ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದು ಮೂರು ದಿನವಾದರೂ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಈ ವಿಚಾರದಲ್ಲಿ ಹಗ್ಗಜಗ್ಗಾಟ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು (ಮೇ 17) ಫುಲ್ ಸ್ಟಾಪ್ ಬೀಳುವ ಸಾಧ್ಯತೆಯಿದೆ.
ಸಿದ್ದರಾಮಯ್ಯನವರು ತಮ್ಮ ಬೆಂಬಲಿಗರಾದ ಬೈರತಿ ಸುರೇಶ್, ಜಮೀರ್ ಅಹ್ಮದ್ ಸೇರಿದಂತೆ ಮೂರು ದಿನದಿಂದ ದೆಹಲಿಯಲ್ಲೇ ಇದ್ದಾರೆ. ಇನ್ನು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ದೆಹಲಿಯ ತಮ್ಮ ಸಹೋದರ ಡಿ.ಕೆ.ಸುರೇಶ್ ನಿವಾಸದಲ್ಲಿದ್ದಾರೆ. ಸಾಲುಸಾಲು ಸಭೆಗಳು ನಡೆದರೂ, ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದ ಗೊಂದಲಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಹೈಕಮಾಂಡ್ ಹೆಣಗಾಡುತ್ತಿದೆ.
ಭಾನುವಾರದಂದು (ಮೇ 14) ಶಾಸಕಾಂಗ ಪಕ್ಷದ ನಾಯಕ ಯಾರಾಗ ಬೇಕು ಎನ್ನುವ ವಿಚಾರದಲ್ಲಿ ಶಾಸಕರ ಅಭಿಪ್ರಾಯವನ್ನು ಪಡೆಯಲಾಗಿತ್ತು. ಇಂದು ಖರ್ಗೆಯವರ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರ ಸಮ್ಮುಖದಲ್ಲಿ ನಾಡಿನ ಮುಂದಿನ ಸಿಎಂ ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ದೆಹಲಿ ಮತ್ತು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ತಾಜಾ ಮಾಹಿತಿಯನ್ನು ಈ ಪೇಜಿ ನಲ್ಲಿ ನೀಡಲಾಗುತ್ತಿದೆ.
May 17, 2023, 9:32 pm IST
ದೆಹಲಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ
ಸಿಎಂ ಫೈನಲ್ ವಿಚಾರದಲ್ಲಿ ಎಲ್ಲಾ ನಿರ್ಧಾರಗಳು ಸದ್ಯಕ್ಕೆ ಪೆಂಡಿಂಗ್
ಮಲ್ಲಿಕಾರ್ಜುನ ಖರ್ಗೆ ಮನೆಯಿಂದ ದೆಹಲಿಯಲ್ಲಿನ ಸಹೋದರ ಡಿ.ಕೆ.ಸುರೇಶ್ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಸಿಎಂ ಫೈನಲ್ ವಿಚಾರದಲ್ಲಿ ಎಲ್ಲಾ ನಿರ್ಧಾರಗಳು ಸದ್ಯಕ್ಕೆ ಪೆಂಡಿಂಗ್, ಎಲ್ಲಾ ನಿರ್ಧಾರಗಳನ್ನು ಕಾಯ್ದಿರಿಸಿದ ಎಐಸಿಸಿ. ಸೋನಿಯಾ ಮತ್ತು ರಾಹುಲ್ ಗಾಂಧಿ ಜೊತೆಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ.
May 17, 2023, 3:18 pm IST
ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಫರ್ ಕೊಟ್ಟ ಡಿ.ಕೆ.ಶಿವಕುಮಾರ್?
ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಫರ್ ಕೊಟ್ಟ ಡಿ.ಕೆ.ಶಿವಕುಮಾರ್?
ಮುಖ್ಯಮಂತ್ರಿ ಸ್ಥಾನಕ್ಕೆ ಮುಂದುವರಿದ ಗೊಂದಲ, ಡಿ.ಕೆ.ಶಿವಕುಮಾರ್ ಬಿಗಿಪಟ್ಟು. 'ಸಿಎಂ ಆಯ್ಕೆ ವಿಚಾರವಾಗಿ ಇನ್ನೂ ಏನೂ ಅಂತಿಮವಾಗಿಲ್ಲ. ಅವಿರೋಧವಾಗಿ ನಾಯಕನ ಆಯ್ಕೆಗೆ ಪ್ರಯತ್ನಿಸುತ್ತಿದ್ದೇವೆ. ಮುಂದಿನ 48 - 72 ಗಂಟೆಯಲ್ಲಿ ಸರಕಾರ ರಚಿಸುತ್ತೇವೆ' ಎಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ.
May 17, 2023, 1:27 pm IST
ಸಿದ್ದರಾಮಯ್ಯ ಪೋಸ್ಟರ್ಗೆ ಹಾಲಿನ ಅಭಿಷೇಕ
ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಹೊರಗೆ ಬೆಂಬಲಿಗರು ಜಮಾಯಿಸಿದ್ದು ಅವನ ಪೋಸ್ಟರ್ ಮೇಲೆ ಹಾಲಿನ ಅಭಿಷೇಕ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಿಎಂ ಎಂದು ನಿರ್ಧರಿಸಲಾಗಿದೆ ಎಂಬ ಮಾಹಿತಿ ಹೊರಬೀಳುತ್ತಿದ್ದಂತೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಪರ ಕಾರ್ಯಕರ್ತರು, ಅಭಿಮಾನಿಗಳು ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ಹಿಡಿಯುವ ಮೂಲಕ ನೆಚ್ಚಿನ ನಾಯಕನಿಗೆ ಜೈಕಾರ ಹಾಕಿ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಆದರಿನ್ನೂ ಹೈಕಮಾಂಡ್ ಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಎಂದು ಘೋಷಣೆ ಮಾಡುವುದು ಬಾಕಿ ಇದೆ.
ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಯಾರೇ ಮುಖ್ಯಮಂತ್ರಿಯಾಗಲಿ, ಇಬ್ಬರೂ ಆ ಹುದ್ದೆ ನಿಭಾಯಿಸಲು ಸಮರ್ಥರಿದ್ದಾರೆ. ನಮ್ಮ ಇಡೀ ಕುಟುಂಬ ಕಾಂಗ್ರೆಸ್ ಪಕ್ಷದ ಸೇವೆ ಮಾಡಿದ್ದೇವೆ. ನಾನು ಕೂಡಾ ಎರಡು ಬಾರಿ ಶಾಸಕನಾಗಿದ್ದೇನೆ, ನನಗೂ ಉಪ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕೆಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಒತ್ತಾಯಿಸಿದ್ದಾರೆ.
May 17, 2023, 11:58 am IST
Karnataka CM : ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸಿರುವ ಸಿದ್ದರಾಮಯ್ಯ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಜೊತೆಗಿನ ಚರ್ಚೆ ಪೂರ್ತಿಯಾದ ಬಳಿಕ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಈ ಮೂಲಕ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಸಿಎಂ ಆಯ್ಕೆ ನಾಟಕಕ್ಕೆ ತೆರೆ ಎಳೆಯಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ.
May 17, 2023, 11:32 am IST
ಸಿದ್ದುಗೆ ಸಿಎಂ, ಡಿಕೆಶಿಗೆ ಡಿಸಿಎಂ ಸ್ಥಾನ ಘೋಷಣೆಯೊಂದೇ ಬಾಕಿ
ಕರ್ನಾಟಕದಲ್ಲಿ ಯಾರು ಸಿಎಂ ಆಗ್ತಾರೆ ಎನ್ನುವ ಗೊಂದಲಗಳಿಗೆ ತೆರೆ ಬಿದ್ದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೆಲವೇ ಹೊತ್ತಿನಲ್ಲಿ ಹೈಕಮಾಂಡ್ ಸಿಎಂ ಹೆಸರು ಘೋಷಣೆ ಮಾಡಲಿದೆ. ಜೊತೆಗೆ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಕೆಲವೇ ಹೊತ್ತಿನಲ್ಲಿ ಹೈಕಮಾಂಡ್ ಈ ಬಗ್ಗೆ ಘೋಷಣೆ ಮಾಡಲಿದೆ. ಇಂದು ಉನ್ನತ ಮಟ್ಟದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
May 17, 2023, 10:30 am IST
ಸೋನಿಯಾ ನಿವಾಸಕ್ಕೆ ಆಗಮಿಸುವಂತೆ ಸಿದ್ದರಾಮಯ್ಯಗೆ ಸೂಚನೆ
ಸಿಎಂ ಖುರ್ಚಿ ಬಡಿದಾಟಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸೋನಿಯಾ ಗಾಂಧಿ ನಿವಾಸಕ್ಕೆ ಆಗಮಿಸುವಂತೆ ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಧ್ಯಾಹ್ನ ಹನ್ನೆರಡು ಗಂಟೆಗೆ ಭೇಟಿಗೆ ಸಮಯ ನಿಗದಿಯಾಗಿದೆ. ರಾಹುಲ್ ಗಾಂಧಿ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿದ್ದರು. ಹೀಗಾಗಿ ದೆಹಲಿಯ ಜನಪಥ್ ನಲ್ಲಿರುವ ಸೋನಿಯಾ ನಿವಾಸಕ್ಕೆ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಲಾಗಿದೆ.
May 17, 2023, 9:50 am IST
ಸಿದ್ದರಾಮಯ್ಯ ವಿರುದ್ಧ ಕೆ. ಸುಧಾಕರ್ ಬಾಂಬ್
ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ನಿರಾಕರಿಸಲು ಸಾಧ್ಯವೇ? ಎಂದು ಪ್ರಶ್ನೆ ಮಾಡುವ ಮೂಲಕ, ಮಾಜಿ ಆರೋಗ್ಯ ಸಚಿವ ಕೆ. ಸುಧಾಕರ್, ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ. ಕರ್ನಾಟಕದಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿಕೆಶಿ ನಡುವೆ ಪೈಪೋಟಿ ಹೆಚ್ಚಾಗಿರುವ ನಿಟ್ಟಿನಲ್ಲಿ ಇಂಥದ್ದೊಂದು ಟ್ವೀಟ್ ಮಾಡಿದ್ದಾರೆ.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.
ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ?
ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಸೋನಿಯಾ ಗಾಂಧಿ ಒನ್ ಟು ಒನ್ ಮೀಟಿಂಗ್
ಕರ್ನಾಟಕದಲ್ಲಿ ಸಿಎಂ ಖುರ್ಚಿ ಗುದ್ದಾಟ ಮುಂದುವರೆದಿದ್ದು ಇಂದು ದೆಹಲಿಯಲ್ಲಿ ಫೈನಲ್ ಸಭೆ ನಡೆಯಲಿದೆ. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಸೋನಿಯಾ ಗಾಂಧಿ ಒನ್ ಟು ಒನ್ ಮೀಟಿಂಗ್ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಅವರ ಮನದಾಳದ ಮಾತುಗಳನ್ನು ಆಲಿಸಿದ ಬಳಿಕ ಸಿಎಂ ಸ್ತಾನ ಯಾರಿಗೆ ನೀಡಬೇಕು ಎಂದು ತೀರ್ಮಾನಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಭಾಗಿಯಾಗಲಿದ್ದು ಇಂದೇ ರಾಜ್ಯದ ಸಿಎಂ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
May 17, 2023, 8:19 am IST
ಮೈಸೂರು ಜಿಲ್ಲೆಯಲ್ಲಿ 12 ಸಾವಿರ ನೋಟಾ ಚಲಾವಣೆ
ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯ ಕಂಡಿದೆ. ಫಲಿತಾಂಶ ಕೂಡ ಪ್ರಕಟಕೊಂಡಿದ್ದು, ಕಾಂಗ್ರೆಸ್ ಸರಕಾರ ರಚನೆಗೆ ಮುಂದಾಗಿದೆ. ಈ ನಡುವೆ ಯಾವ ಅಭ್ಯರ್ಥಿ ಬಗ್ಗೆಯೂ ಆಸಕ್ತಿ, ವಿಶ್ವಾಸ ಇಲ್ಲದೆ ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ 12 ಸಾವಿರ ಮಂದಿ ನೋಟಾ ಮತ ಚಲಾವಣೆ ಮಾಡಿದ್ದಾರೆ.
May 17, 2023, 7:56 am IST
ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿರುವ ಸಿದ್ದರಾಮಯ್ಯ, ಡಿಕೆಶಿ: ರಾಹುಲ್ ಸಂಧಾನ?
ಮಲ್ಲಿಕಾರ್ಜುನ ಖರ್ಗೆ ಯವರಿಗಿನ ಪ್ರತ್ಯೇಕ ಸಭೆಯಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ರಾಹುಲ್ ಗಾಂಧಿ ಸಂಧಾನ ಸಭೆ ಇಂದು ನಡೆಯಲಿದೆ ಎನ್ನಲಾಗಿದೆ. ಈ ಸಂದಾನ ಸಭೆಯಲ್ಲಿ ಸಿಎಂ ಆಯ್ಕೆ ಪಕ್ಕಾ ಆಗುವ ಸಾಧ್ಯತೆ ಇದ್ದು ಸಿಎಂ ಖರ್ಚಿ ಗುದ್ದಾಟಕ್ಕೆ ತೆರೆ ಬೀಳಲಿದೆ.
May 17, 2023, 7:16 am IST
ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಫೈನಲ್ ಮೀಟಿಂಗ್
ಕಾಂಗ್ರೆಸ್ ಪಕ್ಷಕ್ಕೀಗ ಮುಖ್ಯಮಂತ್ರಿ ಆಯ್ಕೆಯೇ ಬಹುದೊಡ್ಡ ಕಗ್ಗಂಟಾಗಿ ಪರಿಣಮಿಸಿದೆ. ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿರುವ ವೀಕ್ಷಕರು ಆ ಕುರಿತು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವರದಿ ಒಪ್ಪಿಸಿದ್ದರು. ಅದಾದ ನಂತರ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಇಬ್ಬರ ಜತೆಗೂ ಹಲವು ಸುತ್ತಿನ ಮಾತುಕತೆ ನಡೆಸಿದೆ. ಆದಾಗ್ಯೂ, ಮಂಗಳವಾರ ರಾತ್ರಿಯಾದೂ ಅಂತಿಮ ಒಪ್ಪಂದಕ್ಕೆ ಬರುವಲ್ಲಿ ವಿಫಲವಾಗಿದೆ. ಹೀಗಾಗಿ ಮತ್ತೆ ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಲ್ಲಿ ಫೈನಲ್ ಮೀಟಿಂಗ್ ನಡೆಯಲಿದ್ದು ಇಂದೇ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.
ತೆಲುಗು ಚಿತ್ರರಂಗ ಹಾಗೂ ರಾಜಕೀಯ ರಂಗದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿಯನ್ನು ಹಲವು ಸಿನಿಮಾ ತಾರೆಯರು, ರಾಜಕಾರಣಿಗಳು ನಂಬುತ್ತಾರೆ. ಯಾಕೆಂದರೆ ಇವರು ಸಿನಿಮಾ ನಟರ ಜಾತಕವನ್ನು ವಿಶ್ಲೇಷಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುತ್ತಾರೆ. ಬಹುತೇಕ ಸಂದರ್ಭಗಳಲ್ಲಿ ಅವರ ಭವಿಷ್ಯ ನಿಜವಾಗಿದೆ. ರಶ್ಮಿಕಾ ಮಂದಣ್ಣ ಸ್ಟಾರ್ ಆಗುವ ಮುನ್ನ ವಿಶೇಷ ಪೂಜೆ ಮಾಡಿಸಿದ್ದು ಇವರ ಬಳಿಯೇ. ಈಗ ಇದೇ ವೇಣುಸ್ವಾಮಿ ಡಿಕೆ.ಶಿವಕುಮಾರ್ ಜೊತೆಗಿನ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ ಬಹಳ ಹಿಂದೆಯೇ ಡಿಕೆಶಿ ಬಗ್ಗೆ ಮಾತೊಂದನ್ನು ಆಡಿದ್ದಾರೆ. ”ಡಿಕೆ ಶಿವಕುಮಾರ್ ಅವರು ಕರ್ನಾಟಕದಲ್ಲಿ ಸರ್ಕಾರ ತರಲು ಪೂರ್ಣಶಕ್ತಿ ತೊಡಗಿಸಿ ಪ್ರಯತ್ನ ಮಾಡುತ್ತಿದ್ದಾರೆ. ಮುಂದಿನ ಕಿಂಗ್ ಮೇಕರ್ ಡಿಕೆ ಶಿವಕುಮಾರ್” ಎಂದಿದ್ದಾರೆ.
May 16, 2023, 9:36 pm IST
ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ
ಲಿಂಗಾಯತ ಪಂಚಮಶಾಲಿ ಸಮುದಾಯದ ಸುಮಾರು ಹನ್ನೆರಡು ಕಾಂಗ್ರೆಸ್ ಅಭ್ಯರ್ಥಿಗಳು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕಿದೆ. ಬಾಗಲಕೋಟೆ ಭಾಗದಲ್ಲಿ ಸಮುದಾಯದ ಏಕೈಕ ಶಾಸಕರಾಗಿ ಆಯ್ಕೆಯಾಗಿರುವ ಹುನಗುಂದ ಕ್ಷೇತ್ರದ ವಿಜಯಾನಂದ ಕಾಶಪ್ಪನವರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಪಂಚಮಶಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ.
May 16, 2023, 9:31 pm IST
ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ ಹರಿಪ್ರಸಾದ್, ಶಾಸಕ ಮಧು ಬಂಗಾರಪ್ಪ ಸೇರಿದಂತೆ ಬಿಲ್ಲವ-ಈಡಿಗ ಸಮದಾಯದವರಿಗೆ ಸಚಿವ ಸ್ಥಾನ ನೀಡುವಂತೆ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
May 16, 2023, 9:28 pm IST
ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಒತ್ತಾಯ
ಬಿ.ಕೆ.ಹರಿಪ್ರಸಾದ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಒತ್ತಾಯ.
May 16, 2023, 9:04 pm IST
ಸಿಎಂ ಆಯ್ಕೆ ಕಗ್ಗಂಟು; ನಾಳೆ (ಮೇ 17) ಬೆಳಗ್ಗೆ ಫೈನಲ್ ಮೀಟಿಂಗ್
ಕಳೆದ ಮೂರು ದಿನಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಆಯ್ಕೆಯೇ ದೊಡ್ಡ ಕಗ್ಗಂಟಾಗಿದ್ದು, ದೆಹಲಿ ನಾಯಕರಿಗೆ ಸಿಎಂ ಆಯ್ಕೆಗೆ ಸವಾಲಾಗಿದೆ. ಈಗಾಗಲೇ ಸಾಲು ಸಾಲು ಸಭೆಗಳನ್ನ ನಡೆಸಿರುವ ಕಾಂಗ್ರೆಸ್ ಹೈಕಮಾಂಡ್, ನಾಳೆ (ಮೇ 17) ಬೆಳಗ್ಗೆ ಫೈನಲ್ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಮೀಟಿಂಗ್ ನಡೆಸಲಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದು, ಅಂತಿಮವಾಗಿ ನಾಳಿನ ಸಭೆಯ ಬಳಿಕ ಮುಖ್ಯಮಂತ್ರಿ ಘೋಷಣೆ ಮಾಡುವ ಸಾಧ್ಯತೆ ಇದೆ.
May 16, 2023, 7:38 pm IST
ಕಾಂಗ್ರೆಸ್ ಪಕ್ಷದ ‘ಗೂಂಡಾಗಿರಿ ಗ್ಯಾರಂಟಿ’ ಪ್ರಾರಂಭ: ಕಟೀಲ್
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ ದೊಂಬಿ, ಗಲಭೆಗಳು ಹೆಚ್ಚಾಗಿವೆ. ಕಾಂಗ್ರೆಸ್ ಪಕ್ಷದ ‘ಗೂಂಡಾಗಿರಿ ಗ್ಯಾರಂಟಿ’ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
May 16, 2023, 6:14 pm IST
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗದಿದ್ದರೇ ಪಕ್ಷಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ವದಂತಿ ಹಬ್ಬಿಸಲಾಗಿದ್ದು, ಪಕ್ಷಕ್ಕೆ ರಾಜೀನಾಮೆ ನೀಡುವ ಬಗ್ಗೆ ಊಹಾಪೋಹಗಳನ್ನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಳ್ಳಿಹಾಕಿದ್ದು, ವದಂತಿ ಹಬ್ಬಿಸುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷವೇ ನನ್ನ ತಾಯಿ ಎಂದ ಅವರು, ತಮ್ಮೊಂದಿಗೆ 135 ಶಾಸಕರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
May 16, 2023, 6:10 pm IST
ಖರ್ಗೆ ಭೇಟಿ ಮಾಡಲು ಹೊರಟ ಸಿದ್ದು
ಸಿದ್ದರಾಮಯ್ಯ ದೆಹಲಿಯ ಖಾಸಗಿ ಹೋಟೆಲ್ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ನಿವಾಸಕ್ಕೆ ಭೇಟಿ ನೀಡಲು ತೆರಳಿದ್ದಾರೆ. ಖರ್ಗೆ ನಿವಾಸದಲ್ಲಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ತೆರಳಿದ ಬಳಿಕ, ವಾಪಸ್ ತೆರಳಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಖರ್ಗೆ-ಸಿದ್ದರಾಮಯ್ಯ ಚರ್ಚೆ ಮಾಡಲಿದ್ದಾರೆ.
May 16, 2023, 5:47 pm IST
ಖರ್ಗೆ, ಡಿಕೆಶಿ ದೆಹಲಿಯಲ್ಲಿ ಭೇಟಿ
ದೆಹಲಿಯಲ್ಲಿ ಅಂತಿಮ ಹಂತದ ಆಯ್ಕೆ ಕಸರತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಒನ್ ಟು ಒನ್ ಮಾತುಕತೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಸಂಜೆ ಆರು ಗಂಟೆಗೆ ಖರ್ಗೆ ಭೇಟಿಯಾಗಲಿರುವ ಸಿದ್ದರಾಮಯ್ಯ.
May 16, 2023, 5:00 pm IST
ಕಾಂಗ್ರೆಸ್ಸಿನ ಹಿರಿಯ ನಾಯಕರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ಸಿನ ಹಿರಿಯ ನಾಯಕರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಚರ್ಚೆ. ಇನ್ನೂ, ಶಿಮ್ಲಾದಲ್ಲೇ ಇರುವ ಸೋನಿಯಾ ಗಾಂಧಿ.
May 16, 2023, 4:24 pm IST
5 ಗಂಟೆಗೆ ಮಲ್ಲಿಕಾರ್ಜುನ ಖರ್ಗೆ-ಡಿಕೆಶಿ ಚರ್ಚೆ
ಕರ್ನಾಟಕ ಮುಖ್ಯಮಂತ್ರ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 5 ಗಂಟೆಗೆ ಡಿಕೆ ಶಿವಕುಮಾರ್ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಲಿದ್ದ, 6 ಗಂಟೆಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಇಬ್ಬರ ಜೊತೆ ಚರ್ಚೆ ಬಳಿಕ ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
May 16, 2023, 4:23 pm IST
ದಲಿತ ಸಿಎಂ ಬರಬೇಕು, ಜಿ ಪರಮೇಶ್ವರ ಅವರನ್ನು ಸಾಮಾಜಿಕ ನ್ಯಾಯತತ್ವ ಅನುಸರಿಸಿ ಸಿಎಂ ಹುದ್ದೆಗೆ ಆಯ್ಕೆ ಮಾಡಬೇಕು ಎಂದು ಪರಮೇಶ್ವರ ಅವರ ಬೆಂಬಲಿಗರು, ಅಖಿಲ ಕರ್ನಾಟ ಜಿ ಪರಮೇಶ್ವರ ಯುವ ಸೇನೆ, ಛಲವಾದಿ ಮಹಾಸಭಾ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.
May 16, 2023, 4:19 pm IST
5 ಗಂಟೆಗೆ ಮಲ್ಲಿಕಾರ್ಜುನ ಖರ್ಗೆ-ಡಿಕೆಶಿ ಚರ್ಚೆ
ಕರ್ನಾಟಕ ಮುಖ್ಯಮಂತ್ರ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 5 ಗಂಟೆಗೆ ಡಿಕೆ ಶಿವಕುಮಾರ್ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಲಿದ್ದ, 6 ಗಂಟೆಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಇಬ್ಬರ ಜೊತೆ ಚರ್ಚೆ ಬಳಿಕ ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
May 16, 2023, 4:17 pm IST
ಖರ್ಗೆ ನಿವಾಸದತ್ತ ಡಿಕೆ ಶಿವಕುಮಾರ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ನಿವಾಸದತ್ತ ತೆರಳಿದ ಡಿಕೆ ಶಿವಕುಮಾರ್. ಕೆಲವೇ ಹೊತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ. ಎಐಸಿಸಿ ವೀಕ್ಷಕರು, ಖರ್ಗೆ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಚರ್ಚೆ ಸಾಧ್ಯತೆ. ಇಂದೇ ಸಿಎಂ ಯಾರು ಎಂದು ನಿರ್ಧಾರವಾಗುವ ಸಾಧ್ಯತೆ.
May 16, 2023, 3:11 pm IST
24 ಗಂಟೆಯಲ್ಲಿ ಮುಖ್ಯಮಂತ್ರಿ ಹೆಸರು ಘೋಷಣೆ
ಇನ್ನು 24 ಗಂಟೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿಕೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ನಾಳೆ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.
May 16, 2023, 2:37 pm IST
ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಜೊತೆಗಿನ ಸಭೆ ಮುಕ್ತಾಯ
ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ರಾಹುಲ್ ಗಾಂಧಿ ಜೊತೆಗಿನ ಸಭೆ ಮುಕ್ತಾಯ. ಒಂದು ಗಂಟೆಗೂ ಹೆಚ್ಚಿನ ಕಾಲ ನಡೆದ ಚರ್ಚೆ. ಖರ್ಗೆ ಮನೆಯಿಂದ ಹೊರಟ ರಾಹುಲ್ . ಎಐಸಿಸಿ ಅಧ್ಯಕ್ಷರ ನಿವಾಸಕ್ಕೆ ಸಿದ್ದರಾಮಯ್ಯ - ಡಿ.ಕೆ.ಶಿವಕುಮಾರ್ ಆಗಮಿಸುವ ಸಾಧ್ಯತೆ.
READ MORE
11:43 AM, 16 May
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಸ್ವಲ್ಪ ಹೊತ್ತಿನಲ್ಲಿ ತಲುಪಲಿದ್ದಾರೆ. ಈಗಾಗಲೇ ಡಿ.ಕೆ.ಸುರೇಶ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. 'ಒಬ್ಬರೇ ಬರುವಂತೆ ಹೈಕಮಾಂಡ್ ಸೂಚಿಸಿದೆ. ಆರೋಗ್ಯದ ಸಮಸ್ಯೆ ನನಗೆ ಈಗ ಇಲ್ಲ, ಕಾಂಗ್ರೆಸ್ ಪಕ್ಷವೇ ನನ್ನ ಆಸ್ತಿ' ಎಂದು ದೆಹಲಿಗೆ ಹೋಗುವ ಮುನ್ನ ಡಿ.ಕೆ.ಶಿವಕುಮಾರ್ ಹೇಳಿಕೆ.
11:43 AM, 16 May
ಡಾ.ಪರಮೇಶ್ವರ್ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರಾಗಿರುವವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ಪದ್ದತಿ. ಸಿದ್ದರಾಮಯ್ಯನವರು ಈಗಾಗಲೇ ವಿರೋಧ ಪಕ್ಷದ ನಾಯಕರಾಗಿ ಕೆಲಸ ನಿರ್ವಹಿಸಿದ್ದಾರೆ. ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಡಿಕೆಶಿ ಕೊಡುಗೆ ಅಪಾರ - ಡಾ.ಪರಮೇಶ್ವರ್.
11:49 AM, 16 May
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನವನ್ನು ಎಲ್ಲರೂ ಒಟ್ಟಾಗಿ ಮಾಡುತ್ತೇವೆ - ಡಿ.ಕೆ.ಶಿವಕುಮಾರ್.
#WATCH | "Winning 20 seats (in Lok Sabha polls) is our next challenge...Ours is a united house, I don't want to divide anyone here. I am a responsible man...I will not backstab also and I will not blackmail also. I don't want to go to the wrong history, I don't want to go with a… pic.twitter.com/Ex8XDcY0VS
ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗೋದು ಪಕ್ಕಾ ಎಂದು ಮಧುಗಿರಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಪರವಾಗಿ ಒಲವು ತೋರಿದ್ದಾರೆ. ಡಿಕೆ ಶಿವಕುಮಾರ್ ಈ ಬಾರಿ ಕೂಡ ಸಹಕಾರ ಕೊಡುವ ವಿಶ್ವಾಸ ಇದೆ. ಮೇ 18ರಂದು ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಹೇಳಿದರು. ನನಗೆ ಮಾತ್ರ ಸಹಕಾರಿ ಸಚಿವ ಸ್ಥಾನವೇ ಬೇಕು ಎಂದು ಅವರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ.
11:51 AM, 16 May
ಸಹೋದರನ ಪರವಾಗಿ ಬ್ಯಾಟ್ ಬೀಸಿದ ಸಂಸದ ಡಿ.ಕೆ.ಸುರೇಶ್
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವುದು ನನ್ನ ಆಸೆ, ಹೈಕಮಾಂಡ್ ಅಂಗಣದಲ್ಲಿ ಡಿಕೆಶಿಯವರಿಗೆ ನ್ಯಾಯ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಪಕ್ಷಕ್ಕಾಗಿ ದುಡಿದಿದ್ದೇವೆ, ಕೂಲಿ ಕೊಡಿ ಎಂದು ಸಹೋದರನ ಪರವಾಗಿ ಬ್ಯಾಟ್ ಬೀಸಿದ ಸಂಸದ ಡಿ.ಕೆ.ಸುರೇಶ್.
11:52 AM, 16 May
ಡಿಕೆಶಿ ಮತ್ತು ಸಿದ್ದರಾಮಯ್ಯ ಮುಂದೆ ಬ್ಯಾಲಟ್ ಓಪನ್
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ಭಾನುವಾರ ರಾತ್ರಿ ನಡೆದ ಶಾಸಕಾಂಗ ಸಭೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಣೆ ಮಾಡಲಾಗಿತ್ತು. ಗೌಪ್ಯ ಮತದಾನದ ಮೂಲಕ ಶಾಸಕರು ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸಿದ್ದು, ಬ್ಯಾಲೆಟ್ ಅನ್ನು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಂದೆ ಎಐಸಿಸಿ ವೀಕ್ಷಕರು ಓಪನ್ ಮಾಡಲಿದ್ದಾರೆ.
11:55 AM, 16 May
ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ನಡೆದ ರಹಸ್ಯ ಮತದಾನದ ವೇಳೆ ಬಹುತೇಕ ಶಾಸಕರು ನನ್ನ ಪರ ಮತ ಚಲಾಯಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಕ್ಷದ ಸಿಎಂ ಘೋಷಣೆಗೆ ಮುನ್ನ ಮಂಗಳವಾರದ ನಂತರ ದೆಹಲಿಗೆ ತೆರಳಿದರು. ದೆಹಲಿಗೆ ವಿಮಾನದಲ್ಲಿ ತೆರಳುವ ಮುನ್ನ ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಷ್ಟ್ರ ರಾಜಧಾನಿಗೆ ಒಬ್ಬಂಟಿಯಾಗಿ ಭೇಟಿ ನೀಡುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನನಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ನ ಹಿರಿಯ ನಾಯಕ ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿದ್ದು, ಅವರನ್ನು ಡಿಸಿಎಂ ಮಾಡಿದರೆ ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
12:42 PM, 16 May
ಶಾಸಕರ ಬಲ ಇಲ್ಲದ ಡಿಕೆಶಿಗೆ ಸಿಎಂ ಸ್ಥಾನ ಕೊಡಬಹುದೇ?
12:43 PM, 16 May
ರಮಾನಾಥ್ ರೈ ಹೇಳಿಕೆ
ನನಗೀಗ ಎಪ್ಪತ್ತೊಂದು ವರ್ಷ. ನನಗಿಂತಲೂ ಹಿರಿಯರು ಚುನಾವಣೆ ಗೆ ನಿಂತಿದ್ದಾರೆ, ಆದರೆ ನಾನು ಚುನಾವಣೆಗೆ ನಿಲ್ಲೋದಕ್ಕೆ ಪಕ್ಷದಲ್ಲೇ ಅಪಸ್ವರ ಇರೋದರಿಂದ ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ - ಮಾಜಿ ಸಚಿವ ರಮಾನಾಥ್ ರೈ
12:46 PM, 16 May
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.
12:46 PM, 16 May
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರ ಮನೆಗೆ ಧಾವಿಸುತ್ತಿರುವ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಬಂದಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ
12:47 PM, 16 May
ಉಚಿತ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ: ಪರಮೇಶ್ವರ್
ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ 5 ಉಚಿತ ಕೊಡುಗೆಗಳ ಪಾಲೂ ಕೂಡ ದೊಡ್ಡದಿದೆ. ಉಚಿತ ಗ್ಯಾರೆಂಟಿಗಳನ್ನು ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಷರತ್ತುಗಳ ಬಗ್ಗೆ ಎಲ್ಲಿಯೂ ಮಾತನಾಡಿರಲಿಲ್ಲ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೊರಟಗೆರೆ ಕ್ಷೇತ್ರದ ಶಾಸಕ ಡಾ. ಜಿ. ಪರಮೇಶ್ವರ್, ಸುಮ್ಮನೆ ಎಲ್ಲರಿಗೂ ಉಚಿತವಾಗಿ ಕೊಡಲು ಆಗಲ್ಲ, ಅದಕ್ಕೆ ಷರತ್ತುಗಳು ಇರಲಿವೆ, ಆಯಾ ಇಲಾಖೆ ಸಚಿವರ ಜೊತೆ ಚರ್ಚೆ ಮಾಡಿ ಅದನ್ನು ನಿರ್ಧರಿಸಲಾಗುವುದು, ಆದರೆ ಮೊದಲನೇ ಕ್ಯಾಬಿನೆಟ್ನಲ್ಲಿ ಜಾರಿ ಮಾಡುವುದಾಗಿ ಹೇಳಿದ್ದಾರೆ.
1:04 PM, 16 May
ಮಧ್ಯಾಹ್ನದ ಮೇಲೆ ಹೈವೊಲ್ಟೇಜ್ ಸಭೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ಮಧ್ಯಾಹ್ನದ ಮೇಲೆ ಹೈವೊಲ್ಟೇಜ್ ಸಭೆ, ಖರ್ಗೆ ನಿವಾಸಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ. ಶಿಮ್ಲಾದಿಂದ ಇನ್ನೂ ದೆಹಲಿಗೆ ಬಾರದ ಸೋನಿಯಾ ಗಾಂಧಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಸಭೆ.
1:10 PM, 16 May
ಖರ್ಗೆಯವರ ದೆಹಲಿ ನಿವಾಸಕ್ಕೆ ಆಗಮಿಸಿದ ರಾಹುಲ್ ಗಾಂಧಿ
Delhi | Amid talks in Congress to decide Karnataka CM, Congress leader Rahul Gandhi arrives at the residence of party president Mallikarjun Kharge. pic.twitter.com/XychvLL1eg
ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಿಎಂ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತಲುಪಿದ್ದಾರೆ. ಸಿದ್ದರಾಮಯ್ಯ ಕೂಡ ಖರ್ಗೆ ನಿವಾಸಕ್ಕೆ ಆಗಮಿಸಲಿದ್ದಾರೆ. ಸೋನಿಯಾ ಗಾಂಧಿ ಶಿಮ್ಲಾದಲ್ಲೇ ಉಳಿಯಲಿದ್ದು, ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಹೊಣೆ ಖರ್ಗೆ ಅವರ ಹೆಗಲಿದೆ ಬಿದ್ದಿದೆ. ರಾಹುಲ್ ಗಾಂಧಿ ಮತ್ತು ಖರ್ಗೆ ಇಬ್ಬರೂ ನಾಯಕರ ಜೊತೆ ಚರ್ಚೆ ಮಾಡಲಿದ್ದು, ಸಂಜೆ ವೇಳೆಗೆ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಹೆಚ್ಚಾಗಿದೆ.
1:14 PM, 16 May
ಕಾಂಗ್ರೆಸ್ಸಿಗರು ಬಿಜೆಪಿಯ ಮೀಸಲಾತಿ, ಹಿಜಾಬ್ನಂತಹ ವಿಚಾರಗಳನ್ನೇ ಬಂಡವಾಳ ಮಾಡಿಕೊಂಡು ಗೆದ್ದಿದ್ದಾರೆ ಎಂದು ಕಡೂರಿನ ಯಗಟಿಯಲ್ಲಿ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದ್ದಾರೆ.
1:21 PM, 16 May
ಕಾಂಗ್ರೆಸ್ ನಾಯಕರು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 2,000 ರೂಪಾಯಿ, ಫ್ರೀ ಬಸ್, ಯುವಕರಿಗೆ ಸ್ಟೇ ಫಂಡ್, 200 ಯೂನಿಟ್ ಉಚಿತ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದರು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಅವರು ಕೊಟ್ಟ ಭರವಸೆಗಳನ್ನು ಮೊದಲು ಈಡೇರಿಸಬೇಕು ಎಂದು ಪ್ರಜ್ವಲ್ ರೇವಣ್ಣ ಸವಾಲು ಹಾಕಿದರು.
1:36 PM, 16 May
ಹೊಸಕೋಟೆಯಲ್ಲಿ ಕಾಂಗ್ರೆಸ್ ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಮಂಗಳವಾರ ಬಿಜೆಪಿ ನಾಯಕರು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಳಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಬಾಬು ಅವರನ್ನು ಎಂ.ವಿ.ಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು. ಬಳಿಕ ಹತ್ಯೆಗೊಳಗಾದ ಕೃಷ್ಣಪ್ಪ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಈಶ್ವರಪ್ಪ, ಅಶ್ವತ್ಥ್ ನಾರಾಯಣ, ಎಂಟಿಬಿ ನಾಗರಾಜ್ ವಿಧಾನ ಪರಿಷತ್ ಸದಸ್ಯ ಕೇಶವ್ ಪ್ರಸಾದ್ ಉಪಸ್ಥಿತರಿದ್ದರು.
2:37 PM, 16 May
ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿ ಜೊತೆಗಿನ ಸಭೆ ಮುಕ್ತಾಯ
ಮಲ್ಲಿಕಾರ್ಜುನ ಖರ್ಗೆಯವರ ನಿವಾಸದಲ್ಲಿ ರಾಹುಲ್ ಗಾಂಧಿ ಜೊತೆಗಿನ ಸಭೆ ಮುಕ್ತಾಯ. ಒಂದು ಗಂಟೆಗೂ ಹೆಚ್ಚಿನ ಕಾಲ ನಡೆದ ಚರ್ಚೆ. ಖರ್ಗೆ ಮನೆಯಿಂದ ಹೊರಟ ರಾಹುಲ್ . ಎಐಸಿಸಿ ಅಧ್ಯಕ್ಷರ ನಿವಾಸಕ್ಕೆ ಸಿದ್ದರಾಮಯ್ಯ - ಡಿ.ಕೆ.ಶಿವಕುಮಾರ್ ಆಗಮಿಸುವ ಸಾಧ್ಯತೆ.
3:11 PM, 16 May
24 ಗಂಟೆಯಲ್ಲಿ ಮುಖ್ಯಮಂತ್ರಿ ಹೆಸರು ಘೋಷಣೆ
ಇನ್ನು 24 ಗಂಟೆಯಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂದು ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿಕೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ನಾಳೆ ಮುಖ್ಯಮಂತ್ರಿ ಹೆಸರು ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.
4:17 PM, 16 May
ಖರ್ಗೆ ನಿವಾಸದತ್ತ ಡಿಕೆ ಶಿವಕುಮಾರ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ನಿವಾಸದತ್ತ ತೆರಳಿದ ಡಿಕೆ ಶಿವಕುಮಾರ್. ಕೆಲವೇ ಹೊತ್ತಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ. ಎಐಸಿಸಿ ವೀಕ್ಷಕರು, ಖರ್ಗೆ ಜೊತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಚರ್ಚೆ ಸಾಧ್ಯತೆ. ಇಂದೇ ಸಿಎಂ ಯಾರು ಎಂದು ನಿರ್ಧಾರವಾಗುವ ಸಾಧ್ಯತೆ.
4:19 PM, 16 May
5 ಗಂಟೆಗೆ ಮಲ್ಲಿಕಾರ್ಜುನ ಖರ್ಗೆ-ಡಿಕೆಶಿ ಚರ್ಚೆ
ಕರ್ನಾಟಕ ಮುಖ್ಯಮಂತ್ರ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 5 ಗಂಟೆಗೆ ಡಿಕೆ ಶಿವಕುಮಾರ್ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಲಿದ್ದ, 6 ಗಂಟೆಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಇಬ್ಬರ ಜೊತೆ ಚರ್ಚೆ ಬಳಿಕ ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
4:23 PM, 16 May
ದಲಿತ ಸಿಎಂ ಬರಬೇಕು, ಜಿ ಪರಮೇಶ್ವರ ಅವರನ್ನು ಸಾಮಾಜಿಕ ನ್ಯಾಯತತ್ವ ಅನುಸರಿಸಿ ಸಿಎಂ ಹುದ್ದೆಗೆ ಆಯ್ಕೆ ಮಾಡಬೇಕು ಎಂದು ಪರಮೇಶ್ವರ ಅವರ ಬೆಂಬಲಿಗರು, ಅಖಿಲ ಕರ್ನಾಟ ಜಿ ಪರಮೇಶ್ವರ ಯುವ ಸೇನೆ, ಛಲವಾದಿ ಮಹಾಸಭಾ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.
4:24 PM, 16 May
5 ಗಂಟೆಗೆ ಮಲ್ಲಿಕಾರ್ಜುನ ಖರ್ಗೆ-ಡಿಕೆಶಿ ಚರ್ಚೆ
ಕರ್ನಾಟಕ ಮುಖ್ಯಮಂತ್ರ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸಂಜೆ 5 ಗಂಟೆಗೆ ಡಿಕೆ ಶಿವಕುಮಾರ್ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚರ್ಚೆ ನಡೆಸಲಿದ್ದ, 6 ಗಂಟೆಗೆ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಿದ್ದಾರೆ. ಇಬ್ಬರ ಜೊತೆ ಚರ್ಚೆ ಬಳಿಕ ಅಂತಿಮ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.
5:00 PM, 16 May
ಕಾಂಗ್ರೆಸ್ಸಿನ ಹಿರಿಯ ನಾಯಕರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ಸಿನ ಹಿರಿಯ ನಾಯಕರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಚರ್ಚೆ. ಇನ್ನೂ, ಶಿಮ್ಲಾದಲ್ಲೇ ಇರುವ ಸೋನಿಯಾ ಗಾಂಧಿ.
5:47 PM, 16 May
ಖರ್ಗೆ, ಡಿಕೆಶಿ ದೆಹಲಿಯಲ್ಲಿ ಭೇಟಿ
ದೆಹಲಿಯಲ್ಲಿ ಅಂತಿಮ ಹಂತದ ಆಯ್ಕೆ ಕಸರತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಒನ್ ಟು ಒನ್ ಮಾತುಕತೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್. ಸಂಜೆ ಆರು ಗಂಟೆಗೆ ಖರ್ಗೆ ಭೇಟಿಯಾಗಲಿರುವ ಸಿದ್ದರಾಮಯ್ಯ.
6:10 PM, 16 May
ಖರ್ಗೆ ಭೇಟಿ ಮಾಡಲು ಹೊರಟ ಸಿದ್ದು
ಸಿದ್ದರಾಮಯ್ಯ ದೆಹಲಿಯ ಖಾಸಗಿ ಹೋಟೆಲ್ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ನಿವಾಸಕ್ಕೆ ಭೇಟಿ ನೀಡಲು ತೆರಳಿದ್ದಾರೆ. ಖರ್ಗೆ ನಿವಾಸದಲ್ಲಿ ಡಿಕೆ ಶಿವಕುಮಾರ್ ಭೇಟಿ ಮಾಡಿದ ತೆರಳಿದ ಬಳಿಕ, ವಾಪಸ್ ತೆರಳಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಖರ್ಗೆ-ಸಿದ್ದರಾಮಯ್ಯ ಚರ್ಚೆ ಮಾಡಲಿದ್ದಾರೆ.
6:14 PM, 16 May
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗದಿದ್ದರೇ ಪಕ್ಷಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ವದಂತಿ ಹಬ್ಬಿಸಲಾಗಿದ್ದು, ಪಕ್ಷಕ್ಕೆ ರಾಜೀನಾಮೆ ನೀಡುವ ಬಗ್ಗೆ ಊಹಾಪೋಹಗಳನ್ನು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಳ್ಳಿಹಾಕಿದ್ದು, ವದಂತಿ ಹಬ್ಬಿಸುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷವೇ ನನ್ನ ತಾಯಿ ಎಂದ ಅವರು, ತಮ್ಮೊಂದಿಗೆ 135 ಶಾಸಕರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.