Get Updates
Get notified of breaking news, exclusive insights, and must-see stories!

ಮೈಸೂರು ದಸರಾ ಸಕ್ಸಸ್: ಅಧಿಕಾರಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ದಸರಾ ಕನ್ನಡಿಗರ ಹೆಮ್ಮೆ, ದಸರಾ ಸಂಭ್ರಮಾಚರಣೆಗೆ ಕರ್ನಾಟಕದ ಈ ನೆಲವು ಜಗತ್ತಿನ ಮೂಲೆ ಮೂಲೆಯಲ್ಲೂ ಕೀರ್ತಿ ಪಡೆದಿದೆ. ಆದರೆ ಈ ಬಾರಿ ಕರ್ನಾಟಕದಲ್ಲಿ ಭೀಕರ ಬರ ಎದುರಾಗಿದ್ದ ಕಾರಣ, ಸರಳ ದಸರಾ ಆಚರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ನಿರ್ಧಾರ ಮಾಡಿತ್ತು. ಹೀಗೆ ಸರಳವಾಗಿ ದಸರಾ ಆಚರಣೆ ಮಾಡಿದರೂ, ಅದ್ಧೂರಿಯಾಗೇ ಈ ಬಾರಿ ಅಂಬಾರಿ ಉತ್ಸವ ನಡೆದಿದೆ. ಈ ಬಗ್ಗೆ ಅಧಿಕಾರಿಗಳ ಕುರಿತು ಸಿಎಂ ಹೇಳಿದ್ದೇನು ಗೊತ್ತಾ?

ಅಂದಹಾಗೆ, ಒಗ್ಗಟ್ಟಿನ ಶ್ರಮ ಮತ್ತು ಕೆಲಸದ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದ ರೀತಿಯಲ್ಲಿ ದಸರಾ ಯಶಸ್ವಿಯಾಗಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹಾಗೇ, ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದ್ರೆ ಪರಿಣಾಮಕಾರಿ ಅಭಿವೃದ್ಧಿಯು ಸಾಧ್ಯ. ಅಧಿಕಾರಿಗಳು, ಜನಗಳ ಮಧ್ಯೆ ಇದ್ರೆ ಅಧಿಕಾರಿಗಳ ಜನಪ್ರಿಯತೆ ಕೂಡ ಹೆಚ್ಚುತ್ತದೆ. ಜನರ ಸಮಸ್ಯೆಗಳು ಕೂಡ ಅರ್ಥ ಆಗುತ್ತವೆ. ಸಮಸ್ಯೆ ಅರ್ಥವಾದಷ್ಟೂ ಪರಿಣಾಮಕಾರಿಯಾಗಿ ಪರಿಹಾರವನ್ನ ಒದಗಿಸಲು ಸಾಧ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

Karnataka CM Siddaramaiah Appreciated The State Officers For The Successful Dasara Celebration

ಮೈಸೂರು ಅಭಿವೃದ್ಧಿಗೆ ಖಡಕ್ ಸೂಚನೆ

ಇನ್ನು, ದಸರಾ ಜನರ ಹಬ್ಬ. ಆದ್ದರಿಂದ ಜನರ ಪಾಲ್ಗೊಳ್ಳುವಿಕೆ ಅತ್ಯಂತ ಅಗತ್ಯ. ಇದು ಈ ಬಾರಿ ಕೂಡ ಯಶಸ್ವಿಯಾಗಿದೆ. ಮುಂದಿನ ಬಾರಿ ಜನರ ಜತೆ ಪೂರ್ವಭಾವಿ ಸಭೆಗಳನ್ನು ನಡೆಸಿ ದಸರಾವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸೋಣ. ಅಧಿಕಾರಿಗಳಿಗೆ ಜನಪರವಾದ ಮನಸ್ಸು ಮತ್ತು ಕಾಳಜಿ ಜೊತೆಯಲ್ಲಿ ಹೃದಯ ಇದ್ದರೆ ಮಾತ್ರ ಜನಪರ ಅಭಿವೃದ್ಧಿ ಸಾಧ್ಯ. ಕಳೆದ 5 ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ ಈಗ ಇಡೀ ಮೈಸೂರಿನ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.

ಖಡಕ್ ಸೂಚನೆ ನೀಡಿದ ಸಿದ್ದರಾಮಯ್ಯ

ಗತಕಾಲದ ಅಭಿವೃದ್ಧಿ ವೈಭವ ಮೈಸೂರಲ್ಲಿ ಮರುಕಳಿಸಬೇಕು. ನಾಲ್ವಡಿ ಅರಸರು ಮಾಡಿದ ನೀರಾವರಿ, ಕೃಷಿ, ಸಮಾಜ ಕಲ್ಯಾಣ ಸೇರಿ ಎಲ್ಲ ಅಭಿವೃದ್ಧಿ ಕಾರ್ಯ ಮಾದರಿಯಾಗಬೇಕಿದೆ ಎಂದು ಈ ವೇಳೆ ಅಧಿಕಾರಿಗಳಿಗೆ ಅಭಿವೃದ್ಧಿ ಪಾಠ ಮಾಡಿದರು. ಅವರ ಕಾಲದ ಅಭಿವೃದ್ಧಿ ವೈಭವ ಜಿಲ್ಲೆಯಲ್ಲಿ ಮರುಕಳಿಸಬೇಕು. ಮೈಸೂರನ್ನು ಅಭಿವೃದ್ಧಿಯಲ್ಲಿ ನಂಬರ್ 1 ಸ್ಥಾನಕ್ಕೆ ಕರೆದೊಯ್ಯಬೇಕಿರುವುದು ಇಲ್ಲಿನ ಅಧಿಕಾರಿಗಳ ಜವಾಬ್ದಾರಿ ಎಂದು ಸಿಎಂ ಖಡಕ್ ಆಗಿ ಈ ವೇಳೆ ತಿಳಿಸಿದರು. ಇದರ ಜತೆಗೆ ಅಧಿಕಾರಿಗಳಿಗೆ ಹಲವು ಖಡಕ್ ಸೂಚನೆ ನೀಡಿದ್ರು ಸಿಎಂ.

ಹುಮ್ಮಸ್ಸು ತುಂಬಿದ ಸಿಎಂ

ಹಾಗೆಯೇ ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಸೇರಿ ಸಮಾಜ ಕಲ್ಯಾಣ ಮತ್ತು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಯಲ್ಲಿ ಮೈಸೂರು ನಂಬರ್ ಒನ್ ಆಗಬೇಕಿದೆ. ಇದು ನಿಮ್ಮಿಂದ ಸಾಧ್ಯವಿದೆ, ಸಾಧಿಸಿ ತೋರಿಸೋಣ ಎಂದು ಸಿಎಂ ಹುಮ್ಮಸ್ಸು ತುಂಬಿದರು. ಈ ವೇಳೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. ಈ ಮೂಲಕ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯಶಸ್ವಿಯಾಗಿ ನಡೆದ ದಸರಾ ಸಂಭ್ರಮಾಚರಣೆಗೆ ಶ್ರಮ ವಹಿಸಿದ ರಾಜ್ಯದ ಅಧಿಕಾರಿ ವರ್ಗವನ್ನು ಸಿಎಂ ಶ್ಲಾಘಿಸಿದ್ದಾರೆ.

ಒಟ್ನಲ್ಲಿ ಈ ಬಾರಿ ಬರದ ಹಿನ್ನೆಲೆ ದಸರಾ ಸಂಭ್ರಮ ಕಳೆಗುಂದುವ ಆತಂಕ ಇತ್ತು. ಆದರೆ ಆ ರೀತಿಯ ಯಾವುದೆ ವಾತಾವರಣ ಇರಲಿಲ್ಲ. ಜಗತ್ತಿನ ಮೂಲೆ ಮೂಲೆಯಿಂದ ಬಂದಿದ್ದ ಜನರು, ಕನ್ನಡಿಗರ ಈ ಹೆಮ್ಮೆಯ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಹಾಗೇ ವಿಶ್ವದ ಮೂಲೆ ಮೂಲೆಯಲ್ಲೂ ಹೆಸರು ಪಡೆದಿರುವ ಅಂಬಾರಿ ಉತ್ಸವ ಕಣ್ತುಂಬಿಕೊಂಡರು. ಈ ಬಗ್ಗೆ ಇದೀಗ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಶ್ರಮವನ್ನು ಶ್ಲಾಘಿಸಿದ್ದಾರೆ. ಹಾಗೇ ಇದೇ ರೀತಿ ಮುಂದೆಯೂ ಕೆಲಸ ಮಾಡಿ ಎಂದು ಸಲಹೆ ನೀಡಿ, ಅಭಿವೃದ್ಧಿ ಪಾಠ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+