Cabinet Reshuffle: ಉಪಚುನಾವಣೆ ಬಳಿಕ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ! 7 ಸಚಿವರಿಗೆ CM ಕೋಕ್? ಇಲ್ಲಿದೆ ಪಟ್ಟಿ
ಬೆಂಗಳೂರು, ನವೆಂಬರ್ 13: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ಭ್ರಷ್ಟಾಚಾರ ಆರೋಪಗಳನ್ನು ಎದರಿಸುತ್ತಿದೆ. ಸಚಿವರ ಹೇಳಿಕೆಗಳು ಸರ್ಕಾರಕ್ಕೆ ಸಂಕಷ್ಟ ತರುತ್ತಿದೆ. ಆಡಳಿತಯಂತ್ರ ಸುಸೂತ್ರವಾಗಿ ನಡೆಸಲು ಸಿದ್ದರಾಮಯ್ಯ ಅವರು ಉಪ ಚುನಾವಣೆ ಬಳಿಕ ಮೇಜರಿ ಸರ್ಜರಿ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ನಲ್ಲಿ ಸಚಿವ ಸಂಪುಟ ಪುನಾರಚರನೆ ಆಗಲಿದೆ, ಕೆಲವು ಸಚಿವರನ್ನು ಕೈ ಬಿಡಬಹುದು ಎಂದು ಮೂಲಗಳು ತಿಳಿಸಿವೆ.
ಭಷ್ಟಾಚಾರ ಹಣೆಪಟ್ಟಿ ಹೊತ್ತ, ವಿವಾದಗಳನ್ನು ಎಳೆದುಕೊಂಡು ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದ ವಿವಿಧ ಸುಮಾರು 07 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಡಿಸೆಂಬರ್ ಮೊದಲ ಇಲ್ಲವೇ ಎರಡನೇ ವಾರ ಸಂಪುಟ ಪುನಾರಚನೆ ಮಾಡಿ, ಆಡಳಿತಕ್ಕೆ ಚುರುಕು ನೀಡಲಾಗುತ್ತಿದೆ. ಇದರಿಂದ ಸರ್ಕಾರದಲ್ಲಿ ಅಸಮಾಧಾನದ ಹೊಗೆ ಸೃಷ್ಟಿಯಾಗಬಹುದು ಅಂತಲೂ ಅಂದಾಜಿಸಲಾಗಿದೆ.

ಕೈ ಬಿಡುವು ಸಚಿವರ ಸ್ಥಾನಗಳಿಗೆ ಅರ್ಹರನ್ನು ಹೊಸ ಮುಖಗಳನ್ನು ಕೂರಿಸುವ ಸಾಧ್ಯತೆ ಇದೆ. ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದೆ. ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಉಪಚುನಾವಣೆ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಕೇಂದ್ರ ವರಿಷ್ಠರು ಚರ್ಚಿಸಲಿದ್ದಾರೆ.
ಯಾರನ್ನು ಸಂಪುಟದಿಂದ ಕೈ ಬಿಡಬೇಕು. ಯಾರಿಗೆ ಮಣೆ ಹಾಕಬೇಕು. ಆಡಳಿತವು ಯಾವುದೇ ಆರೋಪ ಎದುರಿಸದೇ ಹೇಗೆ ಕಾರ್ಯನಿರ್ವಹಿಸಬೇಕು ಎಂಬೆಲ್ಲದರ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟದಿಂದ ಮಂತ್ರಿಗಿರಿ ಕಳೆದುಕೊಳ್ಳುವವರು ಯಾರು?
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ್, ಬೋಸರಾಜು, ಕೆ.ಎನ್. ರಾಜಣ್ಣ ಸೇರಿದಂತೆ ಇಲಾಖೆಯಲ್ಲಿ ಹೆಚ್ಚು ಸಕ್ರಿಯರಲ್ಲದ ಸುಮಾರು ಏಳು ಸಚಿವರಿಗೆ ಸಿಎಂ ಕೋಕ್ ನೀಡುವ ಸಾಧ್ಯತೆ ಇದೆ.
ಆರ್ಬಿ ತಿಮ್ಮಾಪುರ ಅವರು ನಿರ್ವಹಿಸುತ್ತಿರುವ ಅಬಕಾರಿ ಇಲಾಖೆಯಲ್ಲಿ ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಿಪಕ್ಷಗಳು ಅವರ ರಾಜೀನಾಮೆ ಪಡೆಯುವಂತೆ ಒತ್ತಡ ಹಾಕಿದ್ದಾರೆ.
ಅಲ್ಲದೇ ಇನ್ನೂ ಕೆಲ ಸಚಿವರು ತಮ್ಮ ವಿವಾದಿತ ಹೇಳಿಕೆಗಳಿಂದ ಸರ್ಕಾರಕ್ಕೆ ನಿರಂತರವಾಗಿ ಮುಜುಗರ ತರುತ್ತಿದ್ದಾರೆ. ಇಲಾಖೆ ಕಾರ್ಯದಲ್ಲಿ ಸಕ್ರಿಯವಾಗಿಲ್ಲ ಇಲ್ಲದವರು ಇದ್ದಾರೆ. ಹೀಗೆ ನಿಷ್ಕ್ರೀಯ ರೀತಿಯಲ್ಲಿ ಇರುವವರನ್ನು ಗುರುತಿಸಿ, ಸಭೆಯಲ್ಲಿ ಚರ್ಚಿಸಿ ಸಂಪುಟದಿಂದ ಕೈ ಬಿಡಲು ತೀರ್ಮಾನಿಸಲಾಗಿದೆ. ಹೊಸಬರಿಗೆ ಮಣೆ ಹಾಕಿ ಸಚಿವ ಸ್ಥಾನ ನೀಡುವ ಮುಖೇನ ಎದುರಾದ ಸಮಸ್ಯೆಗಳಿಗೆ ತಕ್ಕಮಟ್ಟಿಗೆ ಪರಿಹಾರ ಕಂಡುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.
-
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka Bypolls: ಇಂದು ದಾವಣಗೆರೆ ದಕ್ಷಿಣ-ಬಾಗಲಕೋಟೆ ಉಪಚುನಾವಣೆ ಮತದಾನ: ಪ್ರತಿಷ್ಠೆಯ ಕಣದಲ್ಲಿ ಗೆಲುವು ಯಾರಿಗೆ? -
ವಿಶ್ವ ಆರೋಗ್ಯ ದಿನ 2026: ಸ್ವಸ್ಥ ಕರ್ನಾಟಕ ನಿರ್ಮಾಣಕ್ಕೆ ಸಿದ್ದರಾಮಯ್ಯ ನೀಡಿದ 'ಆರೋಗ್ಯ ಭಾಗ್ಯ'ಗಳ ಪಟ್ಟಿ ಇಲ್ಲಿದೆ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್












Click it and Unblock the Notifications