ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್-ಎಚ್‌ಡಿಕೆ ಭೇಟಿ, ಸಿದ್ದರಾಮಯ್ಯಗೆ ಮೂಗುದಾರ ಹಾಕಲು ಪ್ಲಾನ್?

By Manjunatha
|
Google Oneindia Kannada News

Recommended Video

ಸಿದ್ದರಾಮಯ್ಯನವರಿಗೆ ಮೂಗುದಾರ ಹಾಕೋಕೆ ಎಚ್ ಡಿ ಕೆ ಮೀಟ್ಸ್ ರಾಹುಲ್ ಗಾಂಧಿ | Oneindia Kannada

ನವ ದೆಹಲಿ, ಜೂನ್ 18: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಪ್ರಸ್ತುತ ರಾಜ್ಯದ ರಾಜಕೀಯ ಸನ್ನಿವೇಶದಿಂದಾಗಿ ಈ ಭೇಟಿ ಮಹತ್ವದ್ದಾಗಿದೆ.

ಮೈತ್ರಿ ಸರ್ಕಾರದ ಎರಡೂ ಪಕ್ಷದ ಪ್ರಮುಖ ನಾಯಕರೂ ಭಿನ್ನ-ಭಿನ್ನ ಅಭಿಪ್ರಾಯಗಳನ್ನು ಹೊಂದಿ ತಮ್ಮದೇ ಅಂತಿಮ ಎಂಬ ನಿಲುವು ಪ್ರದರ್ಶಿಸುತ್ತಿದ್ದಾರೆ. ಇದು ಮೈತ್ರಿಯಲ್ಲಿ ಸಣ್ಣ ಬಿರುಕು ಮೂಡಿಸಿರುವ ಸೂಚನೆ ನೀಡುತ್ತಿದೆ ಹಾಗಾಗಿ ಕುಮಾರಸ್ವಾಮಿ ಅವರ ರಾಹುಲ್ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಕಾಂಗ್ರೆಸ್ ನಾಯಕರಿಗೆ ಆಘಾತ ತಂದ ಎಚ್ಡಿಕೆ-ರಾಹುಲ್ ಗಾಂಧಿ ಮಾತುಕತೆ!ಕಾಂಗ್ರೆಸ್ ನಾಯಕರಿಗೆ ಆಘಾತ ತಂದ ಎಚ್ಡಿಕೆ-ರಾಹುಲ್ ಗಾಂಧಿ ಮಾತುಕತೆ!

ದೆಹಲಿಯ ತುಘಲಕ್ ರಸ್ತೆಯಲ್ಲಿನ ನಿವಾಸದಲ್ಲಿ ರಾಹುಲ್ ಗಾಂಧಿ ಹಾಗೂ ಕುಮಾರಸ್ವಾಮಿ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Karnataka CM Kumaraswamy met Rahul Gandhi today

ಸಚಿವ ಸಂಪುಟ, ಬಜೆಟ್ ಮಂಡನೆ ಬಗ್ಗೆ ಕಾಂಗ್ರೆಸ್ ನಾಯಕರು ಯಾವುದೇ ಹೇಳಿಕೆಗಳನ್ನು ನೀಡದಂತೆ ಹಾಗೂ ಸಂಪುಟದಲ್ಲಿರದ ಕಾಂಗ್ರೆಸ್‌ನ ಹಿರಿಯ ನಾಯಕರು ಸರ್ಕಾರದ ನೀತಿಗಳಲ್ಲಿ ತಲೆ ಹಾಕದಂತೆ ಸೂಚಿಸುವಂತೆ ರಾಹುಲ್ ಅವರನ್ನು ಎಚ್‌ಡಿಕೆ ಕೋರುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಎದ್ದಿರುವ ಭಿನ್ನಮತದಿಂದ ಸರ್ಕಾರಕ್ಕೆ ಪೆಟ್ಟಾಗುವ ಸಾದ್ಯತೆ ಇದ್ದು ಆದಷ್ಟು ಭೇಗ ಭಿನ್ನಮತ ಶಮನಗೊಳಿಸುವಂತೆಯೂ ಕುಮಾರಸ್ವಾಮಿ ಅವರು ರಾಹುಲ್ ಅವರನ್ನು ಮನವಿ ಮಾಡಲಿದ್ದಾರೆ.

ಸಿದ್ದರಾಮಯ್ಯ ಅವರು ಅಡ್ಡಗಾಲು ಹಾಕುತ್ತಿರುವ ಬಜೆಟ್ ಮಂಡನೆ ವಿಷಯವನ್ನೂ ಪ್ರಸ್ತಾಪಿಸಲಿದ್ದು. ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ಅವರಿಂದ ಮೂಗುದಾರ ಹಾಕಿಸುವ ಪ್ರಯತ್ನವನ್ನೂ ಕುಮಾರಸ್ವಾಮಿ ಅವರು ಮಾಡಲಿದ್ದಾರೆ.

English summary
Karnataka CM Kumaraswamy met AICC president Rahul Gandhi today in New Delhi. He may talk about congress rebels and senior leaders who interfering in government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X