ಕರ್ನಾಟಕ ಸಿಇಟಿ 2020 ದಿನಾಂಕ, ವೇಳಾಪಟ್ಟಿ ಪ್ರಕಟ
ಬೆಂಗಳೂರು, ಮೇ 19: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕಾಮನ್ ಎಂಟರೆನ್ಸ್ ಟೆಸ್ಟ್(ಸಿಇಟಿ) 2020 ದಿನಾಂಕ ನಿಗದಿಯಾಗಿದೆ. ಜುಲೈ 30 ಮತ್ತು ಜುಲೈ 31ಕ್ಕೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಂಗಳವಾರದಂದು ಪ್ರಕಟಿಸಿದೆ.
ಕೊರೊನಾವೈರಸ್ ಸೋಂಕು ಹರಡದಂತೆ ವಿಧಿಸಲಾದ ಲಾಕ್ ಡೌನ್ ನಿಂದಾಗಿ ಸಿಇಟಿ ಮುಂದೂಡಲಾಗಿತ್ತು.ಜುಲೈ 30ರಂದು ನಿಗದಿಯಾಗಿರುವ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ರಾಜ್ಯದಲ್ಲಿ ಒಟ್ಟು 75 ಸ್ಥಳಗಳನ್ನು ಹೊಸ ಪರೀಕ್ಷಾ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ತಾಣದಲ್ಲಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಸಿಇಟಿ 2020 ವೇಳಾಪಟ್ಟಿ:
30/7/2020(ಗುರುವಾರ)
ಬೆಳಗ್ಗೆ 10.30 ರಿಂದ 11.50 ಜೀವಶಾಸ್ತ್ರ (60 ಅಂಕ),
ಮಧ್ಯಾಹ್ನ 2.30ರಿಂದ 3.50ರ ತನಕ ಗಣಿತ (60 ಅಂಕ).

31/7/2020 ಶುಕ್ರವಾರ
ಬೆಳಗ್ಗೆ 10.30ರಿಂದ 11.50 ತನಕ ಭೌತಶಾಸ್ತ್ರ (60 ಅಂಕ), ಮಧ್ಯಾಹ್ನ 2.30ರಿಂದ 3.50ರ ತನಕ ರಸಾಯನ ಶಾಸ್ತ್ರ (60 ಅಂಕಗಳು)
1/8/2020 ಶನಿವಾರ
ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ತನಕ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ (50 ಅಂಕಗಳು)
ವಿದ್ಯಾರ್ಥಿಗಳು ತಾವು ಮೊದಲು ನಿಗದಿಪಡಿಸಿಕೊಂಡ ಪರೀಕ್ಷಾ ಕೇಂದ್ರವನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಮೊದಲ ವರ್ಷ/ಸೆಮಿಸ್ಟರ್ ಇಂಜಿನಿಯರ್, ತಂತ್ರಜ್ಞಾನ, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ ಕೋರ್ಸ್, ಬಿ ಫಾರ್ಮಾ, ಫಾರ್ಮಾ ಡಿ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗುತ್ತದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications