‘ರಾಹುಲ್ ಗಾಂಧಿ ಅವರನ್ನು ಕಂಡರೆ ನಿಮಗೆ ಭಯವೇ?’
ದೇಶದಲ್ಲಿ ಈಗ ರಾಹುಲ್ ಗಾಂಧಿ ರ್ಯಾಲಿ ವಿಚಾರ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತಿಕ್ಕಾಟವೂ ಜೋರಾಗಿದೆ. ಇದೇ ಸಮಯಕ್ಕೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡುತ್ತಿದ್ದಾರೆ. ಹೀಗೆ ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಬಗ್ಗೆ & ರಾಹುಲ್ ಗಾಂಧಿ ಬಗ್ಗೆ ಮಾತನಾಡಿದ್ದ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ವಿರುದ್ಧ, ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ.
ಅಂದಹಾಗೆ ರಾಹುಲ್ ಗಾಂಧಿ ಹಾಗೂ ಬಿಜೆಪಿ ನಾಯಕರ ನಡುವೆ ದೊಡ್ಡ ಕಿಚ್ಚು ಹೊತ್ತಿ ವಾಗ್ದಾಳಿ ಜೋರಾಗಿದೆ. ಅದ್ರಲ್ಲೂ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆ ಕೇಳಿದ್ದರು. 50,000 ಜನ ಅಲ್ಲ ರಾಹುಲ್ ಗಾಂಧಿ ಯಾತ್ರೆಗೆ 2,000 ಜನರು ಕೂಡ ಬಂದಿಲ್ಲ ಎಂದು ಅಸ್ಸಾಂನ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದರು. ಈಗ ಆ ಮಾತಿಗೆ ಸಿಎಂ ಸಿದ್ದರಾಮಯ್ಯ ಇಂಗ್ಲಿಷ್ ಟ್ವೀಟ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ಹಾಗಾದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಭ್ರಷ್ಟಾಚಾರದ ಆರೋಪ ನಿಮ್ಮನ್ನು...
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು ತಕ್ಕ ತಿರುಗೇಟು ನೀಡಿದ್ದಾರೆ. 'ಅಂಕಿ ಅಂಶಗಳತ್ತ ಗಮನಹರಿಸಿ ಮುಖ್ಯ ವಿಷಯ ಮರೆಯಬೇಡಿ. ಅಲ್ಲಿ ಕೇವಲ ರಾಹುಲ್ ಗಾಂಧಿ ಅವರೊಬ್ಬರೇ ಇದ್ದರೂ ಸಹಜವಾಗಿ ಈ ಪ್ರಶ್ನೆ ಉದ್ಭವಿಸುತ್ತವೆ. ಸಂವಿಧಾನ ವಿರೋಧಿ ಕ್ರಮಗಳಿಂದ ರಾಹುಲ್ ಗಾಂಧಿ ಅವರನ್ನು ತಡೆದಿದ್ದು ಯಾಕೆ? ಅವರನ್ನು ಕಂಡರೆ ನಿಮಗೆ ಭಯವೇ? ಅಥವಾ ಭ್ರಷ್ಟಾಚಾರದ ಆರೋಪ ನಿಮ್ಮನ್ನು ಇನ್ನು ಕಾಡುತ್ತಿದ್ದು, ಬಿಜೆಪಿಯ ಅಣತಿಯಂತೆ ನಿರ್ಧಾರ ತೆಗೆದುಕೊಂಡಿದ್ದೀರಾ?' ಎಂದಿದ್ದಾರೆ.
ಅಸ್ಸಾಂ ಸಿಎಂ VS ಕರ್ನಾಟಕ ಸಿಎಂ!
ಹಾಗೇ 'ಅಸ್ಸಾಂ ರಾಜ್ಯ ತನ್ನದೇ ಆದ ಭಾಷೆ, ಸಂಸ್ಕೃತಿ ಮತ್ತು ಇತಿಹಾಸ ಶ್ರೀಮಂತಿಕೆ ಹೊಂದಿದ್ದು, ಅದಕ್ಕೆ ತಕ್ಕಂತೆ ಆ ರಾಜ್ಯಕ್ಕೆ ಸಮರ್ಥ ನಾಯಕನ ಅಗತ್ಯವಿದೆ. ಪಕ್ಷದ ಒತ್ತಡಕ್ಕೆ ಮಣಿಯುವ ನಿಮ್ಮಂತಹವರಲ್ಲ. ಪಕ್ಷದ ಸೂಚನೆಗಿಂತ ಅಸ್ಸಾಂ ರಾಜ್ಯದ ಹಕ್ಕು ಹಾಗೂ ಘನತೆಯನ್ನು ಆಯ್ಕೆ ಮಾಡುವ ಸಮಯ ಬಂದಿದೆ.' ಎಂದು ಅಸ್ಸಾಂ ಮುಖ್ಯಮಂತ್ರಿಗೆ ಈ ಮೂಲಕ ಕರ್ನಾಟಕ ಸಿಎಂ ತಿರುಗೇಟು ನೀಡಿದ್ದಾರೆ.
ಶ್ರೀ @himantabiswa ಅವರೇ,
— Karnataka Congress (@INCKarnataka) January 24, 2024
ಅಂಕಿಅಂಶಗಳತ್ತ ಗಮನಹರಿಸಿ ಮುಖ್ಯ ವಿಷಯ ಮರೆಯಬೇಡಿ. ಅಲ್ಲಿ ಕೇವಲ ರಾಹುಲ್ ಗಾಂಧಿ ಅವರೊಬ್ಬರೇ ಇದ್ದರೂ ಸಹಜವಾಗಿ ಈ ಪ್ರಶ್ನೆಗಳು ಉದ್ಭವಿಸುತ್ತವೆ.
ಸಂವಿಧಾನ ವಿರೋಧಿ ಕ್ರಮಗಳಿಂದ ರಾಹುಲ್ ಗಾಂಧಿ ಅವರನ್ನು ತಡೆದಿದ್ದು ಯಾಕೆ? ಅವರನ್ನು ಕಂಡರೆ ನಿಮಗೆ ಭಯವೇ? ಅಥವಾ ಭ್ರಷ್ಟಾಚಾರದ ಆರೋಪ ನಿಮ್ಮನ್ನು ಇನ್ನು… https://t.co/TdGpfoh3xk
ಇನ್ನು, 'ಕರ್ನಾಟಕ ಹಾಗೂ ತೆಲಂಗಾಣ ರಾಜ್ಯವನ್ನೇ ನೋಡಿ. ಈ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ಥಳೀಯ ಹಿತಾಸಕ್ತಿಯನ್ನು ಕಾಪಾಡುತ್ತಾ ವಿವಿಧತೆಯಲ್ಲಿ ವೈವಿದ್ಯತೆಯನ್ನು ಎತ್ತಿ ಹಿಡಿದಿದೆ. ಇದು ಅಂಕಿ ಸಂಖ್ಯೆಗಳ ವಿಚಾರವಲ್ಲ. ಇದು ಸರಿಯಾದ ವಿಚಾರದ ಪರವಾಗಿ ನಿಲ್ಲುವ ತತ್ವ ಹಾಗೂ ಧೈರ್ಯದ ವಿಚಾರ. ಕಾಂಗ್ರೆಸ್ ಪಕ್ಷ ನ್ಯಾಯಕ್ಕಾಗಿ ತನ್ನ ಹೋರಾಟವನ್ನು ಮುಂದುವರಿಸಲಿದೆ.' ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
-
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications