ಸಂಪುಟ ರಚನೆ ಒಪ್ಪಂದ ಅಂತಿಮ: ಜೆಡಿಎಸ್ ಬಿಗಿಪಟ್ಟಿಗೆ ಮಣಿದ ಕಾಂಗ್ರೆಸ್
ಬೆಂಗಳೂರು, ಮೇ 31: ಸಂಪುಟ ರಚನೆ ಸಂಬಂಧ ಕಾಂಗ್ರೆಸ್ ಮತ್ತು ಜೆಡಿಎಸ್ ಬಹುತೇಕ ಸಹಮತಕ್ಕೆ ಬಂದಿದ್ದು, ಅಂತಿಮ ಪಟ್ಟಿ ಸಿದ್ಧವಾಗಿದೆ.
ಜೆಡಿಎಸ್ ಹಣಕಾಸು ಖಾತೆಯನ್ನು ತನ್ನಲ್ಲಿ ಇರಿಸಿಕೊಳ್ಳಲಿದೆ. ಕಾಂಗ್ರೆಸ್ ಗೃಹಖಾತೆಯನ್ನು ಪಡೆದುಕೊಳ್ಳಲಿದೆ ಎಂದು ಮೂಲಗಳು 'ಒನ್ ಇಂಡಿಯಾ'ಕ್ಕೆ ತಿಳಿಸಿವೆ.
ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದ ನೂತನ ಸಚಿವ ಸಂಪುಟವು ವಾರಾಂತ್ಯದ ವೇಳೆಗೆ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ. ಒಪ್ಪಂದ ಪ್ರಕಾರ ಕಾಂಗ್ರೆಸ್ ಭಾರಿ ಕೈಗಾರಿಕೆ, ಐಟಿ/ಬಿಟಿ, ಶಿಕ್ಷಣ ಮತ್ತು ಪ್ರವಾಸೋದ್ಯಮಗಳನ್ನು ತನ್ನಲ್ಲಿ ಉಳಿಸಿಕೊಳ್ಳಲಿದೆ.

ಇನ್ನೊಂದೆಡೆ ಜೆಡಿಎಸ್ ಲೋಕೋಪಯೋಗಿ, ಸಹಕಾರ ವ್ಯವಹಾರ ಮತ್ತು ಕಂದಾಯ ಖಾತೆಗಳನ್ನು ಪಡೆದುಕೊಳ್ಳಲಿದೆ. ಮುಖ್ಯಮಂತ್ರಿ ಸೇರಿದಂತೆ ಜೆಡಿಎಸ್ 12 ಖಾತೆಗಳನ್ನು ಹೊಂದಲಿದೆ. ಉಪಮುಖ್ಯಮಂತ್ರಿ ಸೇರಿದಂತೆ 22 ಖಾತೆಗಳು ಕಾಂಗ್ರೆಸ್ ಪಾಲಾಗಲಿವೆ.
ತೀವ್ರ ಚರ್ಚೆಯ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಖಾತೆ ಹಂಚಿಕೆ ವಿಚಾರದಲ್ಲಿ ಒಮ್ಮತಕ್ಕೆ ಬಂದಿದ್ದಾರೆ. ನವದೆಹಲಿಯಲ್ಲಿ ಗುಲಾಂ ನಬಿ ಆಜಾದ್ ಜತೆ ನಡೆಸಿದ ಸಭೆ ವೇಳೆ ಹಣಕಾಸು ಖಾತೆಯನ್ನು ತಮ್ಮ ಪಕ್ಷಕ್ಕೆ ನೀಡದೆ ಇದ್ದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬೆದರಿಕೆ ಒಡ್ಡಿದ್ದರು ಎನ್ನಲಾಗಿದೆ.
ಹಣಕಾಸು ಖಾತೆಯನ್ನು ತಮಗೆ ನೀಡಿದರೆ ಪ್ರಣಾಳಿಕೆಯಲ್ಲಿ ನೀಡಿದ 53,000 ಕೋಟಿ ರೂ. ರೈತರ ಸಾಲಮನ್ನಾ ಭರವಸೆಯನ್ನು ಅನುಷ್ಠಾನಗೊಳಿಸಲು ಸಾಧ್ಯ ಎಂಬ ಸಲುವಾಗಿ ಕುಮಾರಸ್ವಾಮಿ ಅವರು ಪಟ್ಟುಹಿಡಿದಿದ್ದರು.
ಸಾಲಮನ್ನಾ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ತೆಗೆದುಕೊಂಡಿದ್ದು, ಎರಡು ಹಂತಗಳಲ್ಲಿ ಸಾಲಮನ್ನಾ ಮಾಡುವುದಾಗಿ ತಿಳಿಸಿದ್ದಾರೆ. ಅದರ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು 15 ದಿನಗಳ ಕಾಲಾವಕಾಶ ಕೇಳಿದ್ದಾರೆ.
ಸಂಪುರ ರಚನೆ ಸಂಬಂಧ ಈಗಾಗಲೇ ಸಾಕಷ್ಟು ನಕಾರಾತ್ಮಕ ಅಭಿಪ್ರಾಯಗಳಿಗೆ ಒಳಗಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವು ಇನ್ನೂ ವಿಳಂಬ ಮಾಡಲು ಬಯಸಿಲ್ಲ. 2019ರ ಲೋಕಸಭೆ ಚುನಾವಣೆ ವೇಳೆಗೆ ಸಮ್ಮಿಶ್ರ ಸರ್ಕಾರದ ಉಳಿವು ಎರಡೂ ಪಕ್ಷಗಳಿಗೆ ಮಹತ್ವದ್ದಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications