Karnataka Cabinet Expansion Live : 10 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡ ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 06 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸಂಪುಟವನ್ನು ವಿಸ್ತರಣೆ ಮಾಡಿದರು. 10 ಶಾಸಕರು ಇಂದು ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಗೊಂಡರು.
ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯಿ ವಾಲ ನೂತನ ಸಚಿವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.
ಸಂಪುಟ ವಿಸ್ತರಣೆ; ಕೊನೆ ಕ್ಷಣದಲ್ಲಿ ಹೈಕಮಾಂಡ್ ಕೊಟ್ಟ ಟ್ವಿಸ್ಟ್!
10 ಶಾಸಕರು ಸಂಪುಟ ದರ್ಜೆ ಸಚಿವರಾಗಿ ಯಡಿಯೂರಪ್ಪ ಸಂಪುಟವನ್ನು ಗುರುವಾರ ಸೇರಿದರು. ಯಾವ ಸಚಿವರಿಗೆ ಯಾವ ಖಾತೆ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. 10 ಶಾಸಕರ ಸೇರ್ಪಡೆ ಬಳಿಕ ಯಡಿಯೂರಪ್ಪ ಸಂಪುಟದಲ್ಲಿ 6 ಸ್ಥಾನಗಳು ಖಾಲಿ ಉಳಿದಿವೆ.
ಮೂಲ ಬಿಜೆಪಿ ಶಾಸಕರಿಗೆ ಸಚಿವರಾಗುವ 'ಯೋಗ' ತಪ್ಪಿದ್ದು ಏಕೆ?
ಉಪ ಚುನಾವಣೆಯಲ್ಲಿ ಗೆದ್ದ 12 ಬಿಜೆಪಿ ಶಾಸಕರಲ್ಲಿ 10 ಜನರು ಯಡಿಯೂರಪ್ಪ ಸಂಪುಟಕ್ಕೆ ಸೇರಿದ್ದಾರೆ. ಉಪ ಚುನಾವಣೆಯಲ್ಲಿ ಗೆದ್ದರೂ ಅಥಣಿಯ ಮಹೇಶ್ ಕುಮಟಳ್ಳಿ ಮತ್ತು ರಾಣೆಬೆನ್ನೂರಿನ ಅರುಣ್ ಕುಮಾರ್ ಪೂಜಾರಿ ಸಂಪುಟಕ್ಕೆ ಸೇರ್ಪಡೆಗೊಂಡಿಲ್ಲ. ಮೂಲ ಬಿಜೆಪಿಯ ಯಾವ ಶಾಸಕರು ಸಹ ಸಂಪುಟಕ್ಕೆ ಇಂದು ಸೇರಿಲ್ಲ.