Cabinet Expansion: ಸಚಿವ ಸಂಪುಟದಲ್ಲಿ ಲಿಂಗಾಯತರು, ದಲಿತರು, ಒಕ್ಕಲಿಗರು, ಕುರುಬರಿಗೆ ಎಷ್ಟು ಸ್ಥಾನ? ಇಲ್ಲಿದೆ ಮಾಹಿತಿ

ಬೆಂಗಳೂರು, ಮೇ27: ಹಲವು ಸರಣೆ ಸಭೆಗಳ ಬಳಿಕ ಕಾಂಗ್ರೆಸ್ ಸರಕಾರದ ನೂತನ ಸಚಿವರ ಪಟ್ಟಿ ಶುಕ್ರವಾರ ಬಿಡುಗಡೆಯಾಗಿದೆ. ಶನಿವಾರ ಬೆಳಗ್ಗೆ 11.45 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದ್ದು, 24 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಲಿಂಗಾಯತ ಸಮುದಾಯದ 8 ಜನರಿಗೆ ಸಚಿವ ಸ್ಥಾನ

ಸಿದ್ದರಾಮಯ್ಯ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಒಟ್ಟು ಎಂಟು ಸಚಿವ ಸ್ಥಾನ ನೀಡಲಾಗಿದ್ದು, ಈ ಸಮುದಾಯದ ಬಹುತೇಕ ಎಲ್ಲಾ ಪ್ರಮುಖ ಒಳಪಂಗಡಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್‌ಕರ್ ಮತ್ತು ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಶರಣ ಪ್ರಕಾಶ ಪಾಟೀಲ್, ದರ್ಶನಾಪುರ, ಹೆಚ್.ಕೆ.ಪಾಟೀಲ್ ಅವರು ನಾಮಧಾರಿ ರೆಡ್ಡಿ ಖೋಟಾದಲ್ಲಿ ಸಚಿವರಾಗಿದ್ದಾರೆ.

Karnataka Cabinet Expansion Seats Details For Lingayat Dalit Regional Distribution

ಒಕ್ಕಲಿಗರಲ್ಲಿ ಐದು ಜನರಿಗೆ ಸಚಿವ ಸ್ಥಾನ

ಒಕ್ಕಲಿಗರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಚೆಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಎಂ.ಸಿ.ಸುಧಾಕರ್, ಕೃಷ್ಣಬೈರೇಗೌಡ ಸೇರಿ ಐದು ಮಂದಿಗೆ ಪ್ರಾತಿನಿಧ್ಯ ದೊರೆತಿದೆ.

ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ

ದಲಿತ ಸಮುದಾಯಕ್ಕೆ ಬರೋಬ್ಬರಿ 9 ಸಚಿವ ಸ್ಥಾನ ಲಭಿಸಿದ್ದು ಮುನಿಯಪ್ಪ, ಜಿ.ಪರಮೇಶ್ವರ್, ಹೆಸ್.ಸಿ.ಮಹದೇವಪ್ಪ, ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರುಗಳು ಪರಿಶಿಷ್ಟ ಜಾತಿ ಖೋಟಾದಲ್ಲಿ ಸಚಿವರಾಗಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಗಳನ್ನು ಸರಿದೂಗಿಸಲಾಗಿದೆ. ಪರಿಶಿಷ್ಟ ಪಂಗಡದ ಪ್ರತಿನಿಧಿಗಳಾಗಿ ನಾಗೇಂದ್ರ, ಮಧುಗಿರಿ ರಾಜಣ್ಣ, ಸತೀಶ್ ಜಾರಕಿಹೊಳಿ ಅವರಿಗೆ ಅವಕಾಶ ದೊರೆತಿದೆ.

ಹಿಂದುಳಿದ ಜಾತಿಗಳಲ್ಲಿ ಅತ್ಯಂತ ಸಣ್ಣ ಸಮುದಾಯ ರಾಜು ಕ್ಷತ್ರಿಯ ಸಮುದಾಯದ ಬೋಸರಾಜು, ಅತ್ಯಂತ ಸಣ್ಣ ಹಿಂದುಳಿದ ಸಮುದಾಯಗಳಲ್ಲಿ ಒಂದಾದ ಬೆಸ್ತ ಸಮುದಾಯದ ಮಾಂಕಾಳ ವೈದ್ಯ, ಮರಾಠ ಸಮಾಜದಿಂದ ಸಂತೋಷ್ ಲಾಡ್ ಇದ್ದಾರೆ. ಕುರುಬ ಸಮುದಾಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಬೈರತಿ ಸುರೇಶ್ ಅವರಿಗೆ ಮಾತ್ರ ಸಂಪುಟದೊಳಗೆ ಪ್ರವೇಶ ದೊರೆತಿದೆ. ಬಿಲ್ಲವ (ಈಡಿಗ) ಸಮುದಾಯದಿಂದ ಮಧು ಬಂಗಾರಪ್ಪ ಇದ್ದಾರೆ. ರಜಪೂತ ಸಮುದಾಯದ ಅಜಯ್ ಸಿಂಗ್ ಅವರು ಮುಖ್ಯ ಸಚೇತಕರಾಗಿರುವುದರಿಂದ ಕಡೆ ಗಳಿಗೆಯ ಒತ್ತಡದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿರುವ ಬಂಜಾರ ಸಮುದಾಯದ ಪ್ರಕಾಶ್ ರಾಥೋಡ್ ಅವರಿಗೂ ಈಗಾಗಲೇ ಒಂದು ಜವಾಬ್ದಾರಿ ಇರುವ ಕಾರಣಕ್ಕೆ ಸಚಿವ ಸ್ಥಾನ ದೊರಕಿಲ್ಲ.

Karnataka Cabinet Expansion Seats Details For Lingayat Dalit Regional Distribution

ಮುಸ್ಲಿಂ ಸಮುದಾಯದಿಂದ ಇಬ್ಬರು ಸಚಿವ ಸ್ಥಾನ

ಮುಸ್ಲಿಂ ಸಮುದಾಯದಿಂದ ಜಮೀರ್ ಅಹಮದ್ ಖಾನ್, ರಹೀಂ ಖಾನ್ ಇಬ್ಬರು ಸಚಿವರಾಗಿದ್ದರೆ, ಯು.ಟಿ.ಖಾದರ್ ಸ್ಪೀಕರ್ ಆಗಿದ್ದಾರೆ. ಕ್ರೈಸ್ತ ಸಮುದಾಯದಿಂದ ಕೆ.ಜೆ.ಜಾರ್ಜ್ ಅವರಿಗೆ ಸಚಿವ ಸ್ಥಾನ ಒಲಿದಿದೆ. ಜೈನ ಸಮುದಾಯದಿಂದ ಡಿ.ಸುಧಾಕರ್ ಹಾಗೂ ಬ್ರಾಹ್ಮಣ ಸಮುದಾಯದ ಪ್ರತಿನಿಧಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ದೊರಕಿದೆ.

ನೂತನ ಸಚಿವ ಪಟ್ಟಿ ಇಲ್ಲಿದೆ

ಹೆಚ್‌ಕೆ ಪಾಟೀಲ್‌ - ಗದಗ
ಕೃಷ್ಣ ಭೈರೇಗೌಡ- ಬ್ಯಾಟರಾಯನಪುರ
ಎನ್‌,ಚೆಲುವರಾಯಸ್ವಾಮಿ- ನಾಗಮಂಗಲ
ಕೆ. ವೆಂಕಟೇಶ್‌- ಪಿರಿಯಾಪಟ್ಟಣ
ಎಚ್‌ಸಿ ಮಹದೇವಪ್ಪ- ಟಿ ನರಸೀಪುರ
ಈಶ್ವರ್‌ ಖಂಡ್ರೆ- ಬಾಲ್ಕಿ
ಕ್ಯಾತಸಂದ್ರ ಎನ್‌ ರಾಜಣ್ಣ- ಮಧುಗಿರಿ
ದಿನೇಶ್‌ ಗುಂಡೂರಾವ್- ಗಾಂಧಿನಗರ
ಶರಣ ಬಸಪ್ಪ ದರ್ಶನಾಪುರ- ಶಹಪುರ
ಶಿವಾನಂದ ಪಾಟೀಲ್‌- ಬಸವನಭಾಗೇವಾಡಿ
ತಿಮ್ಮಾಪುರ ರಾಮಪ್ಪ ಬಾಳಪ್ಪ- ಮುದೋಳ
ಎಸ್‌ಎಸ್‌ ಮಲ್ಲಿಕಾರ್ಜುನ- ದಾವಣಗೆರೆ ಉತ್ತರ
ಶಿವರಾಜ್‌ ತಂಗಡಗಿ- ಕನಕಗಿರಿ
ಶರಣಪ್ರಕಾಶ್‌ ಪಾಟೀಲ್‌- ಸೇಡಂ
ಮಂಕಾಳ ವೈದ್ಯ- ಭಟ್ಕಳ
ಲಕ್ಷ್ಮೀ ಆರ್‌ ಹೆಬ್ಬಾಳಕರ್‌- ಬೆಳಗಾವಿ ಗ್ರಾಮಾಂತರ
ರಹೀಂ ಖಾನ್‌- ಬೀದರ್
ಡಿ.ಸುಧಾಕರ್‌- ಹಿರಿಯೂರು
ಸಂತೋಷ್‌ ಲಾಡ್‌- ಕಲಘಟಗಿ
ಎನ್‌ಎಸ್‌ ಬೋಸರಾಜು- ಎಐಸಿಸಿ ಕಾರ್ಯದರ್ಶಿ
ಬೈರತಿ ಸುರೇಶ್‌- ಹೆಬ್ಬಾಳ
ಮಧು ಬಂಗಾರಪ್ಪ- ಸೊರಬ
ಎಂಸಿ ಸುಧಾಕರ್‌- ಚಿಂತಾಮಣಿ
ಬಿ.ನಾಗೇಂದ್ರ- ಬಳ್ಳಾರಿ ಗ್ರಾಮೀಣ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+