ಕಮಲ್-ಕುಮಾರಸ್ವಾಮಿ ಭೇಟಿ: ಕಾವೇರಿ ಸೇರಿ ಹಲವು ವಿಷಯ ಚರ್ಚೆ

Recommended Video

      ಸೋಮವಾರ ಎಚ್ ಡಿ ಕುಮಾರಸ್ವಾಮಿಯವರನ್ನ ಭೇಟಿ ಮಾಡಿದ ಕಮಲ್ ಹಾಸನ್ | Oneindia Kannada

      ಬೆಂಗಳೂರು, ಜೂನ್ 04: ಮಕ್ಕಳ್ ನಿಧಿ ಮಯಂ ಪಕ್ಷದ ಸಂಸ್ಥಾಪಕ, ತಮಿಳು ಸೂಪರ್ ಸ್ಟಾರ್‌ ಕಮಲ್‌ ಹಾಸನ್ ಅವರು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

      ಕೃಷ್ಣಾದಲ್ಲಿ ಮುಖ್ಯಮಂತ್ರಿಯನ್ನು ಭೇಟಿ ಆದ ಕಮಲ್‌ಹಸನ್ ಅವರು ಕಾವೇರಿ ವಿವಾದ ಸೇರಿದಂತೆ ಹಲವು ರಾಜಕೀಯ ವಿಚಾರಗಳನ್ನು ಪರಸ್ಪರ ಚರ್ಚೆ ಮಾಡಿದ್ದಾರೆ.

      ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಕಮಲ್‌ ಹಾಸನ್ ಅವರು ಅತ್ಯುತ್ತಮ ಕಲಾವಿದ ಜೊತೆಗೆ ಮಾನವೀಯ ಮೌಲ್ಯಗಳನ್ನು ಇಟ್ಟುಕೊಂಡಿರುವ ರಾಜಕಾರಣಿ ಎಂದು ಹೊಗಳಿದ್ದಾರೆ.

      Karnataka CM Kumaraswamy, Tamil actor Kamal Hassan met today

      ತಮಿಳುನಾಡು-ಕರ್ನಾಟಕ ಉತ್ತಮ ಬಾಂಧವ್ಯ ಹೊಂದಬೇಕು, ಕಾವೇರಿ ವಿವಾದ ಸೂಕ್ತ ರೀತಿಯಲ್ಲಿ ಬಗೆಹರಿಯಬೇಕು, ಎರಡೂ ರಾಜ್ಯಗಳ ನಡುವೆ ಬ್ರಾತೃತ್ವ ಭಾವ ಇರಬೇಕು ಎಂಬ ವಾದವನ್ನು ಕಮಲ್ ಹೊಂದಿದ್ದಾರೆ ಎಂದರು. ಕಾವೇರಿ ವಿವಾದ ಬಗೆಹರಿಸಲು ತಮಿಳುನಾಡು ಸರ್ಕಾರದೊಂದಿಗೆ ಮಾತನಾಡಲು ಸಿದ್ಧವಿರುವುದಾಗಿಯೂ ಕುಮಾರಸ್ವಾಮಿ ಈ ಸಂದರ್ಭದಲ್ಲಿ ಹೇಳಿದರು.

      ಚರ್ಚೆಯ ವೇಳೆ ವಿವಾದಕ್ಕೆ ಈಡಾಗಿರುವ ರಜನೀಕಾಂತ್‌ ಅವರ 'ಕಾಲಾ' ಚಿತ್ರದ ಬಗ್ಗೆ ಮಾತನಾಡಿಲ್ಲ ಎಂದ ಅವರು, ಸಿನಿಮಾಕ್ಕಿಂತಲೂ ಗಂಭೀರವಾದ ಹಲವು ವಿಷಯಗಳನ್ನು ಇಬ್ಬರೂ ಚರ್ಚೆ ಮಾಡಿದೆವು ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+