ಹಲೋ.. ನಾನು ಸಿದ್ದರಾಮಯ್ಯ ಮಾತಾಡ್ತಾ ಇದ್ದೇನೆ!
ಬೆಂಗಳೂರು, ಮೇ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಜನರೊಂದಿಗೆ ನೇರವಾಗಿ ಮಾತನಾಡಲಿದ್ದಾರೆ. ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಕಾಶವಾಣಿಯಲ್ಲಿ ಮುಖ್ಯಮಂತ್ರಿ ನೇರ ಫೋನ್-ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಆಕಾಶವಾಣಿಯ ಬೆಂಗಳೂರು ಕೇಂದ್ರ ಮೇ 21ರಂದು ಶನಿವಾರ ಮುಖ್ಯಮಂತ್ರಿಗಳ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಿದೆ. ಸಂಜೆ 7.45ರಿಂದ 8.42ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.['ಮೋದಿ ಭಾಷಣ ಮಾಡಿದ್ರೂ ಬಿಹಾರದಲ್ಲಿ ಬಿಜೆಪಿ ಸೋತಿಲ್ಲವೇ?']
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಲು 080-22370477, 080-22360488, 080-22370488 ಕ್ಕೆ ಕರೆ ಮಾಡಬಹುದು. ಈ ಕಾರ್ಯಕ್ರಮ ಆಕಾಶವಾಣಿಯ ಎಲ್ಲ ಕೇಂದ್ರಗಳ ಮೂಲಕ ನೇರ ಪ್ರಸಾರವಾಗಲಿದೆ.[ಕರ್ನಾಟಕ ಸರ್ಕಾರಕ್ಕೆ ಮೂರು ವರ್ಷ, ಮುಂದಿದೆ ಎರಡು ವರ್ಷ!]
ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಕೋಟ್ಯಂತರ ಜನರನ್ನು ಏಕಕಾಲಕ್ಕೆ ತಲುಪುತ್ತಿದ್ದಾರೆ. ಇದೀಗ ಸಿದ್ದರಾಮಯ್ಯ ರಾಜ್ಯದ ಜನತೆಯನ್ನು ತಲುಪಲಿದ್ದಾರೆ.
ರಾಜ್ಯ ಸರ್ಕಾರ ಈ ಕಾರ್ಯಕ್ರಮಕ್ಕೆ "ದಿಲ್ ಕೀ ಬಾತ್" ಎಂದು ಹೆಸರಿಟ್ಟಿದೆ. ಅಲ್ಲಾ ಸ್ವಾಮಿ ಕನ್ನಡದ ಯಾವ ಶಬ್ದಗಳು ಇವರಿಗೆ ಸಿಗಲಿಲ್ಲವೇ? ನೀವೇನಂತಿರಿ....