5 ಯೋಜನೆಗೆ ಸರ್ಕಾರದ ಒಪ್ಪಿಗೆ, 3 ಸಾವಿರ ಉದ್ಯೋಗ ಸೃಷ್ಟಿ
ಬೆಂಗಳೂರು, ಜೂ. 18 : ಕರ್ನಾಟಕದಲ್ಲಿ 2049.75 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಮಾಡುವ 5 ಕಂಪನಿಗಳ ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದ ಸುಮಾರು 3,532 ಜನರಿಗೆ ಉದ್ಯೋಗ ಸಿಗಲಿದೆ ಎಂದು ಅಂದಾಜಿಸಲಾಗಿದೆ.
ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 38ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, 3 ಯೋಜನೆಗಳಿಗೆ 896.47 ಕೋಟಿ ರೂ. ವೆಚ್ಚದಲ್ಲಿ ತಮ್ಮ ಕೈಗಾರಿಕೆಗಳನ್ನು ವಿಸ್ತರಿಸಲು ಸಭೆ ಅನುಮೋದನೆ ನೀಡಿದೆ.

ಎಲ್ಲೆಲ್ಲಿ ಕೈಗಾರಿಕೆ ಸ್ಥಾಪನೆ?
* ಹಾಸನದಲ್ಲಿ ಮೆ. ಹಿಮತ್ ಸಿಂಗ್ಕಾ ಸೀಡೆ ಸಂಸ್ಥೆ 1,325 ಕೋಟಿ ರೂ. ವೆಚ್ಚದಲ್ಲಿ ಜವಳಿ ಉದ್ಯಮ ಸ್ಥಾಪನೆ ಮಾಡಲಿದೆ. ಈ ಯೋಜನೆಯಿಂದ 2,750 ಮಂದಿಗೆ ಉದ್ಯೋಗ ದೊರೆಯಲಿದೆ. [ಚಾಮರಾಜನಗರದಲ್ಲಿ 1,600 ಎಕರೆಯಲ್ಲಿ ಕೈಗಾರಿಕಾ ಪ್ರದೇಶ]
* ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೆ. ಸ್ಟೆಲಿಸ್ ಬಯೋಫಾರ್ಮ್ ಲಿಮಿಟೆಡ್ 248 ಕೋಟಿ ರೂ. ವೆಚ್ಚದಲ್ಲಿ ಕೆಮಿಕಲ್ ಫ್ಯಾಕ್ಟರಿ ಆರಂಭಿಸಲಿದೆ. 125 ಮಂದಿಗೆ ಉದ್ಯೋಗ ಸಿಗಲಿದೆ. [ತಮಿಳುನಾಡಿನ ನಷ್ಟ, ಕರ್ನಾಟಕದ ಲಾಭ, ಏನಿದು ಬಿಜಿನೆಸ್?]
* ಬೆಳಗಾವಿಯಲ್ಲಿ ಮೆ : ಹರ್ಷ ಶುಗರ್ಸ್ 213 ಕೋಟಿ ವೆಚ್ಚದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲಿದೆ, 270 ಮಂದಿಗೆ ಉದ್ಯೋಗ ದೊರೆಯಲಿದೆ.
* ಔರಿಕ್ ಇಂಡಸ್ಟ್ರೀಸ್ ರಾಯಚೂರಿನಲ್ಲಿ 156.25 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಘಟಕ ಸ್ಥಾಪಿಸಲಿದೆ. 172 ಮಂದಿಗೆ ಉದ್ಯೋಗ ಸಿಗಲಿದೆ.
* ಮೆ. ಚೀರ್ಸ್ ಮೈಸೂರಿನಲ್ಲಿ 107.5 ಕೋಟಿ ರೂ. ವೆಚ್ಚದಲ್ಲಿ 215 ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೆ ಸ್ಥಾಪಿಸಲಿದೆ.

96 ಸಾವಿರ ಕೋಟಿ ಹೂಡಿಕೆ : 2013-14 ಮತ್ತು 2014-15ನೇ ಸಾಲಿನಲ್ಲಿ ಒಟ್ಟು 96,609.55 ಕೋಟಿ. ರೂ ಬಂಡವಾಳ ಹೂಡಿಕೆ ಮಾಡಲು 363 ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ಇದರಿಂದ 2,27,552 ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ.
-
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ











Click it and Unblock the Notifications