'ನಾನು ಅಂಬರೀಶ್ ಮಾಡಬಾರದನ್ನೂ ಮಾಡಿದ್ದೇವೆ': ಸಿಎಂ ಬೊಮ್ಮಾಯಿ
ಬೆಂಗಳೂರು, ಫೆ 28: ಕನ್ನಡ ಚಿತ್ರೋದ್ಯಮದಲ್ಲಿ ರೆಬೆಲ್ ಸ್ಟಾರ್ ಎಂದೇ ಗುರುತಿಸಿಕೊಂಡಿದ್ದ ಅಂಬರೀಶ್ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಕಾರ್ಯದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫ್ಲ್ಯಾಷ್ ಬ್ಯಾಕಿಗೆ ಹೋಗಿದ್ದಾರೆ.
ತಮ್ಮ ಮತ್ತು ಅಂಬರೀಶ್ ಅವರ ನಲವತ್ತು ವರ್ಷದ ಒಡನಾಟದ ಬಗ್ಗೆ ರಸವತ್ತಾಗಿ ಸಭೆಯಲ್ಲಿ ವಿವರಣೆಯನ್ನು ನೀಡಿದ ಬೊಮ್ಮಾಯಿ ಅವರ ಹೇಳಿಕೆಗೆ ನೆರೆದಿದ್ದ ಜನಸ್ತೋಮ ಚಪ್ಪಾಳೆಯ ಮೇಲೆ ಚಪ್ಪಾಳೆಯನ್ನು ಹೊಡೆದಿದೆ.
"ನನ್ನ ಆತ್ಮೀಯ ಸ್ನೇಹಿತ ಅಂಬರೀಶ್, ನಮ್ಮ ಸ್ನೇಹ ನಲವತ್ತು ವರ್ಷಕ್ಕಿಂತ ಹೆಚ್ಚಿನದ್ದು. ಒಟ್ಟಿಗೆ ಓಡಾಡಿದ್ದೇವೆ, ಜೊತೆಗೆ ಸಮಯ ಕಳೆದಿದ್ದೇವೆ, ಊಟ ಮಾಡಿದ್ದೇವೆ, ರಾಜ್ಯಾದ್ಯಂತ ಸುತ್ತಿದ್ದೇವೆ, ಮಾಡಬೇಕಾಗಿರುವುದನ್ನು ಮಾಡಿದ್ದೇವೆ, ಮಾಡಬಾರದನ್ನೂ ಮಾಡಿದ್ದೇವೆ. ಅಂಬರೀಶ್ ಎನ್ನುವುದು ತೆರೆದ ಪುಸ್ತಕ"ಎಂದು ಬೊಮ್ಮಾಯಿ ತಮ್ಮ ಹಿಂದಿನ ಒಡನಾಟವನ್ನು ನೆನೆಪಿಸಿಕೊಂಡಿದ್ದಾರೆ.

"ಅಂಬರೀಶ್ ಅವರು ಅಧಿಕಾರದಲ್ಲಿ ಇರಲಿ, ಇಲ್ಲದೇ ಇರಲಿ, ಯಾವುದಕ್ಕೂ ಅಂಟಿಕೊಂಡು ಇದ್ದವರಲ್ಲ. ಅಧಿಕಾರವನ್ನು ಧಿಕ್ಕರಿಸಿಯೇ ರಾಜಕಾರಣ ಮಾಡಿದವರು ಅಂಬರೀಶ್. ಆ ರೀತಿಯ ವ್ಯಕ್ತಿಗಳು ರಾಜಕೀಯದಲ್ಲಿ ಸಿಗುವುದು ಬಹಳ ಕಡಿಮೆ"ಎಂದು ಬೊಮ್ಮಾಯಿ ಹೇಳಿದ್ದಾರೆ.
"ಅಂಬರೀಶ್ ಕೇಂದ್ರ ಸಚಿವರಾಗಿದ್ದ ವೇಳೆ, ಕಾವೇರಿ ವಿಚಾರದಲ್ಲಿ ಒಂದು ಕ್ಷಣವೂ ಯೋಚಿಸದೇ ರಾಜೀನಾಮೆಯನ್ನು ಬಿಸಾಕಿ, ಕನ್ನಡ ನಾಡಿನ ಪರವಾಗಿ ನಿಂತವರು ನಮ್ಮ ಅಂಬರೀಶ್. ಬಹಳಷ್ಟು ನಾಯಕರು ಕಾವೇರಿ ಹೋರಾಟದ ಬಗ್ಗೆ ಮಾತನಾಡುತ್ತಾರೆ, ಆದರೆ, ಕಾವೇರಿ ವಿಚಾರಕ್ಕೆ ಪದವಿಯನ್ನೇ ತ್ಯಾಗ ಮಾಡಿದವರು ಎಂದರೆ ಅದು ಅಂಬರೀಶ್"ಎಂದು ಬೊಮ್ಮಾಯಿ ಹೇಳಿದ್ದಾರೆ.
"ಮಂಡ್ಯ ಅಂದರೆ ಅಂಬರೀಶ್ ಅವರಿಗೆ ಪಂಚಪ್ರಾಣ, ಅಲ್ಲಿನ ಜನತೆಯ ಪ್ರೀತಿಯಲ್ಲಿ ಅವರು ಮುಳುಗಿ ಹೋಗಿದ್ದರು. ಬೆಂಗಳೂರಿನ ಅವರ ನಿವಾಸಕ್ಕೆ ಮಂಡ್ಯದಿಂದ ಬಂದರು ಎಂದರೆ ಅವರು ತೋರಿಸುವ ಆತಿಥ್ಯವೇ ಬೇರೆ. ಅಂಬರೀಶ್ ಬದುಕಿದ್ದರೆ ಅವರ ಸುತ್ತಮುತ್ತ ಜೀವಂತಿಕೆ ಇರುತ್ತಿತ್ತು"ಎಂದು ಬೊಮ್ಮಾಯಿ, ಅಂಬರೀಶ್ ವ್ಯಕ್ತಿತ್ವವನ್ನು ಹಾಡಿ ಹೊಗಳಿದ್ದಾರೆ.
"ಚಿತ್ರರಂಗಕ್ಕೆ ಅಂಬರೀಶ್ ಕೊಡುಗೆ ಅಪಾರ, ಅಂಬರೀಷ್ ನನ್ನ ಆತ್ಮೀಯ ಸ್ನೇಹಿತ ಆಗಿದ್ದರು. ನಾನು ಯಾವಾಗಲೂ ಅಂಬರೀಶ್ ಅಂತಾನೇ ಕರೆಯುತ್ತಿದ್ದೆ. ಈಗಲೂ ನಾನು ಹಾಗೆಯೇ ಕರೆಯುತ್ತೇನೆ. ನನಗೆ ಅವರೊಂದಿಗೆ 40 ವರ್ಷಗಳ ಸ್ನೇಹವಿತ್ತು"ಎಂದು ಬೊಮ್ಮಾಯಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications