ಹಲೋ.. ನಾನು ಸಿದ್ದರಾಮಯ್ಯ ಮಾತಾಡ್ತಾ ಇದ್ದೇನೆ!

ಬೆಂಗಳೂರು, ಮೇ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಜನರೊಂದಿಗೆ ನೇರವಾಗಿ ಮಾತನಾಡಲಿದ್ದಾರೆ. ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಕಾಶವಾಣಿಯಲ್ಲಿ ಮುಖ್ಯಮಂತ್ರಿ ನೇರ ಫೋನ್-ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಆಕಾಶವಾಣಿಯ ಬೆಂಗಳೂರು ಕೇಂದ್ರ ಮೇ 21ರಂದು ಶನಿವಾರ ಮುಖ್ಯಮಂತ್ರಿಗಳ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಿದೆ. ಸಂಜೆ 7.45ರಿಂದ 8.42ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.['ಮೋದಿ ಭಾಷಣ ಮಾಡಿದ್ರೂ ಬಿಹಾರದಲ್ಲಿ ಬಿಜೆಪಿ ಸೋತಿಲ್ಲವೇ?']

karnataka

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಲು 080-22370477, 080-22360488, 080-22370488 ಕ್ಕೆ ಕರೆ ಮಾಡಬಹುದು. ಈ ಕಾರ್ಯಕ್ರಮ ಆಕಾಶವಾಣಿಯ ಎಲ್ಲ ಕೇಂದ್ರಗಳ ಮೂಲಕ ನೇರ ಪ್ರಸಾರವಾಗಲಿದೆ.[ಕರ್ನಾಟಕ ಸರ್ಕಾರಕ್ಕೆ ಮೂರು ವರ್ಷ, ಮುಂದಿದೆ ಎರಡು ವರ್ಷ!]

ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಕೋಟ್ಯಂತರ ಜನರನ್ನು ಏಕಕಾಲಕ್ಕೆ ತಲುಪುತ್ತಿದ್ದಾರೆ. ಇದೀಗ ಸಿದ್ದರಾಮಯ್ಯ ರಾಜ್ಯದ ಜನತೆಯನ್ನು ತಲುಪಲಿದ್ದಾರೆ.

ರಾಜ್ಯ ಸರ್ಕಾರ ಈ ಕಾರ್ಯಕ್ರಮಕ್ಕೆ "ದಿಲ್ ಕೀ ಬಾತ್" ಎಂದು ಹೆಸರಿಟ್ಟಿದೆ. ಅಲ್ಲಾ ಸ್ವಾಮಿ ಕನ್ನಡದ ಯಾವ ಶಬ್ದಗಳು ಇವರಿಗೆ ಸಿಗಲಿಲ್ಲವೇ? ನೀವೇನಂತಿರಿ....

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+