DCM DK Shivakumar: ರಾಜ್ಯ ಸಚಿವ ಸಂಪುಟ ಪುನಾರಚನೆ!? : ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಆಗಸ್ಟ್ 16: ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದುಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಸೂಚಿಸಿದ್ದು, ಕಾಂಗ್ರೆಸ್ ರಾಜ್ಯ ಘಟಕವನ್ನು ಪುನರುಜ್ಜೀವನಗೊಳಿಸಿ ಹೊಸ ತಂಡವನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ಕೆಪಿಸಿಸಿ ಸಾಮಾನ್ಯ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.2024 ಲೋಕಸಭಾ ಚುನಾವಣೆ ಮತ್ತು 2028 ಮುಂದಿನ ವಿಧಾನಸಭಾ ಚುನಾವಣೆ ಗಾಗಿ ಉತ್ತಮ ಅಡಿಪಾಯವನ್ನು ಸಿದ್ಧಪಡಿಸಬೇಕು. ನಾವು ಮುಂದಿನ ದಿನಗಳಲ್ಲಿ ಕೆಪಿಸಿಸಿಯನ್ನು ಪುನರುಜ್ಜೀವನಗೊಳಿಸಬೇಕಾಗಿದೆ, ಬ್ಲಾಕ್ನಿಂದ ಜಿಲ್ಲೆಗೆ ಕೆಪಿಸಿಸಿ ಮಟ್ಟಕ್ಕೆ ಬದಲಾವಣೆಗಳು ಮತ್ತು ಹೊಸ ತಂಡವನ್ನು ನಾವು ಪುನರುಜ್ಜೀವನಗೊಳಿಸಬೇಕಾಗಿದೆ ಎಂದು ಹೇಳಿದರು.

ಇನ್ನೂ ಪಕ್ಷದ ಹಿರಿಯ ನಾಯಕ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರು 2.5 ವರ್ಷಗಳ ನಂತರ ಹೊಸ ಮುಖಗಳಿಗೆ ದಾರಿ ಮಾಡಿಕೊಡುವಂತೆ ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಗಳಿಗೆ ಕರೆ ನೀಡಿದರು. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಯಾವುದೇ ತ್ಯಾಗ ಮಾಡದೆ ಇತರರು ನೋಡಬೇಕೆಂದು ನಾವು ನಿರೀಕ್ಷಿಸುವುದು ಒಳ್ಳೆಯದಲ್ಲ, ನಾವು ಐದು ಖಾತರಿಗಳನ್ನು ಜಾರಿಗೊಳಿಸುವ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದ್ದೇವೆ. ಅದೇ ರೀತಿ 2.5 ವರ್ಷಗಳ ನಂತರ ಇತರರಿಗೆ ದಾರಿ ಮಾಡಿಕೊಡುವ ಹೊಸ ಪದ್ಧತಿಯನ್ನು ಪರಿಚಯಿಸುವ ಮೂಲಕ ನಾವು ಮಾಡುತ್ತೇವೆ. ದೇಶಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಇನ್ನೂ ಎರಡೂವರೆ ವರ್ಷಗಳ ಬಳಿಕ ಹಿರಿಯರು ಅಧಿಕಾರ ಬಿಟ್ಟುಕೊಡಬೇಕು ಎಂಬ ಮುನಿಯಪ್ಪ ಅವರ ಹೇಳಿಕೆ ಕುರಿತು ಡಿ ಕೆ ಶಿವಕುಮಾರ್ ಮಾತನಾಡಿ, ಈ ಬಗ್ಗೆ ನಾನು ಏನೂ ಹೇಳುವುದಿಲ್ಲ. ಇದು ಪಕ್ಷದ ಆಂತರಿಕ ವಿಚಾರ. ಈ ವಿಚಾರವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ನಾವು ಸರ್ಕಾರ ಮಾಡುತ್ತಿದ್ದು, ನಮ್ಮ ಐದು ವರ್ಷಗಳ ಅವಧಿಯಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಬಿಜೆಪಿ ನಾಯಕರ ಆರೋಪಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯ ನವರಂಗಿ ನಾರಾಯಣ ಮತ್ತು ತಂಡಡವರು ನಾವು ತನಿಖೆ ಮಾಡುತ್ತಿರುವುದಕ್ಕೆ ಹೆದರಿಕೊಂಡಿದ್ದಾರೆ. ಅದರಿಂದ ಇಲ್ಲ, ಸಲ್ಲದ ಆರೋಪ ಮಾಡುತ್ತಿದ್ದಾರೆ. ಯಾವ ಗುತ್ತಿಗೆದಾರರಿಗೂ ನಾವು ತೊಂದರೆ ನೀಡುವುದಿಲ್ಲ. ಯಾರು ಕೆಲಸ ಮಾಡಿದ್ದಾರೋ ಅವರಿಗೆ ಹಣ ಸಿಗಲಿದೆ.
ಬಿಜೆಪಿ ಸರ್ಕಾರ ಕಳೆದ ಎರಡು ಮೂರು ವರ್ಷಗಳಿಂದ ಬಿಲ್ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವುದೇಕೆ? ಈ ಬಗ್ಗೆ ಅಂಕಿ ಅಂಶಗಳ ಸಮೇತ ಮಾತನಾಡುತ್ತೇನೆ. ನಮ್ಮ ಸರ್ಕಾರ ಕಮಿಷನ್ ಕೇಳಿಲ್ಲ ಎಂದು ಸತ್ಯಹೇಳಿದ್ದಕ್ಕೆ ಕೆಂಪಣ್ಣ ಅವರಿಗೆ ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರಿಗೆ ಧನ್ಯವಾದ ಹೇಳುತ್ತೇನೆ. ದಕ್ಷ ಆಡಳಿತ ನೀಡುವುದು ನಮ್ಮ ಗುರಿ. ಹೀಗಾಗಿ ಬಿಜೆಪಿ ಸುಳ್ಳು ಆರೋಗಳಿಗೆ ಹೆದರದೆ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಎನ್ಇಪಿ ರದ್ದು ಮಾಡುತ್ತಿರುವುದು ಮೋದಿ ಅವರ ಮೇಲಿರುವ ದ್ವೇಷದಿಂದ ಎಂಬ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಹರಿಯಾಣ ಇಲ್ಲೆಲ್ಲ ಏಕೆ ಎನ್ಇಪಿ ಜಾರಿಗೆ ತಂದಿಲ್ಲ? ಮೊದಲು ಅಲ್ಲಿ ಜಾರಿ ಮಾಡಲಿ. ಅವರಿಗೆ ಕರ್ನಾಟಕದ ಮೇಲೆ ಏಕೆ ಕಣ್ಣು? ಎನ್ಇಪಿ ಎಂದರೆ "ನಾಗ್ಪುರ ಎಜುಕೇಷನ್ ಪಾಲಿಸಿ" ಅದು ನಮಗೆ ಬೇಕಾಗಿಲ್ಲ.
ನಮ್ಮ ಮಕ್ಕಳ ಭವಿಷ್ಯದ ಜೊತೆ ಆಟವಾಡಲು ಬಿಡುವುದಿಲ್ಲ. ಇಷ್ಟು ದಿನ ನಮ್ಮ ರಾಜ್ಯದಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆ ಇತ್ತು. ಇಲ್ಲಿ ಓಡಿರುವವರು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ನಮ್ಮ ಶಿಕ್ಷಣ ನೀತಿ ಬಗ್ಗೆ ನಮಗೆ ಹೆಮ್ಮೆ ಇದೆ. ಎನ್ ಇಪಿ ರದ್ದು ಮಾಡುವುದಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ರಾಜ್ಯ ಪಟ್ಟಿಯಲ್ಲಿ ಬರುವ ವಿಷಯದ ಬಗ್ಗೆ ಅವರಿಗೆ ಚಿಂತೆ ಬೇಡ ಎಂದು ಹೇಳಿದರು












Click it and Unblock the Notifications