ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: ಸಚಿವ ಸ್ಥಾನದ ಪೋನ್ ಕರೆ ಯಾರಿಗೆ ಬರುತ್ತೋ!
ಬೆಂಗಳೂರು, ಏ. 22: ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸಂಪುಟ ಸದಸ್ಯರ ಎದೆ ಬಡಿತ ಶುರುವಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಮಾದರಿಯಲ್ಲಿ ಬೊಮ್ಮಾಯಿ ಕ್ಯಾಬಿನಟ್ಗೆ ಸರ್ಜರಿ ಮಾಡಲು ಬಿಜೆಪಿ ಕೇಂದ್ರ ವರಿಷ್ಠರು ಚಿಂತನೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್ನಲ್ಲಿ ಕೆಲವರನ್ನು ಹೊರತು ಪಡಿಸಿದರೆ 20 ಹಿರಿಯ ನಾಯಕರಿಗೆ ಸಚಿವ ಸ್ಥಾನದಿಂದ ಕೊಕ್ ನೀಡಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಬೊಮ್ಮಾಯಿ ಸಂಪುಟಕ್ಕೆ ಏ. 24 ರ ಬಳಿಕ ಮೇಜರ್ ಸರ್ಜರಿಯಾಗಲಿದ್ದು, 20 ಹಿರಿಯ ತಲೆಗಳ ಸಚಿವ ಸ್ಥಾನಕ್ಕೆ ಕೊಕ್ ನೀಡಲಾಗುತ್ತಿದೆ. ಅವರ ಜಾಗದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ. ಏ. 24 ರ ಬಳಿಕ ಕೇಂದ್ರದ ವರಿಷ್ಠರೇ ಬಸವರಾಜ ಬೊಮ್ಮಾಯಿ ಕೈಗೆ ಹೊಸ ಸಚಿವರ ಪಟ್ಟಿಯನ್ನು ನೀಡಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಗುಜರಾತ್ ಮಾದರಿ?
ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟಕ್ಕೆ ಸರ್ಜರಿ ಮಾಡಿ ಆಡಳಿತಕ್ಕೆ ವೇಗ ನೀಡಲು ಕೇಂದ್ರ ವರಿಷ್ಠರು ತೀರ್ಮಾನಿಸಿದ್ದಾರೆ. ವಿವಿಧ ಇಲಾಖೆಗಳಲ್ಲಿ ಕೇಳಿಬರುತ್ತಿರುವ ಕಮೀಷನ್ ದಂಧೆ ಆರೋಪ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದೆ. ಇದರ ಜತೆಗೆ ಪಕ್ಷಕ್ಕಾಗಿ ಶ್ರಮಿಸಿದ ಪಕ್ಷದ ಯುವ ನಾಯಕರಿಗೆ ಅವಕಾಶ ಕಲ್ಪಿಸಿ ಎಲ್ಲರಿಗೂ ಅವಕಾಶ ಕೊಡುವ ವಿಚಾರ ಮುಂದಿಟ್ಟುಕೊಂಡು ಜಾತಿವಾರು ಹಾಗೂ ಸಮುದಾಯವಾರು ಹೊಸ ಸಚಿವರ ಪಟ್ಟಿಯನ್ನು ವರಿಷ್ಠರು ಸಿದ್ದಪಡಿಸುತ್ತಿದ್ದಾರೆ. ಸಂಪುಟ ಸರ್ಜರಿ ಕುರಿತು ಸಮಾಲೋಚನೆ ಮಾಡಲು ಪಕ್ಷದ ವರಿಷ್ಠರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕಲಬುರಗಿ ಪ್ರವಾಸ ಮುಗಿಸಿ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಚಿವ ಸಂಪುಟ ಲಾಬಿ ಶುರುವಾದರೆ ಪರಿಸ್ಥಿತಿ ನಿಭಾಯಿಸುವುದು ಸಮಸ್ಯೆಯಾಗುತ್ತದೆ. ಹೀಗಾಗಿ ಸೀಕ್ರೇಟ್ ಆಗಿ ಕೇಂದ್ರ ವರಿಷ್ಠರಿಂದ ಸಚಿವರಾಗಿ ಅಯ್ಕೆಯಾಗಿರುವರಿಗೆ ಸಂದೇಶ ಬರಲಿದೆ. ಹಿರಿಯ ನಾಯಕರಿಗೆ ಮುಂದಿನ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಜವಾಬ್ದಾರಿ ವಹಿಸಿ ಹೊಸಬರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. ಈ ಮೂಲಕ ಪಕ್ಷದಲ್ಲಿ ಸಚಿವ ಸ್ಥಾನ ಸಿಗಲಿಲ್ಲ ಎಂಬ ಭಿನ್ನಮತ ಸ್ಫೋಟಿಸದಂತೆ ಚಾಣಾಕ್ಷ ನಿರ್ಧಾರವನ್ನು ಬಿಜೆಪಿ ವರಿಷ್ಠರು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೊಮ್ಮಾಯಿ ಸರ್ಕಾರದ ಹಿರಿಯ ಸಚಿವರ ಎದೆಯಲ್ಲಿ ಅದಾಗಲೇ ಎದೆ ಬಡಿತ ಶುರುವಾಗಿದೆ. ಸಚಿವರಾಗಿ ಈವರೆಗೂ ಮಾಡಿರುವ ಕಾರ್ಯಗಳು, ಇದರಿಂದ ಪಕ್ಷದ ವರ್ಚಸ್ಸು ಹೆಚ್ಚಳ ಆಗಿರುವ ಮಾನದಂಡ ಇಟ್ಟುಕೊಂಡು ಎಲ್ಲಾ ಸಚಿವರ ಕಾರ್ಯ ವೈಖರಿಯ ಬಗ್ಗೆ ಕೇಂದ್ರ ವರಿಷ್ಠರು ಮಾಹಿತಿ ಪಡೆದುಕೊಂಡಿದ್ದಾರೆ. 20 ಸಚಿವರನ್ನು ಬದಲಿಸಿ ಆ ಜಾಗಕ್ಕೆ ಹೊಸ ಮುಖಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಏ. 24 ರ ನಂತರ ಸಚಿವ ಸಂಪುಟ ಬದಲಾವಣೆ ಪ್ರಕ್ರಿಯೆ ಶುರುವಾಗಲಿದೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.
Recommended Video
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications