Get Updates
Get notified of breaking news, exclusive insights, and must-see stories!
Live

Karnataka CM Race LIVE: ಜೋಡೆತ್ತು ಸರ್ಕಾರ: ಮೇ 20ರಂದು ಸಿದ್ದು, ಡಿಕೆಶಿ ಪ್ರಮಾಣವಚನ

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯನ್ನು ನಡೆಸಲಾಯಿತು. ಈ ವೇಳೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಯಾರಿಗೆ ನೀಡಲಾಗಿದೆ ಎನ್ನುವ ಬಗ್ಗೆ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದರು. 'ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಜೊತೆಗೆ ಕೆಲವು ಮುಖಂಡರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಮ್ಮ ಇಬ್ಬರು ನಾಯಕರೂ ಮುಖ್ಯಮಂತ್ರಿ ಹುದ್ದೆ ಸ್ಥಾನ ನಿಭಾಯಿಸಲು ಸಮರ್ಥರು. ನಾವು ಘೋಷಿಸಿದ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಬೇಕಿದೆ. ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ' ಎಂದು ಹೇಳುವ ಮೂಲಕ ಸಿಎಂ ಗುದ್ದಾಟದ ಅನುಮಾನಗಳಿಗೆ ಅಂತಿಮವಾಗಿ ತೆರೆ ಎಳಿದಿದ್ದಾರೆ.

chief minister of karnataka

May 18, 2023, 9:30 pm IST

ಸರ್ಕಾರ ರಚನೆಗೆ ಸಿದ್ದರಾಮಯ್ಯಗೆ ಗ್ರೀನ್‌ ಸಿಗ್ನಲ್‌ ನೀಡಿದ ರಾಜ್ಯಪಾಲರು
May 18, 2023, 9:22 pm IST

ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದ ಸಿದ್ದರಾಮಯ್ಯ ಡಿಕೆ ಶಿವಕುಮಾರ್

ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದ ಸಿದ್ದರಾಮಯ್ಯ ಡಿಕೆ ಶಿವಕುಮಾರ್
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೊಟ್ ಅವರನ್ನು ಭೇಟಿ ಮಾಡಿ ನೂತನ ಸರಕಾರದ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಪಕ್ಷದ ಹಕ್ಕು ಪ್ರತಿಪಾದಿಸಿದರು. ಈ ವೇಳೆ ನಾಯಕರಾದ ಬಿ ಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಸಲೀಮ್ ಅಹ್ಮದ್ ಮತ್ತಿತರರು ಇದ್ದರು.
May 18, 2023, 9:22 pm IST

ಸಿಎಂ, ಡಿಸಿಎಂ ಜೊತೆಗೆ 10 ಜನ ಪ್ರಮಾಣ ವಚನ!

ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಪೈಪೋಟಿಗೆ ಕೊನೆಗೂ ತೆರೆ ಬಿದ್ದಿದ್ದು, ಗುರುವಾರ ನಡೆದ ಶಾಸಕಾಂಗ ಸಭೆಯಲ್ಲಿ ಸರ್ಕಾರ ರಚನೆ ಕುರಿತು ಚರ್ಚೆ ನಡೆದಿದ್ದು, ಮೇ 20 ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಂ ಹಾಗೂ ಡಿಸಿಎಂ ಜೊತೆಗೆ 10 ಜನ ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
May 18, 2023, 9:21 pm IST

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಶ್ರೀ @siddramaiah ನವರಿಗೆ ಹಾರ್ದಿಕ ಅಭಿನಂದನೆಗಳು.
May 18, 2023, 4:48 pm IST

ಕಾಂಗ್ರೆಸ್‌ ಸರ್ಕಾರ ರಚನೆ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಪರಮೇಶ್ವರ್‌
-->

ಸಿದ್ದರಾಮಯ್ಯ ಟ್ವೀಟ್

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ.2ನೇ ಬಾರಿ ಸಿಎಂ ಪಟ್ಟ ಅಲಂಕರಿಸುತ್ತಿರುವ ಸಿದ್ದರಾಮಯ್ಯ ಅವರ ಮನೆ ಮುಂದೆ ಶುಭಾಶಯ ಕೋರಿ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಶುಭ ಕೋರಲು ಅಭಿಮಾನಿಗಳು ಆಗಮಿಸುವ ಹಿನ್ನೆಲೆ ಸಿದ್ದರಾಮಯ್ಯ ನಿವಾಸದ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
May 18, 2023, 2:36 pm IST

ಕಾಂಗ್ರೆಸ್ ಅಧಿಕಾರದ ಬಗ್ಗೆ ಕುಮಾರಸ್ವಾಮಿ ಪ್ರತಿಕ್ರಿಯೆ

ಕಾಂಗ್ರೆಸ್ ಅಧಿಕಾರದ ಬಗ್ಗೆ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್​ಗೆ ಡಿಸಿಎಂ ಸ್ಥಾನ ನೀಡಿರುವ ವಿಚಾರವಾಗಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಕಾಂಗ್ರೆಸ್​​ ಪಕ್ಷದವರು ಸೇರಿ ಈ ಬಗ್ಗೆ ತೀರ್ಮಾನ ಮಾಡಿದ್ದಾರೆ. ಅದರ ಬಗ್ಗೆ ನಾನೇನೂ ಮಾತನಾಡಲ್ಲ ಎಂದರು. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಈಗ ಹೊಸ ಸರ್ಕಾರ ರಚನೆ ಆಗಬೇಕು. ಅವರ ಬಜೆಟ್ ಹಾಗೂ 5 ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನಕ್ಕೆ ತರುತ್ತಾರೋ ನೋಡಬೇಕು ಎಂದರು.
May 18, 2023, 1:07 pm IST

'ಹೈಕಮಾಂಡ್ ನಿರ್ಧಾರಕ್ಕೆ ನಾನು ತಲೆ ಬಾಗಿದ್ದೇನೆ' ಡಿಕೆಶಿ

'ಜನ ಇಷ್ಟು ದೊಡ್ಡ ಜವಬ್ದಾರಿ ಕೊಟ್ಟಿದ್ದಾರೆ. ಅವರೆಲ್ಲರ ಆಸೆಗಳನ್ನು ಈಡೇರಿಸಬೇಕಿದೆ. ನಾನೇ ಖುದ್ದಾಗಿ ರಾಜಪಾಲರಿಗೆ ಪತ್ರ ಬರೆದಿದ್ದೇನೆ. ನಾನು ಮೊದಲೇ ಹೇಳಿದ್ದೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ತಲೆ ಬಾಗುತ್ತೇವೆ ಎಂದು. ಅದರಂತೆ ರಾಹುಲ್ ಗಾಂಧಿ ಹಾಗೂ ಎಲ್ಲಾ ನಾಯಕರು ಸೇರಿ ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಅದನ್ನು ಘೋಷಣೆ ಕೂಡ ಮಾಡಲಾಗಿದೆ. ಅವರು ಏನು ಹೇಳಿದರು ಅದನ್ನು ನಾವು ಕೇಳ್ತಾಯಿದಿವಿ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ನಾವು ತಲೆ ಬಾಗಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ.
May 18, 2023, 12:16 pm IST

ಮೇ ಇಪ್ಪತ್ತರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಕಾರ್ಯಕ್ರಮ. ನಮ್ಮ ಇಬ್ಬರು ನಾಯಕರೂ ಮುಖ್ಯಮಂತ್ರಿ ಹುದ್ದೆ ಸ್ಥಾನ ನಿಭಾಯಿಸಲು ಸಮರ್ಥರು. ನಾವು ಘೋಷಿಸಿದ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಬೇಕಿದೆ - ರಣದೀಪ್ ಸುರ್ಜೇವಾಲ.
May 18, 2023, 12:15 pm IST

'ಕರ್ನಾಟಕಕ್ಕೆ ಒಂದೇ ಡಿಸಿಎಂ'ಕೆ.ಸಿ.ವೇಣುಗೋಪಾಲ್

ಕರ್ನಾಟಕಕ್ಕೆ ಒಂದೇ ಡಿಸಿಎಂ ಇರುತ್ತಾರೆ. ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಆಗಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ, ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಜೊತೆಗೆ ಕೆಲವು ಮುಖಂಡರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
May 18, 2023, 12:13 pm IST

'ಸಿದ್ದರಾಮಯ್ಯ ಅವರನ್ನು ಸಿಎಂ ಆಯ್ಕೆ ಮಾಡಲಾಗಿದೆ'

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಲಾಯಿತು. ಈ ವೇಳೆ ಮಾತನಾಡಿದ ಕೆಸಿ ವೇಣುಗೋಪಾಲ್, 'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರ ಪಾತ್ರ ಮಹತ್ವದ್ದಾಗಿದೆ. ಜೊತೆಗೆ ಹಗಲು ರಾತ್ರಿ ಎನ್ನದೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕಾಂಗ್ರೆಸ್‌ನ ಹಲವಾರು ನಾಯಕರು ಶ್ರಮಿಸಿದ್ದಾರೆ. ಇಬ್ಬರೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರನ್ನು ಸಿಎಂ ಆಯ್ಕೆ ಮಾಡಲಾಯಿತು' ಎಂದು ಹೇಳಿದರು.
May 18, 2023, 12:01 pm IST

ಸಿದ್ದರಾಮಯ್ಯ ಜೊತೆ ಉಪಹಾರ ಸೇವಿಸಿದ ಡಿಕೆ ಶಿವಕುಮಾರ್

ಕರ್ನಾಟಕ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಇಂದು ಮುಂಜಾನೆ ಪಕ್ಷದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಉಪಹಾರ ಸೇವಿಸಿದರು.
May 18, 2023, 10:36 am IST

ಅಣ್ಣ ಆಗಲಿಲ್ಲ ಸಿಎಂ- ಕಾದು ನೋಡೋಣ ಎಂದ ತಮ್ಮ

ಅಣ್ಣ ಆಗಲಿಲ್ಲ ಸಿಎಂ- ಕಾದು ನೋಡೋಣ ಎಂದ ತಮ್ಮ
'ನನಗೆ ಪೂರ್ಣ ಸಂತೋಷವಿಲ್ಲ ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಬಯಸಿದ್ದೇವೆ. ಅದಕ್ಕಾಗಿಯೇ ಡಿಕೆ ಶಿವಕುಮಾರ್ ಒಪ್ಪಿಕೊಳ್ಳಬೇಕಾಯಿತು. ಭವಿಷ್ಯದಲ್ಲಿ ನಾವು ನೋಡುತ್ತೇವೆ, ಮುಂದೆ ದಾರಿ ಬಹಳ ದೂರವಿದೆ. ನನಗೆ ಆಸೆ ಇತ್ತು (ಡಿ.ಕೆ.ಶಿವಕುಮಾರ್ ಗೆ ಸಿಎಂ ಹುದ್ದೆ) ಆದರೆ ಆಗಲಿಲ್ಲ. ಕಾದು ನೋಡೋಣ' ಎಂದು ಕಾಂಗ್ರೆಸ್ ಸಂಸದ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಹೇಳಿದರು.
May 18, 2023, 10:34 am IST

ಸರ್ಕಾರ ರಚನೆ ಕುರಿತು ಪರಮೇಶ್ವರ ಪ್ರತಿಕ್ರಿಯೆ

ಸರ್ಕಾರ ರಚನೆ ಕುರಿತು ಕಾಂಗ್ರೆಸ್ ನಾಯಕ ಮತ್ತು ಮಾಜಿ ಡಿಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಯಾರಿಗೆ ಯಾವ ಸ್ಥಾನ ನೀಡಬೇಕೆಂಬುದರ ಬಗ್ಗೆ ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಲಿ, ನಂತರ ಉಳಿದ ವಿಷಯಗಳನ್ನು ಅನುಸರಿಸಲಾಗುವುದು ಎಂದು ಕರ್ನಾಟಕ ಸರ್ಕಾರ ರಚನೆ ಕುರಿತು ಡಾ ಜಿ ಪರಮೇಶ್ವರ ಹೇಳಿದ್ದಾರೆ.
May 18, 2023, 10:32 am IST

ಪಕ್ಷದ ಹಿತದೃಷ್ಟಿಯಿಂದ ನಾನು ಸಂಧಾನಕ್ಕೆ ಒಪ್ಪಿಕೊಂಡಿದ್ದೇನೆ. ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ, ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಜನತೆಗೆ ಹಲವು ಭರವಸೆಗಳನ್ನು ನೀಡಿದ್ದೇವೆ, ಅವುಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
May 18, 2023, 10:28 am IST

ಸಿಎಂ ಸ್ಥಾನ ಕೈಬಿಡಲು ಡಿಕೆಶಿ ಹಾಕಿದ ಷರತ್ತುಗಳೇನು?

ಸಿಎಂ ಸ್ಥಾನ ಕೈಬಿಡಲು ಡಿಕೆ ಶಿವಕುಮಾರ್ ಕೆಲ ಷರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಹಾಗಾದರೆ ಆ ಷರತ್ತುಗಳೇನು ಎಂದು ನೋಡುವುದಾದರೆ- *2 ವರ್ಷ ಮಾತ್ರ ಸಿದ್ದರಾಮಯ್ಯ ಸಿಎಂ ಆಗಿರಬೇಕು, ನಂತರದ 3 ವರ್ಷಗಳ ಕಾಲ ಸಿಎಂ ಹುದ್ದೆ ನನ್ನದಾಗಬೇಕು. *ಡಿಸಿಎಂ ಸ್ಥಾನದಲ್ಲಿ ನಾನು ಮಾತ್ರ ಇರಬೇಕು. ಬೇರೆ ಇನ್ನಾರಿಗೂ ಡಿಸಿಎಂ ಸ್ಥಾನ ಹಂಚಿಕೆ ಮಾಡಬಾರದು. *ಜತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ನನ್ನಲ್ಲೇ ಇರಬೇಕು ಎಂಬ ಷರತ್ತುಗಳನ್ನು ಡಿ.ಕೆ ಶಿವಕುಮಾರ್ ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
May 18, 2023, 10:00 am IST

ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಸಿದ್ದು, ಡಿಕೆಶಿ ಮುಖಾಮುಖಿ

ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ನಿವಾಸದಲ್ಲಿ ಇಂದು ಬೆಳಿಗ್ಗೆ ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಆಹ್ವಾನಿಸಲಾಗಿದೆ. ಈಗಾಗಲೇ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ವೇಣುಗೋಪಾಲ ಮನೆಗೆ ಆಗಮಿಸಿದ್ದಾರೆ. ವೇಣುಗೋಪಾಲ ನಿವಾಸದತ್ತ ಸಿದ್ದರಾಮಯ್ಯ ಹೊರಟಿದ್ದು, ಇತ್ತ ಡಿಕೆ ಶಿವಕುಮಾರ್ ವೇಣುಗೋಪಾಲ ನಿವಾಸಕ್ಕೆ ತಲುಪಿದ್ದಾರೆ. ವೇಣುಗೋಪಾಲ ಮನೆಯಲ್ಲಿ ಇಂದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಮುಖಾಮುಖಿಯಾಗಲಿದ್ದಾರೆ.
May 18, 2023, 9:00 am IST

ಡಿಕೆಶಿ ಮನವೊಲಿಸುವಲ್ಲಿ ಯಶಸ್ವಿಯಾದ ಸೋನಿಯಾ

ಸುದೀರ್ಘ ಸಮಾಲೋಚನೆಯ ನಂತರ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮಧ್ಯಸ್ಥಿಕೆಯ ನಂತರ ಕರ್ನಾಟಕ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಪಾತ್ರವನ್ನು ವಹಿಸಿಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಸೋನಿಯಾ ಗಾಂಧಿ ಅವರು ಮುಖ್ಯಮಂತ್ರಿ ಸ್ಥಾನದ ಬೇಡಿಕೆಯ ಬಗ್ಗೆ ದೃಢವಾಗಿ ನಿಂತಿದ್ದ ಡಿಕೆ ಶಿವಕುಮಾರ್ ಅವರೊಂದಿಗೆ ನಿನ್ನೆ ಸಂಜೆ ತಡರಾತ್ರಿಯವರೆಗೂ ಮಾತುಕತೆ ನಡೆಸಿ ಕೊನೆಗೆ ಡಿಕೆ ಶಿವಕುಮಾರ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗುತ್ತಿದೆ.
May 18, 2023, 8:18 am IST

ಇವರಿಗೆ ಮಂತ್ರಿ ಸ್ಥಾನ ಪಕ್ಕಾ..?

ಸಿಎಂ, ಡಿಸಿಎಂ ಫೈಟ್‌ಗೆ ಹೈಕಮಾಂಡ್ ಅಂತ್ಯ ಹಾಡಿದೆ. ಈಗ ಮಂತ್ರಿಗಳ ಆಯ್ಕೆ ಕಸರತ್ತು ನಡೆದಿದೆ. ಸಚಿವ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಅನ್ನೋದನ್ನು ನೊಡೋದಾದರೆ, ಬಿಕೆ ಹರಿಪ್ರಸಾದ್, ಎಂಬಿ ಪಾಟೀಲ್, ಕೆಜೆ ಜಾರ್ಜ್‌, ಯು ಟಿ ಖಾದರ್, ಕೃಷ್ಣಬೈರೇಗೌಡ, ಜಿ ಪರಮೇಶ್ವರ್, ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಆರ್. ವಿ ದೇಶ್‌ಪಾಂಡೆ, ಜಮೀರ್ ಅಹ್ಮದ್, ಕೆ ಹೆಚ್‌ ಮುನಿಯಪ್ಪ ಸೇರಿದಂತೆ ಇತರರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆ ಇದೆ. ಈ ನಡುವೆ ಮೂರು ಡಿಸಿಎಂಗಳು ಬೇಡ ಎಂದ ಡಿಕೆ ಶಿವಕುಮಾರ್ ಹೇಳಿದ್ದಾರೆ ಎನ್ನಲಾಗುತ್ತಿದೆ.
May 18, 2023, 7:33 am IST

ಎರಡುವರೆ ವರ್ಷ ಸಿದ್ದು, ನಂತರ ಡಿಕೆಶಿ ಮುಖ್ಯಮಂತ್ರಿ

ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದ ಡಿಕೆ ಶಿವಕುಮಾರ್ ಕೊನೆಗೂ ತಮ್ಮ ನಿರ್ಧಾರದಿಂದ ದೂರ ಸರಿದಿದ್ದಾರೆ. ಫಲಿತಾಂಶ ಬಂದ ನಂತರ ಹೈಕಮಾಂಡ್ ಮಟ್ಟದಲ್ಲಿ ಸಿಎಂ ಸ್ಥಾನದ ಬಗ್ಗೆ ಚರ್ಚೆ ಸಭೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇದ್ದವು. ಆದರೀಗ ಎರಡುವರೆ ವರ್ಷ ಸಿದ್ದರಾಮಯ್ಯ ಸಿಎಂ ಆದರೆ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎನ್ನುವ ಒಪ್ಪಂದದ ಮೇಲೆ ಡಿಕೆ ಶಿವಕುಮಾರ್ ತಮ್ಮ ಸಿಎಂ ಆಸೆಯಿಂದ ದೂರ ಸರಿದಿದ್ದಾರೆ ಎನ್ನಲಾಗುತ್ತಿದೆ. ಪಕ್ಷದ ಹಿತ ದೃಷ್ಟಿಯಿಂದ ಡಿಕೆ ಶಿವಕುಮಾರ್ ಸಿಎಂ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗುತ್ತಿದೆ.
May 18, 2023, 7:08 am IST

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ

ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ
ಕರ್ನಾಟಕದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನ ಆಯ್ಕೆಯ ಬಳಿಕ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆಗೆ ಶಾಸಕರನ್ನು ಆಹ್ವಾನಿಸಲಾಗಿದೆ. ಇಂದು ಸಂಜೆ 7ಗಂಟೆಗೆ ಬೆಂಗಳೂರು ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ವಿಧಾನಸಭೆ ಸದಸ್ಯರುಗಳು, ವಿಧಾನಪರಿಷತ್ ಸದಸ್ಯರುಗಳು ಹಾಗೂ ಸಂಸದರನ್ನು ಒಳಗೊಂಡ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಗೆ ಎಲ್ಲಾ ಸದಸ್ಯರುಗಳು ತಪ್ಪದೇ ಭಾಗವಹಿಸಬೇಕಾಗಿ ಕೋರಲಾಗಿದೆ.
May 18, 2023, 7:01 am IST

ಸಿದ್ದರಾಮಯ್ಯ ಹುಟ್ಟೂರಿನಲ್ಲಿ ಸಂಭ್ರಮ

ಹಲವಾರು ಬಾರಿ ಸಭೆ ಚರ್ಚೆ ಬಳಿಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಇತ್ತ ಸಿಎಂ ಆಕಾಂಕ್ಷಿಯಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಶನಿವಾರ ಅಂದರೆ ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿದ್ದರಾಮಯ್ಯ ಮುಖ್ಯಮಮತ್ರಿಯಾಗಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಿಂದ ಸಿದ್ದರಾಮಯ್ಯ ಹುಟ್ಟೂರಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಅವರ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡುವ ಮೂಲಕ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ.
May 18, 2023, 6:45 am IST

ಸಿದ್ದು ಸಿಎಂ, ಡಿಕೆಶಿ ಡಿಸಿಎಂ: ಮೇ 20ಕ್ಕೆ ಪ್ರಮಾಣ ವಚನ

ಕರ್ನಾಟಕ ಸಿಎಂ ಸ್ಥಾನಕ್ಕಾಗಿ ನಡೆದ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕರ್ನಾಟಕ ಸರ್ಕಾರ ರಚನೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಮ್ಮತಕ್ಕೆ ಬಂದಿದ್ದಾರೆ. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
May 18, 2023, 6:15 am IST

ವಿಧಾನ ಪರಿಷತ್‌ ಸದಸ್ಯ ರವಿ

ಇನ್ನೂ ಮುಖ್ಯಮಂತ್ರಿ ಯಾರು ಎನ್ನುವ ಬಗ್ಗೆ ನಿರ್ಧಾರವಾಗಿಲ್ಲ. ಇನ್ನು ಅಂತಿಮ ನಿರ್ಧಾರಕ್ಕೆ ಬರಲು ಎರಡು ದಿನಗಳು ಆಗಬಹುದು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಿಎಂ ಆದ ಸಿದ್ದರಾಮಯ್ಯ ಇಬ್ಬರೂ ಖುಷಿಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ - ವಿಧಾನ ಪರಿಷತ್‌ ಸದಸ್ಯ ರವಿ.
May 18, 2023, 6:12 am IST

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಮುಂದಿನ 48-72ಗಂಟೆಯೊಳಗೆ ನಾವು ಸರ್ಕಾರ ರಚಿಸುತ್ತೇವೆ. ಮಾಧ್ಯಮದವರ ಮುಂದೆ ಹೇಳಿಕೆ ನೀಡುವ ತಮ್ಮದೇ ಪಕ್ಷದ ಸದಸ್ಯರಿಗೆ ನೊಟೀಸ್ ನೀಡಲು ಸೂಚನೆ. ಕೆಲವು ಕಾಂಗ್ರೆಸ್ ನಾಯಕರೇ ಸಿದ್ದರಾಮಯ್ಯ ಮುಂದಿನ ಸಿಎಂ ಎನ್ನುವ ಹೇಳಿಕೆಯನ್ನು ನೀಡಿದ್ದರು.
May 18, 2023, 6:08 am IST

ಮುಂದಿನ ಸಿಎಂ ಯಾರು? ಗೊಂದಲವೋ ಗೊಂದಲ

ಬಹುತೇಕ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎನ್ನುವುದು ಕನ್ಫರ್ಮ್ ಎಂದು ಎಲ್ಲಾ ಮಾಧ್ಯಮಗಳು ವರದಿ ಮಾಡುತ್ತಲೇ ಬಂದಿದ್ದವು. ಗುರುವಾರದಂದು ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣವಚನ ಕಾರ್ಯಕ್ರಮ ಎಂದೂ ಸುದ್ದಿಯಾಗಿತ್ತು. ಆದರೆ, ಬುಧವಾರ (ಮೇ 17) ಸಂಜೆ ನಡೆದ ಬೆಳವಣಿಗೆಯಿಂದ ಎಲ್ಲವೂ ಸಸೂತ್ರವಾಗಿಲ್ಲ ಎನ್ನುವುದು ಖಚಿತವಾದವು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+