ಆ ಒಂದು ಹೆಸರೇ ನೂತನ ಸಂಪುಟದ ಅಂತಿಮ ಪಟ್ಟಿ ವಿಳಂಬವಾಗಲು ಕಾರಣ!
ಭಾನುವಾರ (ಆ 1) ಸಂಜೆ ಸಂಪುಟ ರಚನೆಯ ಸಂಬಂಧ ದೆಹಲಿಗೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಮಂಗಳವಾರ (ಆ 3) ತಡರಾತ್ರಿ. ಕೆಲವೊಂದು ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರಿಗೆ ಸ್ಪಷ್ಟತೆ ಇರದೇ ಇದ್ದ ಕಾರಣಕ್ಕಾಗಿ ಹಲವು ಸುತ್ತಿನ ಮಾತುಕತೆಗಳು ನಡೆದವು.
ಪೂರ್ವ ನಿಗದಿತ ಕಾರ್ಯಕ್ರಮದ ಪ್ರಕಾರ, ಸೋಮವಾರ ಮಧ್ಯಾಹ್ನವೇ ಬೊಮ್ಮಾಯಿಯವರು ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ, ಲೋಕಸಭಾ ಅಧಿವೇಶನದಿಂದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಭೇಟಿ ಸಿಎಂಗೆ ಸಾಧ್ಯವಾಗಿರಲಿಲ್ಲ.
ಕೆಲವೊಂದು ವಿಚಾರಗಳಿಗೆ ಸಲಹೆ ನೀಡಲು ಖುದ್ದು ನಡ್ಡಾ ಅವರಿಗೆ ಸಾಧ್ಯವಾಗದ ಹಿನ್ನಲೆಯಲ್ಲಿ ಅಮಿತ್ ಶಾ ಅವರನ್ನು ಮತ್ತೆ ಬೊಮ್ಮಾಯಿ ಕಾಣಬೇಕಾಯಿತು. ಮೂಲಗಳ ಪ್ರಕಾರ 24 ಸದಸ್ಯರ ತಂಡವನ್ನು ಕಟ್ಟಲು ಹೈಕಮಾಂಡ್ ಅನುಮತಿ ನೀಡಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಹೈಕಮಾಂಡಿಗೆ ಒಬ್ಬರ ಹೆಸರನ್ನು ಸಂಪುಟದ ಪಟ್ಟಿಯಲ್ಲಿ ಸೇರಿಸಲು ಗೊಂದಲವಿದ್ದ ಕಾರಣ, ಅಮಿತ್ ಶಾ ಅವರೇ ಇದಕ್ಕೆ ಪರಿಹಾರ ಸೂಚಿಸಬೇಕಾಯಿತು ಎಂದು ಹೇಳಲಾಗುತ್ತಿದೆ. ಬೊಮ್ಮಾಯಿಯವರ ಸತತ ಫಾಲೋ ಅಪ್ ನಿಂದಾಗಿ, ಸಂಪುಟ ರಚನೆ ಇಂದು (ಆ 4) ಸಾಧ್ಯವಾಗುತ್ತಿದೆ. ಆ ಒಂದು ಹೆಸರು ಯಾವುದು?

ಯಡಿಯೂರಪ್ಪನವರು ಯಾವ ಕಾರಣಕ್ಕೂ ಸಂಪುಟ ರಚನೆಯಿಂದ ಬೇಸರಗೊಳ್ಲಬಾರದು
ಸಚಿವ ಸಂಪುಟ ರಚನೆಯ ನಂತರ ಆಗಬಹುದಾದ ಆಕಾಂಕ್ಷಿಗಳ ಗೊಂದಲವನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಜೆ.ಪಿ.ನಡ್ಡಾ ಅವರು ಬೊಮ್ಮಾಯಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು ಎಂದು ಹೇಳಲಾಗುತ್ತಿದೆ. ಜೊತೆಗೆ, ಯಡಿಯೂರಪ್ಪನವರು ಯಾವ ಕಾರಣಕ್ಕೂ ಇದರಿಂದ ಬೇಸರಗೊಳ್ಳಬಾರದು, ಯಾವುದೇ ಷರತ್ತಿಲ್ಲದೇ ಮುಖ್ಯಮಂತ್ರಿ ಸ್ಥಾನದಿಂದ ಅವರು ಕೆಳಗಿಳಿದಿದ್ದಾರೆ ಎನ್ನುವ ಸೂಚನೆಯನ್ನೂ ನಡ್ಡಾ ಅವರು ಬೊಮ್ಮಾಯಿ ಅವರಿಗೆ ನೀಡಿದ್ದಾರೆ ಎನ್ನುವ ಮಾಹಿತಿಯಿದೆ.

ವಿಜಯೇಂದ್ರ ಅವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಬೇಕೇ ಎನ್ನುವ ವಿಚಾರ
ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಬೇಕೇ ಎನ್ನುವ ವಿಚಾರವೇ ಸಂಪುಟದ ಪಟ್ಟಿ ವಿಳಂಬವಾಗಲು ಕಾರಣವಾಯಿತು ಎಂದು ಹೇಳಲಾಗುತ್ತಿದೆ. ಸಿಎಂ ಬೊಮ್ಮಾಯಿ ಮೂರು ಸಂಭಾವ್ಯ ಪಟ್ಟಿಯನ್ನು ಹೈಕಮಾಂಡ್ ಬಳಿ ತೆಗೆದುಕೊಂಡು ಹೋಗಿದ್ದರು. ಆ ಮೂರೂ ಪಟ್ಟಿಯಲ್ಲಿ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬೊಮ್ಮಾಯಿ ಶಿಫಾರಸನ್ನು ಮಾಡಿದ್ದರು. ಈ ವಿಚಾರದಲ್ಲಿ ಫೈನಲ್ ಕಾಲ್ ತೆಗೆದುಕೊಳ್ಳಲು ವರಿಷ್ಠರು ಸಮಯ ತೆಗೆದುಕೊಂಡರು.

ಆ ಒಂದು ಹೆಸರೇ ನೂತನ ಸಂಪುಟದ ಪಟ್ಟಿ ವಿಳಂಬವಾಗಲು ಕಾರಣ!
ಪಕ್ಷದೊಳಗೆ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೆಲವು ಹಿರಿಯರು ವಿಜಯೇಂದ್ರ ಅವರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಲು ಶಿಫಾರಸನ್ನು ಮಾಡಿದ್ದರು. ಈ ವಿಚಾರವನ್ನು ಅಮಿತ್ ಶಾ ಅವರ ಜೊತೆ ಮಾತುಕತೆ ನಡೆಸಿ ಅಂತಿಮಗೊಳಿಸಬೇಕಾಗುತ್ತದೆ ಎನ್ನುವ ನಿಲುವಿಗೆ ನಡ್ಡಾ ಬಂದಿದ್ದರು. ಹಾಗಾಗಿ, ಈ ವಿಚಾರದಲ್ಲಿ ಮತ್ತೊಂದು ಸುತ್ತಿನ ಮಾತುಕತೆಯನ್ನು ಅಮಿತ್ ಶಾ ಜೊತೆ ಬೊಮ್ಮಾಯಿ ಮತ್ತು ನಡ್ಡಾ ಮಾಡಬೇಕಾಯಿತು. ಕೊನೆಗೂ, ಈ ವಿಚಾರದಲ್ಲಿ ವರಿಷ್ಠರು ಅಂತಿಮ ನಿರ್ಧಾರಕ್ಕೆ ಬಂದರು. ವಿಜಯೇಂದ್ರ ಅವರು ಸಂಪುಟದಲ್ಲಿ ಸ್ಥಾನ ಪಡೆದಿಲ್ಲ.
Recommended Video

ವಿಜಯೇಂದ್ರಗೆ ಒಂದೋ ಡಿಸಿಎಂ ಸ್ಥಾನ, ಇಲ್ಲವೇ ಕ್ಯಾಬಿನೆಟ್ ಬರ್ತ್
ಈ ಹಿಂದೆಯೇ ಒಂದು ಪ್ರಸ್ತಾವನೆ ಬಿಜೆಪಿ ಹೈಕಮಾಂಡ್ ಮುಂದೆ ಇತ್ತು. ಒಂದು ವೇಳೆ, ಲಿಂಗಾಯತ ಸಮುದಾಯದವರು ಅಲ್ಲದೇ ಬೇರೆ ಯಾರಾದರೂ ಸಿಎಂ ಆದರೆ, ವಿಜಯೇಂದ್ರಗೆ ಉಪಮುಖ್ಯಮಂತ್ರಿ ಸ್ಥಾನ, ಲಿಂಗಾಯತರೇ ಸಿಎಂ ಆದರೆ, ಬಿಎಸ್ವೈ ಪುತ್ರನಿಗೆ ಕ್ಯಾಬಿನೆಟ್ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿತ್ತು ಎಂದು ಹೇಳಲಾಗುತ್ತಿದೆ. ಆದರೆ, ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಇರುವುದಿಲ್ಲ ಮತ್ತು ವಿಜಯೇಂದ್ರ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎನ್ನುವುದು ಅಂತಿಮವಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications