'ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು': ಬಿಜೆಪಿ ಬಗ್ಗೆ ಸಿಎಂ ವ್ಯಂಗ್ಯ
ಬೆಂಗಳೂರು, ಅ 4: ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
"ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕಾಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು" ಎಂದು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹೇಳಿದರು.

ಬಂಜಾರ ಸಮುದಾಯದ ಏಳಿಗೆಗೆ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಮುಖ್ಯಮಂತ್ರಿಗಳು, ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ. ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ. ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು.
"ನಾವು ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ಹೇಗಿದೆ ಅಂದರೆ, "ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು" ಎನ್ನುವ ಗಾದೆ ಮಾತಿನಂತಾಗಿದೆ ಬಿಜೆಪಿ ಸ್ಥಿತಿ "ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ 275 ಕೋಟಿ ನೀಡಲಾಗಿತ್ತು. ಸೇವಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎನ್ನುವ ಭರವಸೆ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು. ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಶಾಸಕರಾದ ನೇಮಿರಾಜ ನಾಯ್ಕ್, ಅವಿನಾಶ್ ಜಾದವ್, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಸಿದ್ಯಾನಾಯ್ಕ್, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications