ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯದ ಪ್ರಮುಖ ಆಸ್ಪತ್ರೆ ಮುಖ್ಯಸ್ಥರೊಂದಿಗೆ ಸಿಎಂ ಸಭೆ: ಪ್ರಮುಖಾಂಶಗಳು
ಬೆಂಗಳೂರು,
ಮೇ
1:
ಕರ್ನಾಟಕದಲ್ಲಿ
ಕೊರೊನಾವೈರಸ್
ಮಹಾಮಾರಿ
ಮರಣ
ಮೃದಂಗ
ಬಾರಿಸುತ್ತಿದೆ.
ರಾಜ್ಯದಲ್ಲಿ
ಪ್ರತಿನಿತ್ಯ
ನೂರಾರು
ಮಂದಿ
ಕೊವಿಡ್-19
ಸೋಂಕಿನಿಂದ
ಪ್ರಾಣ
ಬಿಡುತ್ತಿದ್ದು,
ಈ
ಪೈಕಿ
ಹಲವು
ಸೂಕ್ತ
ಸಂದರ್ಭದಲ್ಲಿ
ವೈದ್ಯಕೀಯ
ಸೇವೆ
ಲಭ್ಯವಾಗದೇ
ಮೃತಪಟ್ಟಿದ್ದಾರೆ.
ಕರ್ನಾಟಕದ
ಬಹುತೇಕ
ಸರ್ಕಾರಿ
ಹಾಗೂ
ಖಾಸಗಿ
ಆಸ್ಪತ್ರೆಗಳಲ್ಲಿ
ಕೊವಿಡ್-19
ರೋಗಿಗಳಿಗೆ
ಹಾಸಿಗೆ,
ಆಕ್ಸಿಜನ್,
ಐಸಿಯು
ಬೆಡ್
ಸೇರಿದಂತೆ
ವೈದ್ಯಕೀಯ
ಸೌಲಭ್ಯಗಳು
ಸಿಗುತ್ತಿಲ್ಲ
ಎಂಬ
ಆರೋಪ
ಮೇಲಿಂದ
ಮೇಲೆ
ಕೇಳಿ
ಬರುತ್ತಿದೆ.
ಕರ್ನಾಟಕದಲ್ಲಿ 2ನೇ ದಿನ 40 ಸಾವಿರದ ಗಡಿ ದಾಟಿದ ಕೊರೊನಾವೈರಸ್
ವೈದ್ಯಕೀಯ ವ್ಯವಸ್ಥೆ ಲೋಪದೋಷ ಒಂದು ಕಡೆಯಾದರೆ ಇನ್ನೊಂದು ಕಡೆ ಎರಡನೇ ದಿನವೂ ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ 40,000ದ ಗಡಿ ದಾಟಿ ಹೋಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ಒಂದು ವರದಿ ಇಲ್ಲಿದೆ ಓದಿ.
Recommended Video
ಕೆ.ಆರ್
ಮಾರುಕಟ್ಟೆಯಲ್ಲಿ
ಜನಜಾತ್ರೆ-ಹೂ,
ಹಣ್ಣು,
ತರಕಾರಿ
ದಿನಸಿ
ಖರೀದಿಗೆ
ಮುಗಿಬಿದ್ದ
ಜನ
|
Oneindia
Kannada
* ಆಮ್ಲಜನಕ ಸಾಂದ್ರಕಗಳನ್ನು ಬಳಸಿಕೊಂಡು ಹೋಟೆಲ್ ಗಳಲ್ಲಿ ಆಮ್ಲಜನಕ ಸಹಿತ ಬೆಡ್ ಮಾದರಿಯ ಸಿದ್ಧಪಡಿಸಿ ಕೊವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು
* ಕೇಂದ್ರೀಕೃತ ಆಮ್ಲಜನಕ ವ್ಯವಸ್ಥೆ ಇರುವ ಹಾಸಿಗೆಗಳನ್ನು ಐಸಿಯು ಹಾಸಿಗೆಗಳನ್ನಾಗಿ ಪರಿವರ್ತಿಸಲು ಕ್ರಮ
* ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕಗಳನ್ನು ನೀಡಿ ಕೊವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು. ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮತ್ತು ಸೂಕ್ತ ಗೌರವಧನ ನೀಡಲು ಕ್ರಮ ಕೈಗೊಳ್ಳುವುದು
* ನರ್ಸಿಂಗ್ ಕೋರ್ಸ್, ಫಾರ್ಮಸಿ ಕೋರ್ಸ್, ಫಿಜಿಯೋಥೆರಪಿ ಕೋರ್ಸ್, ಆಯುಷ್ ವೈದ್ಯ ಕೋರ್ಸ್, ದಂತ ವೈದ್ಯಕೀಯ ಕೋರ್ಸ್ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೊವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು
* ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೊವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ನಲ್ಲಿ ನೋಂದಣಿ ಮಾಡಿಸಿ ಅವರನ್ನು ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಪರಿಶೀಲಿಸುವುದು
* ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣರಹಿತ ಸೋಂಕಿತರನ್ನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರೆಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯ ಬಲಪಡಿಸುವುದು
* ವೈದ್ಯಕೀಯ ಕಾಲೇಜುಗಳ ಹಾಸ್ಟೇಲ್ ಸಾಮಾನ್ಯ ಹಾಸಿಗೆಗಳನ್ನು ಆಮ್ಲಜನಕ ಸಹಿತ ಹಾಸಿಗೆಗಳಾಗಿ ಪರಿವರ್ತಿಸಲು ಕ್ರಮ
* ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡುವುದು
* ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಯನ್ನು ಗುರುತಿಸಿ ಅವರುಗಳನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ
* ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರೂಪಿಸುವುದು
* 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನ
* ಕೊವಿಡ್ ಲಸಿಕೆಯನ್ನು ಹಾಕುವ ವೇಗವನ್ನು ಹೆಚ್ಚಿಸುವುದು
* ಕೊವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಗೌರವಧನವನ್ನು ಹೆಚ್ಚಿಸಲು ನಿರ್ಧಾರ
* ಕೊವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿ ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ
* ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅವರಿಗೆ ಆದ್ಯತೆಯ ಮೇಲೆ ಕೊವಿಡ್ ಲಸಿಕೆ ನೀಡಲು ಕ್ರಮ
Comments
coronavirus COVID19 death hospital yediyurappa karnataka bengaluru ರೋಗಿ ಆಸ್ಪತ್ರೆ ಯಡಿಯೂರಪ್ಪ ಕರ್ನಾಟಕ ಸಾವು ಬೆಂಗಳೂರು
English summary
Karnataka CM B S Yediyurappa And Major Hospitals Chiefs Meeting: Here Read Highlights Of Decisions.