ಸರ್ಕಾರಿ ನೌಕರರು ಆಸ್ತಿ ವಿವರ ಸಲ್ಲಿಕೆ ಸೇರಿ ಹಲವು ಸಚಿವ ಸಂಪುಟದ ನಿರ್ಧಾರಗಳು
ಬೆಂಗಳುರು, ಜನವರಿ 03 : ರಾಜ್ಯ ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳು ತಮ್ಮ ಕುಟುಂಬದವರ ಸ್ಥಿರ, ಚರ ಆಸ್ತಿಗಳ ವಿವರ ಸಲ್ಲಿಸುವುದು ಕಡ್ಡಾಯವಾಗಲಿದೆ.
ನೌಕರರ ಪೋಷಕರು, ಮಕ್ಕಳ ಹೆಸರಿನಲ್ಲಿ ಇರುವ ಎಲ್ಲಾ ಆಸ್ತಿ, ನಗದು ವಿವರಗಳನ್ನು ಲೋಕಾಯುಕ್ತಕ್ಕೆ ನೀಡುವುದನ್ನು ಕಡ್ಡಾಯಗೊಳಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ಈ ಕುರಿತಂತೆ ಮಾಹಿತಿ ನೀಡಿದ್ದಾರೆ. ಸರ್ಕಾರಿ ನೌಕರರು ಈ ಹಿಂದೆ ತಾನು ಮತ್ತು ತನ್ನ ಪತ್ನಿಯ ಹೆಸರಲ್ಲಿದ ಆಸ್ತಿ ವಿವರಗಳನ್ನು ಮಾತ್ರ ಲೋಕಾಯುಕ್ತಕ್ಕೆ ನೀಡಬೇಕಿತ್ತು. ಆದರೆ, ಇನ್ಮುಂದೆ ಅವರ ಪೋಷಕರು, ಮಕ್ಕಳು ಸೇರಿ ಅವಲಂಬಿತರ ಹೆಸರಲ್ಲಿರುವ ಆಸ್ತಿಗಳ ವಿವರಗಳನ್ನು ಸಹ ನೀಡಬೇಕಾಗುತ್ತದೆ.

ಇನ್ನಿತರೆ ಸಚಿವ ಸಂಪುಟ ಸಭೆಯ ನಿರ್ಧಾರಗಳು:
* ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯ.
* ಹೈಕೋರ್ಟ್ ನಲ್ಲಿ ಕೆಲಸ ಮಾಡುವವರಿಗೆ, ನ್ಯಾಯಾಲಯ ನೌಕರರಿಗೆ ಕೇಂದ್ರ ಸರ್ಕಾರದ ವೇತನ ನಿಯಮಾವಳಿ ಅನುಸಾರ ವೇತನ ಪಾವತಿಗೆ ರಾಜ್ಯ ಸರ್ಕಾರ ಸಮ್ಮತಿ.
* ಅಕ್ರಮ ಮರಳುಗಾರಿಕೆ, ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಗಳನ್ನು ಕಡಿಯುವವರ ವಿರುದ್ಧ ಗೂಂಡಾ ಕಾಯ್ದೆ ಜಾರಿ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಳಕ್ಕೆ ಅವಕಾಶವಾಗುವಂತೆ ಆಶಾದೀಪ ಯೋಜನೆ ಜಾರಿ.
* ಪಾವಗಡ ಸೇರಿ ಕರ್ನಾಟಕದ ಗಡಿ ಭಾಗದ ತಾಲೂಕು, ಗ್ರಾಮಗಳಿಗೆ ನೀರನ್ನು ಸರಬರಾಜು ಮಾಡಲು 2,352.60 ಕೋಟಿ ಕುಡಿಯುವ ನೀರಿನ ಯೋಜನೆಗೆ ಗ್ರೀನ್ ಸಿಗ್ನಲ್.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications