Cabinet Reshuffle: ಉಪಚುನಾವಣೆ ಬಳಿಕ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ! 7 ಸಚಿವರಿಗೆ CM ಕೋಕ್? ಇಲ್ಲಿದೆ ಪಟ್ಟಿ
ಬೆಂಗಳೂರು, ನವೆಂಬರ್ 13: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ವಿವಿಧ ಭ್ರಷ್ಟಾಚಾರ ಆರೋಪಗಳನ್ನು ಎದರಿಸುತ್ತಿದೆ. ಸಚಿವರ ಹೇಳಿಕೆಗಳು ಸರ್ಕಾರಕ್ಕೆ ಸಂಕಷ್ಟ ತರುತ್ತಿದೆ. ಆಡಳಿತಯಂತ್ರ ಸುಸೂತ್ರವಾಗಿ ನಡೆಸಲು ಸಿದ್ದರಾಮಯ್ಯ ಅವರು ಉಪ ಚುನಾವಣೆ ಬಳಿಕ ಮೇಜರಿ ಸರ್ಜರಿ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ನಲ್ಲಿ ಸಚಿವ ಸಂಪುಟ ಪುನಾರಚರನೆ ಆಗಲಿದೆ, ಕೆಲವು ಸಚಿವರನ್ನು ಕೈ ಬಿಡಬಹುದು ಎಂದು ಮೂಲಗಳು ತಿಳಿಸಿವೆ.
ಭಷ್ಟಾಚಾರ ಹಣೆಪಟ್ಟಿ ಹೊತ್ತ, ವಿವಾದಗಳನ್ನು ಎಳೆದುಕೊಂಡು ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದ ವಿವಿಧ ಸುಮಾರು 07 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಡಿಸೆಂಬರ್ ಮೊದಲ ಇಲ್ಲವೇ ಎರಡನೇ ವಾರ ಸಂಪುಟ ಪುನಾರಚನೆ ಮಾಡಿ, ಆಡಳಿತಕ್ಕೆ ಚುರುಕು ನೀಡಲಾಗುತ್ತಿದೆ. ಇದರಿಂದ ಸರ್ಕಾರದಲ್ಲಿ ಅಸಮಾಧಾನದ ಹೊಗೆ ಸೃಷ್ಟಿಯಾಗಬಹುದು ಅಂತಲೂ ಅಂದಾಜಿಸಲಾಗಿದೆ.

ಕೈ ಬಿಡುವು ಸಚಿವರ ಸ್ಥಾನಗಳಿಗೆ ಅರ್ಹರನ್ನು ಹೊಸ ಮುಖಗಳನ್ನು ಕೂರಿಸುವ ಸಾಧ್ಯತೆ ಇದೆ. ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದೆ. ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಉಪಚುನಾವಣೆ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಕೇಂದ್ರ ವರಿಷ್ಠರು ಚರ್ಚಿಸಲಿದ್ದಾರೆ.
ಯಾರನ್ನು ಸಂಪುಟದಿಂದ ಕೈ ಬಿಡಬೇಕು. ಯಾರಿಗೆ ಮಣೆ ಹಾಕಬೇಕು. ಆಡಳಿತವು ಯಾವುದೇ ಆರೋಪ ಎದುರಿಸದೇ ಹೇಗೆ ಕಾರ್ಯನಿರ್ವಹಿಸಬೇಕು ಎಂಬೆಲ್ಲದರ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟದಿಂದ ಮಂತ್ರಿಗಿರಿ ಕಳೆದುಕೊಳ್ಳುವವರು ಯಾರು?
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಎಸ್.ಎಸ್.ಮಲ್ಲಿಕಾರ್ಜುನ್, ಬೋಸರಾಜು, ಕೆ.ಎನ್. ರಾಜಣ್ಣ ಸೇರಿದಂತೆ ಇಲಾಖೆಯಲ್ಲಿ ಹೆಚ್ಚು ಸಕ್ರಿಯರಲ್ಲದ ಸುಮಾರು ಏಳು ಸಚಿವರಿಗೆ ಸಿಎಂ ಕೋಕ್ ನೀಡುವ ಸಾಧ್ಯತೆ ಇದೆ.
ಆರ್ಬಿ ತಿಮ್ಮಾಪುರ ಅವರು ನಿರ್ವಹಿಸುತ್ತಿರುವ ಅಬಕಾರಿ ಇಲಾಖೆಯಲ್ಲಿ ನೂರಾರು ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ವಿಪಕ್ಷಗಳು ಅವರ ರಾಜೀನಾಮೆ ಪಡೆಯುವಂತೆ ಒತ್ತಡ ಹಾಕಿದ್ದಾರೆ.
ಅಲ್ಲದೇ ಇನ್ನೂ ಕೆಲ ಸಚಿವರು ತಮ್ಮ ವಿವಾದಿತ ಹೇಳಿಕೆಗಳಿಂದ ಸರ್ಕಾರಕ್ಕೆ ನಿರಂತರವಾಗಿ ಮುಜುಗರ ತರುತ್ತಿದ್ದಾರೆ. ಇಲಾಖೆ ಕಾರ್ಯದಲ್ಲಿ ಸಕ್ರಿಯವಾಗಿಲ್ಲ ಇಲ್ಲದವರು ಇದ್ದಾರೆ. ಹೀಗೆ ನಿಷ್ಕ್ರೀಯ ರೀತಿಯಲ್ಲಿ ಇರುವವರನ್ನು ಗುರುತಿಸಿ, ಸಭೆಯಲ್ಲಿ ಚರ್ಚಿಸಿ ಸಂಪುಟದಿಂದ ಕೈ ಬಿಡಲು ತೀರ್ಮಾನಿಸಲಾಗಿದೆ. ಹೊಸಬರಿಗೆ ಮಣೆ ಹಾಕಿ ಸಚಿವ ಸ್ಥಾನ ನೀಡುವ ಮುಖೇನ ಎದುರಾದ ಸಮಸ್ಯೆಗಳಿಗೆ ತಕ್ಕಮಟ್ಟಿಗೆ ಪರಿಹಾರ ಕಂಡುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications