುದು ಎಂದು ಕಾತುರದ ಕಣ್ಣಿನಿಂದ ಕಾಯುತ್ತಿದ್ದವರಿಗೆ ಭಾರೀ ನಿರಾಶೆಯಾಗಿದೆ. ಇನ್ನು, ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ತೀವ್ರ ಲಾಬಿ ನಡೆಸುತ್ತಿದ್ದವರೂ ಸುಮ್ಮನಾಗಬೇಕಿದೆ.
"ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್ ಅವರು ಸಂದೇಶವೊಂದನ್ನು ಹೊತ್ತು ತಂದಿದ್ದಾರೆ. ಆ ಸಂದೇಶ ಏನೆಂದು ನೋಡಿ, ಸಂಪುಟ ವಿಸ್ತರಣೆಯೋ, ಪುನರ್ ರಚನೆಯೋ ಎನ್ನುವುದರ ಬಗ್ಗೆ ನಿರ್ಧರಿಸಲಾಗುವುದು"ಎಂದು ಯಡಿಯೂರಪ್ಪ ಹೇಳಿದ್ದರು. ಇದರಿಂದ ಮತ್ತೆ ಸಂಪುಟ ವಿಸ್ತರಣೆಯ ಲಾಬಿ ವೇಗ ಪಡೆದಿತ್ತು.
ಸಂಪುಟ ವಿಸ್ತರಣೆಯ ವಿಚಾರ ರಾಜ್ಯ ಬಿಜೆಪಿಯಲ್ಲಿ ಮೂಲ ಮತ್ತು ವಲಸೆ ಎನ್ನುವ ಚರ್ಚೆಗೂ ನಾಂದಿ ಹಾಡಿತ್ತು. ನಾಯಕರ ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಆಗುತ್ತಿರುವುದನ್ನು ಅರಿತ ದೆಹಲಿಯ ನಾಯಕರು, ಸುಮ್ಮನಿರುವಂತೆ ಫರ್ಮಾನು ಹೊರಡಿಸಿದ್ದರು.
ದೆಹಲಿಯಿಂದ ಕಾರ್ಯಕಾರಿಣಿಗೆ ಆಗಮಿಸಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಸಂಪುಟ ವಿಸ್ತರಣೆಯ ವಿಚಾರದಲ್ಲಿ ಯಾವುದೇ ಸಂದೇಶ ನೀಡದೇ ಇದ್ದಿದ್ದರಿಂದ, ಈ ಪ್ರಕ್ರಿಯೆ ಸದ್ಯದ ಮಟ್ಟಿಗೆ ನೆನೆಗುದಿಗೆ ಬಿದ್ದಿದೆ. ಎಲ್ಲರ ಚಿತ್ತ ತ್ರಿಮೂರ್ತಿಗಳ ಮುಂದಿನ ಹೆಜ್ಜೆಯತ್ತ, ಯಾರೆಲ್ಲಾ ಅವರು?

ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ
ಸಚಿವ ಸಂಪುಟ ವಿಸ್ತರಣೆ ಎನ್ನುವುದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದರೂ, ಬಿಜೆಪಿಯಲ್ಲಿ ಅದನ್ನು ನಿರ್ಧರಿಸುವುದು ವರಿಷ್ಠರು. ಹಾಗಾಗಿ ಅವರ ಅನುಮತಿ ಅಗತ್ಯ, ಸದ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅನುಮತಿ ಸಿಕ್ಕಿಲ್ಲ"ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳುವ ಮೂಲಕ, ಆಕಾಂಕ್ಷಿಗಳಿಗೆ ಬರಸಿಡಿಲಿನಂತಹ ಸುದ್ದಿಯನ್ನು ನೀಡಿದ್ದರು.

ಸಚಿವ ಸ್ಥಾನಕ್ಕಾಗಿ ದಂಬಾಲು ಬೀಳುತ್ತಿದ್ದವರಲ್ಲಿ ಒಬ್ಬರಾದ ಎಚ್.ವಿಶ್ವನಾಥ್
ಆಪರೇಶನ್ ಕಮಲದ ಮೂಲಕ ಬಿಜೆಪಿ ಬಾಗಿಲಿಗೆ ಬಂದವರಲ್ಲಿ ಸಚಿವ ಸ್ಥಾನಕ್ಕಾಗಿ ದಂಬಾಲು ಬೀಳುತ್ತಿದ್ದವರಲ್ಲಿ ಒಬ್ಬರಾದ ಎಚ್.ವಿಶ್ವನಾಥ್ ಅವರ ವಿರುದ್ದ ಹೈಕೋರ್ಟ್ ತೀರ್ಪು ನೀಡಿದೆ. ಹಾಗಾಗಿ, ಸದ್ಯಕ್ಕೆ ಇವರು ರೇಸ್ ನಲ್ಲಿ ಇರಲಿಲ್ಲ. ಕೋರ್ಟ್ ತೀರ್ಪು ವಿರುದ್ದ ಮೇಲ್ಮನವಿ ಸಲ್ಲಿಸುವುದಾಗಿ ಬಿಜೆಪಿ ಹೇಳಿದ್ದರೂ, ಸಂಪುಟ ವಿಸ್ತರಣೆಯ ಸಾಧ್ಯತೆ ಸದ್ಯಕ್ಕೆ ಇಲ್ಲದೇ ಇರುವುದರಿಂದ, ಬಿಜೆಪಿ ಈ ವಿಚಾರದಲ್ಲಿ ಮುಂದಿನ ಹೆಜ್ಜೆಯಿಡುವ ಸಾಧ್ಯತೆ ಕಮ್ಮಿ.

ಎಂ.ಟಿ.ಬಿ ನಾಗರಾಜ್ ಅವರಂತೂ ಈ ವಿಚಾರವನ್ನು ಪ್ರಸ್ತಾವಿಸದ ದಿನವೇ ಇಲ್ಲ
ಇನ್ನು, ಎಂ.ಟಿ.ಬಿ ನಾಗರಾಜ್ ಅವರಂತೂ ಈ ವಿಚಾರವನ್ನು ಪ್ರಸ್ತಾವಿಸದ ದಿನವೇ ಇಲ್ಲ. "ನನ್ನನ್ನು ನೋಡಿದಾಗಲೆಲ್ಲಾ ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳುತ್ತಾರೆ. ಆದರೆ, ಇದ್ಯಾವುದು ನಡೆಯುವುದೇ ಇಲ್ಲ. ನಿಮಗೆ ಇಷ್ಟ ಬಂದವರಿಗೆ ಮಂತ್ರಿ ಸ್ಥಾನ ಕೊಡಿ"ಎಂದು ಪರೋಕ್ಷವಾಗಿ ಯಡಿಯೂರಪ್ಪ ಅವರನ್ನು ಟೀಕಿಸಿದ್ದರು.

ಉಪಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದ ಮುನಿರತ್ನ
ಇನ್ನು, ಉಪಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದ ಮುನಿರತ್ನ ಅವರು ಫಲಿತಾಂಶ ಬಂದಾಗಿನಿಂದ ಸಚಿವ ಸ್ಥಾನದ ಬಗ್ಗೆ ಮಾತನಾಡಲು ಆರಂಭಿಸಿದ್ದರು. "ಯಡಿಯೂರಪ್ಪನವರದ್ದು ಮಾತಿಗೆ ನಿಲ್ಲುವ ವ್ಯಕ್ತಿತ್ವ. ನನಗೆ ಈ ಹುದ್ದೆ ಬೇಕು, ಆ ಹುದ್ದೆ ಬೇಕೆಂದು ಒತ್ತಡ ಹೇರುವುದಿಲ್ಲ. ಕೊಟ್ಟ ಖಾತೆಯನ್ನು ನಿಭಾಯಿಸುತ್ತೇನೆ"ಎಂದು ಮುನಿರತ್ನ ಹೇಳಿದ್ದರು. ಇನ್ನೋರ್ವ ಮುಖಂಡ ಆರ್.ಶಂಕರ್ ಕೂಡಾ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಸರಕಾರ ಬರಲು ಕಾರಣರಾದ ಮೂವರು ವಲಸೆ ಹಕ್ಕಿಗಳು
ಸರಕಾರ ಬರಲು ಕಾರಣರಾದ ಮೂವರು ವಲಸೆ ಹಕ್ಕಿಗಳಿಗೆ ಆದ್ಯತೆಯಿಂದ ಸಚಿವ ಸ್ಥಾನ ನೀಡಬೇಕೆನ್ನುವ ಮುಖ್ಯಮಂತ್ರಿ ಯಡಿಯೂರಪ್ಪನವರ ಒತ್ತಡಕ್ಕೆ ಹೈಕಮಾಂಡ್ ಮಣಿದಿಲ್ಲ. ಇದರಿಂದಾಗಿ, ಸಚಿವ ಸಂಪುಟ ವಿಸ್ತರಣೆ ಸದ್ಯದ ಮಟ್ಟಿಗೆ ನೆನೆಗುದಿಗೆ ಬಿದ್ದಿದೆ. ಚುನಾವಣಾ ನೀತಿಸಂಹಿತೆ ಎನ್ನುವ ಕಾರಣವೂ ಇದೆ. ಹಾಗಾಗಿ, ಎಂ.ಟಿ.ಬಿ, ಮುನಿರತ್ನ ಮತ್ತು ಶಂಕರ್ ಅವರ ಮುಂದಿನ ಹೆಜ್ಜೆ ಏನಿರಬಹುದು ಎನ್ನುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications