ಸಿಇಟಿ 2017 ಫಲಿತಾಂಶ ಈಗ ಆನ್ ಲೈನ್ ನಲ್ಲಿ ಲಭ್ಯ
2017ರ ಸಿಇಟಿ ಫಲಿತಾಂಶವು ಮಂಗಳವಾರ(ಮೇ 30) ರಂದು ಮಧ್ಯಾಹ್ನ 1 ಗಂಟೆಯಿಂದ ಆನ್ ಲೈನ್ ನಲ್ಲಿ ವೀಕ್ಷಣೆ ಲಭ್ಯವಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ.
ಬೆಂಗಳೂರು, ಮೇ 30: 2017ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ(ಮೇ 30) ಮಧ್ಯಾಹ್ನ 11.15 ಗಂಟೆ ಸುಮಾರಿಗೆ ಪ್ರಕಟಿಸಿದರು.
ಮಂಗಳವಾರ(ಮೇ 30) ರಂದು ಮಧ್ಯಾಹ್ನ 1 ಗಂಟೆಯಿಂದ ಆನ್ ಲೈನ್ ನಲ್ಲಿ ವೀಕ್ಷಣೆ ಲಭ್ಯವಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ನಿಗದಿತ ವೇಳಾಪಟ್ಟಿಯಂತೆ ಜೂ.1ರಿಂದ ದಾಖಲೆಗಳ ಪರಿಶೀಲನೆ ಆರಂಭವಾಗಲಿದೆ.[ಸಿಇಟಿ 2017 : ಪ್ರತೀಕ್ ಹಾಗೂ ರಕ್ಷಿತ ಟಾಪರ್ಸ್]
* ಇಂಜಿನಿಯರಿಂಗ್ ನಲ್ಲಿ ಅಗ್ರಸ್ಥಾನ ಪ್ರತೀಕ್ ನಾಯಕ್ ಟಾಪರ್, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜು.
* ದ್ವಿತೀಯ ಸ್ಥಾನದಲ್ಲಿ ಸುಮಂತ್ ಹೆಗಡೆ,ವಿವಿಎಸ್ ಸರ್ದಾರ್ ಕಾಲೇಜು
* ಮೂರನೇ ಸ್ಥಾನದಲ್ಲಿ ಅನಿರುದ್ಧ್, ಆರ್ ವಿ ಪಿಯು ಕಾಲೇಜು, ಬೆಂಗಳೂರು
ಮೇ 27ರಂದು ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟಗೊಳಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿತ್ತು. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ ಇ) ಹಾಗೂ ಇಂಡಿಯನ್ ಸ್ಕೂಲ್ ಸರ್ಟಿಫಿಕೆಟ್ ಎಕ್ಸಾಮಿನೇಷಟ್ (ಐಸಿಎಸ್ಇ)ಮಾನ್ಯತೆ ಹೊಂದಿರುವ ಕಾಲೇಜುಗಳಲ್ಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ತಡವಾಗಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ವಿಳಂಬವಾಗಿತ್ತು. ಇಂದು ಕೂಡಾ 11 ಗಂಟೆಗೆ ಪ್ರಕಟವಾಗಬೇಕಿದ್ದ ಫಲಿತಾಂಶ ವಿಳಂಬವಾಗಿದೆ.

ಸಿಇಟಿ ಫಲಿತಾಂಶ ಚೆಕ್ ಮಾಡುವುದು ಹೇಗೆ?:
* ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ
* Kea.kar.nic.in ಅಥವಾ Karresults.nic.in
* "ಸಿಇಟಿ 2017" ಬಟನ್ ಮೇಲೆ ಕ್ಲಿಕ್ ಮಾಡಿ
* ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿ
* ರಿಸಲ್ಟ್ ಪಡೆಯಿರಿ, ಡೌನ್ ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ
ವಿವಿಧ ವೃತ್ತಿಪರ ಕೋರ್ಸ್(ಬಿಇ, ಬಿಫಾರ್ಮಾ, ಆಯುಷ್, ಕೃಷಿ ಇಂಜಿನಿಯರಿಂಗ್) ಗಳ ಪ್ರವೇಶಕ್ಕಾಗಿ ನಡೆಯುವ 2017ನೇ ಸಾಲಿನ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 2 ಹಾಗೂ 3ರಂದು ನಡೆಸಲಾಗಿತ್ತು. ಬೆಂಗಳೂರಿನ 82 ಸೇರಿ ರಾಜ್ಯಾದ್ಯಾಂತ 404 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 94,415 ವಿದ್ಯಾರ್ಥಿ ಹಾಗೂ 90,996 ವಿದ್ಯಾರ್ಥಿನಿಯರು ಸೇರಿದಂತೆ 1,85,411 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಸರ್ಕಾರದಿಂದ ಉಚಿತ ಶಿಕ್ಷಣ : 'ಸಿಇಟಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಐದು ಜನರಿಗೆ ಅವರ ಕೋರ್ಸ್ ಮುಗಿಯುವವರೆಗೆ ಸರ್ಕಾರದಿಂದ ಉಚಿತ ಶಿಕ್ಷಣ ನೀಡಲಾಗುತ್ತದೆ' ಎಂದು ಕರ್ನಾಟಕ ಸರ್ಕಾರ 2016ರಲ್ಲೇ ಘೋಷಿಸಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications