ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 12ಕ್ಕೆ ಎಚ್‌.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆ ಇಲ್ಲ

|
Google Oneindia Kannada News

ಬೆಂಗಳೂರು, ಜೂನ್ 10 : ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿದೆ. ಜೂನ್ 12ರ ಬುಧವಾರ ಸಂಪುಟ ವಿಸ್ತರಣೆ ಮಾಡಲು ದಿನಾಂಕ ನಿಗದಿಯಾಗಿತ್ತು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಸೋಮವಾರ ವಿಧಿವಶರಾದರು. ಸರ್ಕಾರ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ. ಆದ್ದರಿಂದ, ಸಂಪುಟ ವಿಸ್ತರಣೆ ಮುಂದಕ್ಕೆ ಹೋಗಿದೆ.

ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕಿದೆ : ಎಚ್.ನಾಗೇಶ್ಸಚಿವ ಸ್ಥಾನ ನೀಡುವ ಭರವಸೆ ಸಿಕ್ಕಿದೆ : ಎಚ್.ನಾಗೇಶ್

ಶೋಕಾಚರಣೆ ಇರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಜೂನ್ 10, 11 ಮತ್ತು 12ರಂದು ಮೂರು ದಿನಗಳ ಕಾಲ ಯಾವುದೇ ಕಾರ್ಯಕ್ರಮಗಳ ನಡೆಯುವುದಿಲ್ಲ. ಆದ್ದರಿಂದ, ನಿಗದಿಯಾಗಿದ್ದ ಸಂಪುಟ ವಿಸ್ತರಣೆ ಮುಂದೂಡಲಾಗಿದೆ.

ಸಂಪುಟ ವಿಸ್ತರಣೆ : ದೇವೇಗೌಡ ಭೇಟಿಯಾದ ಕುಮಾರಸ್ವಾಮಿಸಂಪುಟ ವಿಸ್ತರಣೆ : ದೇವೇಗೌಡ ಭೇಟಿಯಾದ ಕುಮಾರಸ್ವಾಮಿ

Karnataka cabinet expansion postponed

ಜೂನ್ 17 ಅಥವ 18ರಂದು ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ. ರಾಜಭವನದಿಂದ ಅಧಿಕೃತವಾದ ದಿನಾಂಕ, ಸಮಯ ನಿಗದಿಯಾದ ಬಳಿಕ ಮುಂದಿನ ದಿನಾಂಕವನ್ನು ಘೋಷಣೆ ಮಾಡಲಾಗುತ್ತದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ ಜೆಡಿಎಸ್ ಕೋಟಾದ 2, ಕಾಂಗ್ರೆಸ್ ಕೋಟಾದ 1 ಸೇರಿ ಒಟ್ಟು ಮೂರು ಸಚಿವ ಸ್ಥಾನಗಳು ಖಾಲಿ ಇವೆ. ಜೂನ್ 12ರಂದು ಸಂಪುಟ ವಿಸ್ತರಣೆ ಮಾಡಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿತ್ತು.

ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಬಿ.ಎಂ.ಫಾರೂಕ್ ಸೇರ್ಪಡೆ?ಎಚ್.ಡಿ.ಕುಮಾರಸ್ವಾಮಿ ಸಂಪುಟಕ್ಕೆ ಬಿ.ಎಂ.ಫಾರೂಕ್ ಸೇರ್ಪಡೆ?

ಶನಿವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರ ಜೊತೆ ಚರ್ಚೆ ನಡೆಸಿದ್ದರು. ಜೂನ್ 12ರ ಬೆಳಗ್ಗೆ 11.30ಕ್ಕೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಮಯ ನಿಗದಿ ಮಾಡಲಾಗಿತ್ತು.

English summary
Due to Actor, director, writer Girish Karnad death Karnataka cabinet expansion postponed. cabinet expansion scheduled on June 12, 2019. But, govt announced three days of mourning due to death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X