Get Updates
Get notified of breaking news, exclusive insights, and must-see stories!

ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: ಸಚಿವ ಸ್ಥಾನದ ಪೋನ್ ಕರೆ ಯಾರಿಗೆ ಬರುತ್ತೋ!

ಬೆಂಗಳೂರು, ಏ. 22: ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸಂಪುಟ ಸದಸ್ಯರ ಎದೆ ಬಡಿತ ಶುರುವಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಮಾದರಿಯಲ್ಲಿ ಬೊಮ್ಮಾಯಿ ಕ್ಯಾಬಿನಟ್‌ಗೆ ಸರ್ಜರಿ ಮಾಡಲು ಬಿಜೆಪಿ ಕೇಂದ್ರ ವರಿಷ್ಠರು ಚಿಂತನೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಕೆಲವರನ್ನು ಹೊರತು ಪಡಿಸಿದರೆ 20 ಹಿರಿಯ ನಾಯಕರಿಗೆ ಸಚಿವ ಸ್ಥಾನದಿಂದ ಕೊಕ್ ನೀಡಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬೊಮ್ಮಾಯಿ ಸಂಪುಟಕ್ಕೆ ಏ. 24 ರ ಬಳಿಕ ಮೇಜರ್ ಸರ್ಜರಿಯಾಗಲಿದ್ದು, 20 ಹಿರಿಯ ತಲೆಗಳ ಸಚಿವ ಸ್ಥಾನಕ್ಕೆ ಕೊಕ್ ನೀಡಲಾಗುತ್ತಿದೆ. ಅವರ ಜಾಗದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಲು ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ. ಏ. 24 ರ ಬಳಿಕ ಕೇಂದ್ರದ ವರಿಷ್ಠರೇ ಬಸವರಾಜ ಬೊಮ್ಮಾಯಿ ಕೈಗೆ ಹೊಸ ಸಚಿವರ ಪಟ್ಟಿಯನ್ನು ನೀಡಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಗುಜರಾತ್ ಮಾದರಿ?

ಗುಜರಾತ್ ಮಾದರಿಯಲ್ಲಿ ಸಚಿವ ಸಂಪುಟಕ್ಕೆ ಸರ್ಜರಿ ಮಾಡಿ ಆಡಳಿತಕ್ಕೆ ವೇಗ ನೀಡಲು ಕೇಂದ್ರ ವರಿಷ್ಠರು ತೀರ್ಮಾನಿಸಿದ್ದಾರೆ. ವಿವಿಧ ಇಲಾಖೆಗಳಲ್ಲಿ ಕೇಳಿಬರುತ್ತಿರುವ ಕಮೀಷನ್ ದಂಧೆ ಆರೋಪ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದೆ. ಇದರ ಜತೆಗೆ ಪಕ್ಷಕ್ಕಾಗಿ ಶ್ರಮಿಸಿದ ಪಕ್ಷದ ಯುವ ನಾಯಕರಿಗೆ ಅವಕಾಶ ಕಲ್ಪಿಸಿ ಎಲ್ಲರಿಗೂ ಅವಕಾಶ ಕೊಡುವ ವಿಚಾರ ಮುಂದಿಟ್ಟುಕೊಂಡು ಜಾತಿವಾರು ಹಾಗೂ ಸಮುದಾಯವಾರು ಹೊಸ ಸಚಿವರ ಪಟ್ಟಿಯನ್ನು ವರಿಷ್ಠರು ಸಿದ್ದಪಡಿಸುತ್ತಿದ್ದಾರೆ. ಸಂಪುಟ ಸರ್ಜರಿ ಕುರಿತು ಸಮಾಲೋಚನೆ ಮಾಡಲು ಪಕ್ಷದ ವರಿಷ್ಠರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕಲಬುರಗಿ ಪ್ರವಾಸ ಮುಗಿಸಿ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

Karnataka Cabinet Restructuring: 20 Ministers Likely to be removed

ಸಚಿವ ಸಂಪುಟ ಲಾಬಿ ಶುರುವಾದರೆ ಪರಿಸ್ಥಿತಿ ನಿಭಾಯಿಸುವುದು ಸಮಸ್ಯೆಯಾಗುತ್ತದೆ. ಹೀಗಾಗಿ ಸೀಕ್ರೇಟ್ ಆಗಿ ಕೇಂದ್ರ ವರಿಷ್ಠರಿಂದ ಸಚಿವರಾಗಿ ಅಯ್ಕೆಯಾಗಿರುವರಿಗೆ ಸಂದೇಶ ಬರಲಿದೆ. ಹಿರಿಯ ನಾಯಕರಿಗೆ ಮುಂದಿನ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಜವಾಬ್ದಾರಿ ವಹಿಸಿ ಹೊಸಬರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. ಈ ಮೂಲಕ ಪಕ್ಷದಲ್ಲಿ ಸಚಿವ ಸ್ಥಾನ ಸಿಗಲಿಲ್ಲ ಎಂಬ ಭಿನ್ನಮತ ಸ್ಫೋಟಿಸದಂತೆ ಚಾಣಾಕ್ಷ ನಿರ್ಧಾರವನ್ನು ಬಿಜೆಪಿ ವರಿಷ್ಠರು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Karnataka Cabinet Restructuring: 20 Ministers Likely to be removed

ಬೊಮ್ಮಾಯಿ ಸರ್ಕಾರದ ಹಿರಿಯ ಸಚಿವರ ಎದೆಯಲ್ಲಿ ಅದಾಗಲೇ ಎದೆ ಬಡಿತ ಶುರುವಾಗಿದೆ. ಸಚಿವರಾಗಿ ಈವರೆಗೂ ಮಾಡಿರುವ ಕಾರ್ಯಗಳು, ಇದರಿಂದ ಪಕ್ಷದ ವರ್ಚಸ್ಸು ಹೆಚ್ಚಳ ಆಗಿರುವ ಮಾನದಂಡ ಇಟ್ಟುಕೊಂಡು ಎಲ್ಲಾ ಸಚಿವರ ಕಾರ್ಯ ವೈಖರಿಯ ಬಗ್ಗೆ ಕೇಂದ್ರ ವರಿಷ್ಠರು ಮಾಹಿತಿ ಪಡೆದುಕೊಂಡಿದ್ದಾರೆ. 20 ಸಚಿವರನ್ನು ಬದಲಿಸಿ ಆ ಜಾಗಕ್ಕೆ ಹೊಸ ಮುಖಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಏ. 24 ರ ನಂತರ ಸಚಿವ ಸಂಪುಟ ಬದಲಾವಣೆ ಪ್ರಕ್ರಿಯೆ ಶುರುವಾಗಲಿದೆ ಎಂದು ಉನ್ನತ ಮೂಲಗಳು ಸ್ಪಷ್ಟಪಡಿಸಿವೆ.

Recommended Video

      RCB ಗೆ ಆರಂಭಿಕನದ್ದೇ ಚಿಂತೆ:ಅನುಜ್ ರಾವತ್ ತಂಡದಿಂದ‌ ಔಟ್ ಆದ್ರೆ ಯಾರು ಇನ್?? | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+