ಸಿಇಟಿ 2017 ಫಲಿತಾಂಶ ಈಗ ಆನ್ ಲೈನ್ ನಲ್ಲಿ ಲಭ್ಯ
2017ರ ಸಿಇಟಿ ಫಲಿತಾಂಶವು ಮಂಗಳವಾರ(ಮೇ 30) ರಂದು ಮಧ್ಯಾಹ್ನ 1 ಗಂಟೆಯಿಂದ ಆನ್ ಲೈನ್ ನಲ್ಲಿ ವೀಕ್ಷಣೆ ಲಭ್ಯವಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.
ಬೆಂಗಳೂರು, ಮೇ 30: 2017ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ(ಮೇ 30) ಮಧ್ಯಾಹ್ನ 11.15 ಗಂಟೆ ಸುಮಾರಿಗೆ ಪ್ರಕಟಿಸಿದರು.
ಮಂಗಳವಾರ(ಮೇ 30) ರಂದು ಮಧ್ಯಾಹ್ನ 1 ಗಂಟೆಯಿಂದ ಆನ್ ಲೈನ್ ನಲ್ಲಿ ವೀಕ್ಷಣೆ ಲಭ್ಯವಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ನಿಗದಿತ ವೇಳಾಪಟ್ಟಿಯಂತೆ ಜೂ.1ರಿಂದ ದಾಖಲೆಗಳ ಪರಿಶೀಲನೆ ಆರಂಭವಾಗಲಿದೆ.[ಸಿಇಟಿ 2017 : ಪ್ರತೀಕ್ ಹಾಗೂ ರಕ್ಷಿತ ಟಾಪರ್ಸ್]
* ಇಂಜಿನಿಯರಿಂಗ್ ನಲ್ಲಿ ಅಗ್ರಸ್ಥಾನ ಪ್ರತೀಕ್ ನಾಯಕ್ ಟಾಪರ್, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜು.
* ದ್ವಿತೀಯ ಸ್ಥಾನದಲ್ಲಿ ಸುಮಂತ್ ಹೆಗಡೆ,ವಿವಿಎಸ್ ಸರ್ದಾರ್ ಕಾಲೇಜು
* ಮೂರನೇ ಸ್ಥಾನದಲ್ಲಿ ಅನಿರುದ್ಧ್, ಆರ್ ವಿ ಪಿಯು ಕಾಲೇಜು, ಬೆಂಗಳೂರು
ಮೇ 27ರಂದು ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಳಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಹಾಗೂ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷಟ್ (ಐಸಿಎಸ್ಇ)ಮಾನ್ಯತೆ ಹೊಂದಿರುವ ಕಾಲೇಜುಗಳಲ್ಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ತಡವಾಗಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ವಿಳಂಬವಾಗಿತ್ತು. ಇಂದು ಕೂಡಾ 11 ಗಂಟೆಗೆ ಪ್ರಕಟವಾಗಬೇಕಿದ್ದ ಫಲಿತಾಂಶ ವಿಳಂಬವಾಗಿದೆ.

ಸಿಇಟಿ ಫಲಿತಾಂಶ ಚೆಕ್ ಮಾಡುವುದು ಹೇಗೆ?:
* ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ
* Kea.kar.nic.in ಅಥವಾ Karresults.nic.in
* "ಸಿಇಟಿ 2017" ಬಟನ್ ಮೇಲೆ ಕ್ಲಿಕ್ ಮಾಡಿ
* ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿ
* ರಿಸಲ್ಟ್ ಪಡೆಯಿರಿ, ಡೌನ್ ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ
ವಿವಿಧ ವೃತ್ತಿಪರ ಕೋರ್ಸ್(ಬಿಇ, ಬಿಫಾರ್ಮಾ, ಆಯುಷ್, ಕೃಷಿ ಇಂಜಿನಿಯರಿಂಗ್) ಗಳ ಪ್ರವೇಶಕ್ಕಾಗಿ ನಡೆಯುವ 2017ನೇ ಸಾಲಿನ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 2 ಹಾಗೂ 3ರಂದು ನಡೆಸಲಾಗಿತ್ತು. ಬೆಂಗಳೂರಿನ 82 ಸೇರಿ ರಾಜ್ಯಾದ್ಯಾಂತ 404 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 94,415 ವಿದ್ಯಾರ್ಥಿ ಹಾಗೂ 90,996 ವಿದ್ಯಾರ್ಥಿನಿಯರು ಸೇರಿದಂತೆ 1,85,411 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಸರ್ಕಾರದಿಂದ ಉಚಿತ ಶಿಕ್ಷಣ : 'ಸಿಇಟಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಐದು ಜನರಿಗೆ ಅವರ ಕೋರ್ಸ್ ಮುಗಿಯುವವರೆಗೆ ಸರ್ಕಾರದಿಂದ ಉಚಿತ ಶಿಕ್ಷಣ ನೀಡಲಾಗುತ್ತದೆ' ಎಂದು ಕರ್ನಾಟಕ ಸರ್ಕಾರ 2016ರಲ್ಲೇ ಘೋಷಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications