Cabinet Ministers: ಎಂಎಲ್ಎ, ಎಂಎಲ್ಸಿ ಏನೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ, ಯಾರಿವರು ತಿಳಿಯಿರಿ
ಬೆಂಗಳೂರು, ಮೇ. 27: ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದಕ್ಕಿಂತ ಕಷ್ಟದ ಕೆಲಸವೆಂದರೆ ಸಚಿವ ಸ್ಥಾನ ನೀಡುವುದು, ಯಾರನ್ನು ಸಂಪುಟದಲ್ಲಿ ಸೇರಿಸಿಕೊಳ್ಳಬೇಕು, ಯಾರನ್ನು ಬಿಡಬೇಕು ಎಂಬ ಗೊಂದಲದ ನಡುವೆಯೇ ಅಚ್ಚರಿಯ ಬೆಳವಣಿಗೆಯೊಂದು ಕಾಂಗ್ರೆಸ್ನಲ್ಲಿ ನಡೆದಿದೆ. ಕಾಂಗ್ರೆಸ್ ಶುಕ್ರವಾರ ರಾತ್ರಿ ಬಿಡುಗಡೆ ಮಾಡಿರುವ ಸಚಿವರ ಪಟ್ಟಿಯಲ್ಲಿನ ಹೆಸರೊಂದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅದೇ ಎನ್ಎಸ್ ಬೋಸರಾಜು!.
ರಾಯಚೂರು ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ರಾಜು ಕ್ಷತ್ರಿಯ ಸಮುದಾಯದ ನಾಯಕ ಎನ್ಎಸ್ ಬೋಸರಾಜು ಈ ಬಾರಿಯ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಇದರಲ್ಲಿ ಆಶ್ವರ್ಯ ಪಡುವುದು ಏನೂ ಎಂದು ಕೇಳುವುದಾದರೆ. ಇವರು ಶಾಸಕರು ಅಲ್ಲ, ಎಂಎಲ್ಸಿ ಕೂಡ ಅಲ್ಲ. ಚುನಾವಣೆಯಲ್ಲಿ ಗೆದ್ದು ಸಚಿವ ಸ್ಥಾನಕ್ಕಾಗಿ ಪೈಪೋಟಿ ನೀಡುತ್ತಿದ್ದವರ ಮಧ್ಯೆ ಅದೃಷ್ಟ ಇವರನ್ನು ಹುಡುಕಿ ಬಂದಿದೆ.

ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, 24 ಸಚಿವರು ಶನಿವಾರ ಬೆಳಗ್ಗೆ 11.45ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಮನವಿಯಂತೆ ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಸದ್ಯ ರಾಜಭವನಕ್ಕೆ ನೂತನ ಸಚಿವರ ಪಟ್ಟಿ ರವಾನೆಯಾಗಿದೆ. ಈ ಪಟ್ಟಿಯಲ್ಲಿ ಮಾಜಿ ಎಂಎಲ್ಸಿ, ಎಐಸಿಸಿಯ ಹಾಲಿ ಕಾರ್ಯದರ್ಶಿ ಬೋಸರಾಜು ಅವರ ಹೆಸರು ಸೇರಿದೆ.
ವಿಧಾನಸಭಾ ಚುನಾವಣೆ ವೇಳೆ ರಾಯಚೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಎನ್.ಎಸ್. ಬೋಸರಾಜು ಅವರು ಟಿಕೆಟ್ ಸಿಗದ ಬಗ್ಗೆ ತಿಳಿದು ತಮ್ಮ ಮಗ ರವಿ ಬೋಸರಾಜು ಟಿಕೆಟ್ ನೀಡಬೇಕು ಎಂಬ ಬೇಡಿಕೆಯಿಟ್ಟಿದ್ದರು. ಆದರೆ, ಹೈಕಮಾಂಡ್ ಆದೇಶದ ಮೇಲೆ ಸುಮ್ಮನಾಗಿದ್ದರು. ಇವರ ಮೇಲೆ ಹೈಕಮಾಂಡ್ಗೆ ಅನುಕಂಪವಿದ್ದು, ಸಚಿವ ಸ್ಥಾನ ನಿಡುವ ಬಗ್ಗೆ ವದಂತಿಗಳು ಹರಡಿದ್ದವು. ಅದಕ್ಕೆ ಕಾಂಗ್ರೆಸ್ ನಾಯಕರೆ ಅಸಮಾಧಾನ ಕುಡ ಹೊರಹಾಕಿದ್ದರು.

ರಾಯಚೂರು ಜಿಲ್ಲೆಯ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಹಾಗೂ ಇನ್ನಿಬ್ಬರು ಮುಖಂಡರಾದ ಎ.ವಸಂತ್ ಕುಮಾರ್, ಅಸ್ಲಂ ಪಾಷಾ ಇವರಿಗೆ ಸಚಿವ ಸ್ಥಾನ ಸಿಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಪತ್ರ ಬರೆದಿದ್ದರು. ಆದರೂ ಬೋಸರಾಜು ತಮ್ಮ ಪ್ರಭಾವದಿಂದ ಸಚಿವ ಸಂಪುಟ ಸೇರಿದ್ದಾರೆ.
ಮಾಹಿತಿಯ ಪ್ರಕಾರ ಮಾಜಿ ಶಾಸಕ, ತೆಲಂಗಾಣ ರಾಜ್ಯದ ಉಸ್ತುವಾರಿ ಹೊಂದಿರುವ ಎನ್ಎಸ್ ಬೋಸರಾಜು ಅವರು ಹೈಕಮಾಂಡ್ ಕೋಟಾದಲ್ಲಿ ಸಚಿವ ಸಂಪುಟ ಸೇರಿಕೊಳ್ಳಲಿದ್ದಾರೆ. ಇವರ ಜೊತೆಗೆ ಇನ್ನು 23 ಶಾಸಕರು ಬೆಳಗ್ಗೆ 11.45ಕ್ಕೆ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಂಪುಟ ತನ್ನ ಪೂರ್ಣ ಬಲ 34ಕ್ಕೆ ತಲುಪಲಿದೆ. ಬೋಸರಾಜು ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಖುದ್ದು ಮಲ್ಲಿಕಾರ್ಜುನ ಖರ್ಗೆಯವರೇ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಬೋಸರಾಜು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ಆರು ತಿಂಗಳವರೆಗೆ ಅವರು ವಿಧಾನಸಭೆ ಅಥವಾ ವಿಧಾನ ಪರಿಷತ್ಗೆ ಸದಸ್ಯರಾಗುವ ಅವಕಾಶವಿರುತ್ತದೆ. ಹಾಗಾಗಿ ವಿಧಾನ ಪರಿಷತ್ ಚುನಾವಣೆಗೆ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಿ ಗೆಲ್ಲಿಸಿ ಸಚಿವ ಸ್ಥಾನ ಗಟ್ಟಿ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ತೆಲಂಗಾಣದಲ್ಲಿ ಮುಮದಿನ ವರ್ಷ ಚುನಾವಣೆ ನಡೆಯಲಿದ್ದು, ಇವರ ಸಚಿವ ಸ್ಥಾನ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂಬುದು ಹೈಕಮಾಂಡ್ ತಂತ್ರವಾಗಿದೆ.
24 ನೂತನ ಸಚಿವರ ಅಧಿಕೃತ ಪಟ್ಟಿಯಲ್ಲಿ, ಕೆಲವು ಘಟಾನುಘಟಿ ನಾಯಕರ ಹೆಸರೇ ಬಿಟ್ಟುಹೋಗಿದೆ. ಆರ್.ವಿ.ದೇಶಪಾಂಡೆ, ಬಿಕೆ ಹರಿಪಸ್ರಾದ್, ಟಿ.ಬಿ.ಜಯಚಂದ್ರ ಹಾಗೂ ಸಿಎಂ ಆಪ್ತ ಬಸವರಾಜ ರಾಯರೆಡ್ಡಿ ಅವರಿಗೂ ಸಚಿವ ಸ್ಥಾನ ದಿಕ್ಕಿಲ್ಲ. ಆದರೆ ಬೋಸರಾಜು ಸಂಪುಟ ಸೇರ್ಪಡೆಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಸಂಪುಟಕ್ಕೆ ಸೇರ್ಪಡೆಯಾಗಿರುವ ಸಚಿವರ ಪಟ್ಟಿ ಹೀಗಿದೆ
1. ಎಚ್.ಕೆ.ಪಾಟೀಲ್ (ಗದಗ)
2. ಕೃಷ್ಣ ಭೈರೇಗೌಡ(ಬೆಂಗಳೂರು)
3. ಎನ್.ಚಲುವರಾಯಸ್ವಾಮಿ( ಮಂಡ್ಯ)
4. ಕೆ. ವೆಂಕಟೇಶ್ (ಮೈಸೂರು)
5. ಡಾ. ಎಚ್.ಸಿ.ಮಹದೇವಪ್ಪ
6. ಈಶ್ವರ ಖಂಡ್ರೆ ( ಬೀದರ್)
7. ಕೆ.ಎನ್.ರಾಜಣ್ಣ ( ತುಮಕೂರು)
8. ದಿನೇಶ್ ಗುಂಡೂರಾವ್ (ಬೆಂಗಳೂರು)
9. ಶರಣಬಸಪ್ಪ ದರ್ಶನಾಪುರ ( ಯಾದಗಿರಿ)
10. ಶಿವಾನಂದ ಪಾಟೀಲ ( ವಿಜಯಪುರ)
11. ತಮ್ಮಾಪುರ್ ರಾಮಪ್ಪ ಬಾಳಪ್ಪ (ಬಾಗಲಕೋಟೆ)
12. ಎಸ್.ಎಸ್.ಮಲ್ಲಿಕಾರ್ಜುನ ( ದಾವಣಗೆರೆ)
13. ಶಿವರಾಜ ತಂಗಡಗಿ(ಕೊಪ್ಪಳ)
14. ಡಾ.ಶರಣಪ್ರಕಾಶ್ ಪಾಟೀಲ್ (ಕಲಬುರಗಿ)
15. ಮಂಕಾಳ ವೈದ್ಯ ( ಉತ್ತರ ಕನ್ನಡ)
16. ಲಕ್ಷ್ಮಿ ಹೆಬ್ಬಾಳಕರ್ (ಬೆಳಗಾವಿ)
17. ರಹೀಂ ಖಾನ್ (ಬೀದರ್)
18. ಡಿ.ಸುಧಾಕರ್ (ಚಿತ್ರದುರ್ಗ)
19. ಸಂತೋಷ್ ಎಸ್. ಲಾಡ್ (ಧಾರವಾಡ)
20. ಎಸ್.ಎನ್.ಬೋಸರಾಜು ( ರಾಯಚೂರು)
21. ಬೈರತಿ ಸುರೇಶ್ (ಬೆಂಗಳೂರು)
22. ಮಧು ಬಂಗಾರಪ್ಪ (ಶಿವಮೊಗ್ಗ)
23. ಡಾ. ಎಂಸಿ ಸುಧಾಕರ್ (ಚಿಕ್ಕಬಳ್ಳಾಪುರ)
24. ಬಿ.ನಾಗೇಂದ್ರ ( ಬಳ್ಳಾರಿ)
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ












Click it and Unblock the Notifications