ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಡಿಕೆ ಶಿವಕುಮಾರ್ ಹಿಂದೆಸರಿದಿದ್ದು ಯಾರಿಂದ? ಯಾಕೆ?

ನವದೆಹಲಿ ಮೇ 18: ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಡಿಕೆ ಶಿವಕುಮಾರ್ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಅಷ್ಟಕ್ಕೂ ಈ ಬಾರಿ ಸಿಎಂ ಆಗಲೇಬೇಕು ಎಂದು ಕನಸು ಕಂಡಿದ್ದ ಡಿಕೆ ಶಿವಕುಮಾರ್ ಹಿಂದೆ ಸರಿದಿದ್ದು ಯಾಕೆ? ಡಿಕೆ ಶಿವಕುಮಾರ್ ಹಿಂದೆ ಸರಿಯಲು ಕಾರಣ ಏನು? ಇದಕ್ಕೆ ಉತ್ತರ ಇಲ್ಲಿದೆ ನೋಡಿ.

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಬಂದಾಗಿನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದರು. ಈ ಬಾರಿ ಶತಾಯಗತಾಯ ಸಿಎಂ ಸ್ಥಾನ ಪಡೆಯುವ ಪ್ರಯತ್ನದಲ್ಲಿದ್ದ ಡಿಕೆ ಶಿವಕುಮಾರ್ ಹೈಕಮಾಂಡ್ ಕೊಟ್ಟ ಭರವಸೆಗಳಿಗೆ ಮಣಿದು ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ. ಅಷ್ಟಕ್ಕೂ ಡಿಕೆ ಶಿವಕುಮಾರ್ ಅವರು ಸ್ಟೆಪ್‌ಬ್ಯಾಕ್ ಆಗಲು ಕಾರಣ ಯಾರು?

Karnataka CM: DK shivakumar stepback from CM post

ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದರು. ಈ ಗುದ್ದಾಟ ಹೈಕಮಾಂಡ್ ಅಂಗಳ ತಲುಪಿತ್ತು. ಫಲಿತಾಂಶ ಬಂದು ಐದು ದಿನಗಳ ನಂತರ ಸಾಲು ಸಾಲು ಸಭೆ ಹಾಗೂ ಚರ್ಚೆಗಳ ಬಳಿಕ ಈ ಗುದ್ದಾಟಕ್ಕೆ ಹೈಕಮಾಂಡ್ ಅಂತ್ಯ ಹಾಡಿದೆ.

ಸುದೀರ್ಘ ಸಮಾಲೋಚನೆಯ ನಂತರ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಧ್ಯಸ್ಥಿಕೆಯ ನಂತರ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಪಾತ್ರವನ್ನು ವಹಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

Karnataka CM: DK shivakumar stepback from CM post

ಪಕ್ಷದ ಮೂಲಗಳು ಹೇಳುವಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ, ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ ಎನ್ನಲಾಗುತ್ತಿದೆ.

ಸೋನಿಯಾ ಗಾಂಧಿ ಅವರು ಮುಖ್ಯಮಂತ್ರಿ ಸ್ಥಾನದ ಬೇಡಿಕೆಯ ಬಗ್ಗೆ ದೃಢವಾಗಿ ನಿಂತಿದ್ದ ಡಿಕೆ ಶಿವಕುಮಾರ್ ಅವರನ್ನು ನಿನ್ನೆ ಸಂಜೆ ತಡರಾತ್ರಿಯವರೆಗೂ ಮಾತುಕತೆ ನಡೆಸಿ ಕೊನೆಗೆ ಡಿಕೆ ಶಿವಕುಮಾರ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಿಕ್ಕಟ್ಟನ್ನು ಪರಿಹರಿಸಲು ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಒಪ್ಪಂದದ ಪ್ರಕಾರ ಸಿದ್ದರಾಮಯ್ಯ ಎರಡುವರೆ ವರ್ಷ ಹಾಗೂ ಡಿಕೆ ಶಿವಕುಮಾರ್ ಎರಡುವರೆ ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ. ಈ ಆಲೋಚನೆಯೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಡಿಕೆ ಶಿವಕುಮಾರ್ ಮನವೊಲಿಸಲು ಹರಸಾಹಸ ಮಾಡಿದೆ ಎನ್ನಲಾಗುತ್ತಿದೆ.

Karnataka CM: DK shivakumar stepback from CM post

ಸಿದ್ದರಾಮಯ್ಯ ಮತ್ತು ಶ್ರೀ ಶಿವಕುಮಾರ್ ಇಬ್ಬರೂ ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದರು. ಉನ್ನತ ಸ್ಥಾನದ ಆಕಾಂಕ್ಷಿಗಳಾಗಿ ತಮ್ಮ ವಾದಗಳನ್ನು ಮಂಡಿಸಿದರು.

ಶ್ರೀಮತಿ ಸೋನಿಯಾ ಗಾಂಧಿ ನಿನ್ನೆ ಸಂಜೆ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿ, 50-50 ಫಾರ್ಮುಲಾ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸಿದ್ದರಾಮಯ್ಯ ಸಿಎಂ ಡಿಕೆ ಶಿವಕುಮಾರ್ ಡಿಸಿಎಂ ಆಗಿ ಶನಿವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+