Cabinet Reshuffle: ಕೈ ಪಾಳಯದಲ್ಲಿ ಸಂ'ಕ್ರಾಂತಿ'; ಸಿದ್ದರಾಮಯ್ಯ ಸಚಿವ ಸಂಪುಟದಿಂದ ಯಾರು ಇನ್? ಯಾರು ಔಟ್?: ಇಲ್ಲಿದೆ ಪಟ್ಟಿ
ಬೆಂಗಳೂರು: ಕರ್ನಾಟಕ ರಾಜಕೀಯದ ರಣರಂಗದಲ್ಲಿ ಇದೀಗ ಕುರುಕ್ಷೇತ್ರ'ಶುರುವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಎರಡೂವರೆ ವರ್ಷದ ಅಧಿಕಾರ ಹಂಚಿಕೆಯ ಸೂತ್ರದಂತೆ ಸಿಎಂ ಪಟ್ಟಕ್ಕಾಗಿ ಡಿ ಕೆ ಶಿವಕುಮಾರ್ ಅವರು ಪಣ ತೊಟ್ಟಿದ್ದಾರೆ. ಸ ಕಳೆದ ಹಲವು ತಿಂಗಳುಗಳಿಂದ ಮುಖ್ಯಮಂತ್ರಿ ಕುರ್ಚಿಗಾಗಿ ಹಗ್ಗಜಗ್ಗಾಟ ಇದೀಗ ತಾರಕಕ್ಕೇರಿದ್ದು, ಹೊಸ ವರ್ಷದ ಹೊತ್ತಲಿ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ನವೆಂಬರ್ ಕ್ರಾಂತಿಯಾಗಲಿ ಎಂದು ಹೇಳಲಾಗಿತ್ತು. ಇದೀಗ ನವೆಂಬರ್ ಆಯ್ತು, ಡಿಸೆಂಬರ್ ಆಯ್ತು.. ಇದೀಗ ಜನವರಿ ಸಂ ಕ್ರಾಂತಿ ಗಡುವು ಮುನ್ನಲೆಗೆ ಬಂದಿದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕುರ್ಚಿ ಕದನಕ್ಕೆ ಮತ್ತಷ್ಟು ರಂಗು ಹೆಚ್ಚಾಗುವ ಸಾಧ್ಯತೆ ಇದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಅಂತಿಮ ಹಂತದ ಫೈಟ್ ನಡೆಯುತ್ತಿದ್ದು, ಒಬ್ಬೊರಿಗೊಬ್ಬರೂ ಈಗ ನೇರವಾಗಿ ಫೀಲ್ಡಿಗಿಳಿದು ರಾಜಕೀಯದ ಕೊನೆಯ ಅಸ್ತ್ರಗಳನ್ನು ಹೂಡುತ್ತಿದ್ದಾರೆ.

ಇತ್ತ ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಹಲವು ಗೊಂದಲಗಳು ಉಂಟಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ಗೊಂದಲವನ್ನ ಬಗೆಹರಿಸಿಕೊಳ್ಳಿ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸೂಚನೆ ನೀಡಿದ್ದರು. ಅದರಂತೆ ಎರಡು ಬಾರೀ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿರುವ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಇನ್ನೂ ಕುರ್ಚಿ ಕಾಳಗ ಕಡಿಮೆಯಾಗಿಲ್ಲ. ಇದರ ನಡುವೆ ಸಚಿವ ಸ್ಥಾನದ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ನ ಹಿರಿಯ ನಾಯಕರು ಸಂಪುಟ ಪುನರ್ರಚನೆಗೆ ಒತ್ತಡ ಹಾಕಿದ್ದು, ಸಂಕ್ರಾಂತಿ ಹೊತ್ತಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಲಿದೆ.
ಸದ್ಯದಲ್ಲೇ ಸಂಪುಟ ಸೇರುವ ಕಾಲ ಬಂದಿತು ಎಂದು ಖುಷಿಯಾಗಿರುವ ಸಚಿವಾಕಾಂಕ್ಷಿಗಳಿಗೆ ಶುಭ ಸುದ್ದಿ ಸಿಕ್ಕಿದ್ದು, ಸಂಕ್ರಾಂತಿ ಬಳಿಕ ಸಚಿವ ಸಂಪುಟ ಪುನರ್ ರಚನೆ ಆಗಬಹುದು ಎಂದು ಹೇಳಲಾಗುತ್ತಿದೆ. ಜನವರಿಯಲ್ಲಿ ಸಂಕ್ರಾಂತಿ ಬಳಿಕವೇ ಸಂಪುಟಕ್ಕೆ ಸರ್ಜರಿ ಮಾಡಬಹುದು ಎಂಬ ಮಾಹಿತಿ ಒನ್ ಇಂಡಿಯಾ ಕನ್ನಡಕ್ಕೆ ಲಭ್ಯವಾಗಿದೆ. ಹಾಲಿ ಸಚಿವರಿಗೆ ಪಕ್ಷದ ಕೆಲಸ ನೀಡಿ ಎಂದಿರೋ ಹೈಕಮಾಂಡ್ ನಾಯಕರು, ಸಂಪುಟ ಪುನಾರಚನೆ ಬದಲಾಗಿ 4 ಪ್ರಮುಖ ಸ್ಥಾನಗಳನ್ನು ತುಂಬುವ ಬಗ್ಗೆ ಚರ್ಚೆ ಮಾಡಿದ್ದಾರೆ. ನಾಗೇಂದ್ರ, ರಾಜಣ್ಣರಿಂದ ಖಾಲಿಯಾದ ಸ್ಥಾನ ತುಂಬೋದು, ಪರಿಷತ್ ಸಭಾಪತಿ & ಉಪಸಭಾಪತಿ ಆಯ್ಕೆ ಬಗ್ಗೆ ಪ್ರಸ್ತಾಪವೂ ಆಗಿದೆ. ಎಲ್ಲ ಆಯ್ಕೆಯನ್ನೂ ಹೈಕಮಾಂಡ್ ಮುಕ್ತವಾಗಿಯೇ ಇಟ್ಟಿದೆ ಎಂದು ಹೇಳಲಾಗುತ್ತಿದೆ.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಎಂಟರಿಂದ ಹತ್ತರಷ್ಟು ಸಚಿವರನ್ನ ಕೈಬಿಟ್ಟು ಹೊಸ ಮುಖಗಳಿಗೆ ಹಾಗೂ ಹಿರಿಯ ಶಾಸಕರನ್ನ ಸಂಪುಟಕ್ಕೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದ್ದು, ಸಿದ್ದರಾಮಯ್ಯ ಸಂಪುಟದಲ್ಲಿರುವ ಅಸಮರ್ಥ ಸಚಿವರನ್ನ ಕೈ ಬಿಡುವ ಕುರಿತು ಚರ್ಚೆ ಶುರುವಾಗಿದ್ದು, ಸಚಿವರ ಸಾಮರ್ಥ್ಯದ ಬಗ್ಗೆ ವರಿಷ್ಠರಿಗೆ ಕೆಪಿಸಿಸಿ, ಉಸ್ತುವಾರಿ ವರದಿಯನ್ನ ತರಿಸಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಯಾವ್ಯಾವ ಸಚಿವರ ಕಾರ್ಯವೈಖರಿ ಹೇಗಿದೆ ಎಂಬ ಬಗ್ಗೆ ಹೈಕಮಾಂಡ್ ಅಳೆದು ತೂಗಿ ಸಂಪುಟದಿಂದ ಕೈ ಬಿಡಲು ನಿರ್ಧಾರಿಸಿದೆ ಎನ್ನಲಾಗಿದೆ.
ಯಾರು ಸಂಪುಟದಿಂದ ಔಟ್?
* ಎಂ.ಸಿ. ಸುಧಾಕರ್
* ರಹೀಂ ಖಾನ್
* ಎನ್ ಎಸ್ ಬೋಸರಾಜು
* ಕೆಎಚ್ ಮುನಿಯಪ್ಪ
* ಡಿ. ಸುಧಾಕರ್
* ಮಧು ಬಂಗಾರಪ್ಪ
* ಲಕ್ಷ್ಮೀ ಹೆಬ್ಬಾಳ್ಕರ್
* ಶಿವಾನಂದ ಪಾಟೀಲ್
ಯಾರು ಸಂಪುಟಕ್ಕೆ ಇನ್?
* ಬಿಕೆ ಹರಿಪ್ರಸಾದ್
* ಅನಿಲ್ ಚಿಕ್ಕಮಾದು
* ವಿನಯ್ ಕುಲಕರ್ಣಿ
* ವಿಜಯಾನಂದ ಕಾಶಪ್ಪನವರ್
* ಬಿ ಆರ್ ಪಾಟೀಲ
* ಟಿ ರಘುಮೂರ್ತಿ
* ಬಿಕೆ ಸಂಗಮೇಶ್
* ತನ್ವೀರ್ ಸೇಠ್
* ಅಜಯ್ ಸಿಂಗ್
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications