ಕರಳು ಬೇನೆ ಕಾಯಿಲೆಗೆ ಬಲಿಯಾದ ರಾಕೇಶ್ ಸಿದ್ದರಾಮಯ್ಯ
ಬೆಂಗಳೂರು, ಜುಲೈ 30: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಮಗ ರಾಕೇಶ್ (39) ಅವರು ಕರಳುಬೇನೆ ಕಾಯಿಲೆಗೆ ತುತ್ತಾಗಿ ಚೇತರಿಕೆ ಕಾಣದೆ ಶನಿವಾರ ನಿಧನರಾಗಿದ್ದಾರೆ. ಬೆಲ್ಜಿಯಂನ ಯೂನಿವರ್ಸಿಟಿ ಆಸ್ಪತ್ರೆಯ ಐಸಿಯುನಲ್ಲಿ ಒಂದು ವಾರದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
'ರಾಕೇಶ್ ರಲ್ಲಿ ಹೆಪಟೋ ರೆನಾಲ್ ಸಿಂಡ್ರೋಮ್ ಬೆಳವಣಿಗೆ ಕಂಡು ಬಂದಿತ್ತು. 72 ಗಂಟೆಗಳ ತೀವ್ರ ನಿಗಾ ನಂತರ ಏನಾದರೂ ಹೇಳಬಹುದು' ಎಂದು ಐಸಿಯು ಮುಖ್ಯಸ್ಥ ಫಿಲಿಫೆ ಜೊರೆನ್ಸ್ ತಿಳಿಸಿದ್ದರು. ನಿರಂತರ ಡಯಾಲಿಸಿಸ್ ನಡೆಸಲಾಗುತ್ತಿತ್ತು.[ಬಾರದ ಲೋಕಕ್ಕೆ ರಾಕೇಶ್, ಮೈಸೂರಲ್ಲಿ ನೀರವ ಮೌನ!]
ವಿವಿಧ ಅಂಗಾಂಗಗಳ ವೈಫಲ್ಯ ತಡೆಯಲು ಸತತ ಯತ್ನ ಕೂಡಾ ವಿಫಲವಾದ ಕಾರಣ ರಾಕೇಶ್ ಅಸುನೀಗಿದ್ದಾರೆ.[ರಾಕೇಶ್ ಅನಾರೋಗ್ಯ ಕರ್ನಾಟಕ 'ಸಿಎಂ' ಟ್ವೀಟ್ ಬಗ್ಗೆ ಆಕ್ಷೇಪ]
ಸಿದ್ದರಾಮಯ್ಯ ಅವರ ಕಿರಿಯ ಪುತ್ರ ಡಾ. ಯತೀಂದ್ರ, ಕುಟುಂಬದ ಡಾಕ್ಟರ್ ರವಿಕುಮಾರ್ ಹಾಗೂ ಮತ್ತೊಬ್ಬ ತಜ್ಞ ವೈದ್ಯರು ಬೆಲ್ಜಿಯಂನಲ್ಲಿದ್ದಾರೆ. ಸಿದ್ದರಾಮಯ್ಯ ಅವರು ಗುರುವಾರದಂದು ಬ್ಸುಸೆಲ್ ತಲುಪಿದ್ದರು. ರಾಕೇಶ್ ಅವರ ತಾಯಿ ಪಾರ್ವತಿ, ಪತ್ನಿ ಸ್ಮಿತಾ ಹಾಗೂ ರಾಕೇಶ್ ಅವರ ಗೆಳೆಯರು ಆಸ್ಪತ್ರೆಯಲ್ಲಿದ್ದಾರೆ.

ರಾಕೇಶ್ ಗೆ ಪ್ಯಾಂಕ್ರಿಯಾಸ್ ಸಮಸ್ಯೆ ಇತ್ತು
ಈ ಹಿಂದೆ 2000 ಇಸವಿಯಲ್ಲಿ ಅಪಘಾತವೊಂದರಲ್ಲಿ ಪೆಟ್ಟು ತಿದ್ದಿದ್ದ ರಾಕೇಶ್ ಅವರಿಗೆ ಕರುಳು ಬೇನೆ ಆರಂಭವಾಗಿತ್ತು, ಇದಕ್ಕಾಗಿ ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಬೆಲ್ಜಿಯಂ ಪ್ರವಾಸದ ವೇಳೆ epigastric ನೋವು ಉಲ್ಬಣವಾಗಿತ್ತು.

ಪ್ಯಾಂಕ್ರಿಯಾಸ್ ಸಮಸ್ಯೆ
epigastric ನೋವು ಉಲ್ಬಣವಾದ ಮೇಲೆ ರಕ್ತ ಹೆಪ್ಪುಗಟ್ಟುವಿಕೆ, ಕಿಡ್ನಿ ವೈಫಲ್ಯ, ವಿವಿಧ ಅಂಗಾಂಗ ವೈಫಲ್ಯಕ್ಕೆ ಕಾರಣವಾಗಬಲ್ಲಂಥ ತೀವ್ರ ಆಘಾತಕಾರಿ ಪರಿಸ್ಥಿತಿ ರಾಕೇಶ್ ಗಿತ್ತು. ಆದರೆ, ರಾಕೇಶ್ ಗೆ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೂ ಚೇತರಿಕೆ ಕಾಣಲು ಆಗಲಿಲ್ಲ.

ಪಚನ ಕ್ರಿಯೆಗೆ ಮಾರಕವಾಗಬಲ್ಲ ಸಮಸ್ಯೆ
ಪಚನ ಕ್ರಿಯೆಗೆ ಮಾರಕವಾಗಬಲ್ಲ ಪ್ಯಾಂಕ್ರಿಯಾಸ್ ಸಮಸ್ಯೆಗೆ ರಾಕೇಶ್ ಅವರಿಗೆ ಅಲ್ಕೋಹಾಲ್ ಪ್ರಮಾಣ ಅಧಿಕವಾದ ಕಾರಣ ಪರಿಸ್ಥಿತಿ ತೀವ್ರವಾಗಿರಬಹುದು, ಅಥವಾ ಕರುಳಿಗೆ ನೋವುಂಟಾಗುವಂಥ ಸಂದರ್ಭ ಒದಗಿರಬಹುದು, ಅವರಿಗೆ ಆಯುರ್ವೇದ ಚಿಕಿತ್ಸೆ ಕೂಡಾ ನೀಡಲಾಗುತ್ತಿತ್ತು. ಆದರೆ, ರಾಕೇಶ್ ಅವರ ದೇಹ ಸ್ಥಿತಿ ಬಹುಅಂಗಾಂಗ ವೈಫಲ್ಯ ಸ್ಥಿತಿ ತಲುಪಲು ಏನು ಕಾರಣ ತಿಳಿದಿಲ್ಲ ಎಂದು ಡಾ. ಅಬ್ದುಲ್ ಖಾದರ್ ಅಭಿಪ್ರಾಯ ಪಟ್ಟಿದ್ದಾರೆ.

ಬೂಮ್ ನಗರದಲ್ಲಿ ರಾಕೇಶ್ ಗೆ ನೋವುಂಟಾಯಿತು
ರಾಕೇಶ್ ಅವರ ಪತ್ನಿ ಸ್ಮಿತಾ ಕಡೆ ಸಂಬಂಧಿಕರು ಜರ್ಮನಿಯಲ್ಲಿದ್ದು, ಅವರನ್ನು ಕಾಣಲು ರಾಕೇಶ್ ತೆರಳಿದ್ದರು. ಫ್ರಾನ್ಸ್, ಬೆಲ್ಜಿಯಂ ಪ್ರವಾಸ ನಿರತರಾಗಿದ್ದಾಗ ಕಿಬ್ಬೊಟ್ಟೆಯಲ್ಲಿ ತೀವ್ರನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಗೆಳೆಯರ ನೆರವಿನಿಂದ ಆಸ್ಪತ್ರೆಗೆ ಸೇರಿದ್ದಾರೆ. ಬೆಲ್ಜಿಯಂನ ಬೂಮ್ ನಗರದಲ್ಲಿ ನಡೆಯುತ್ತಿದ್ದ ಎಲೆಕ್ಟ್ರಾನಿಕ್ ಮ್ಯೂಸಿಕ್ ಹಬ್ಬಕ್ಕಾಗಿ ಟುಮಾರೋ ಲ್ಯಾಂಡಿಗೆ ರಾಕೇಶ್ ಹೋಗಿದ್ದರು ಎಂದು ಗೆಳೆಯರು ಹೇಳಿದ್ದಾರೆ.

ಉತ್ತರಾಧಿಕಾರಿಯನ್ನು ಕಳೆದುಕೊಂಡ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಮೈಸೂರಿನ ವರುಣಾ ಕ್ಷೇತ್ರದಲ್ಲಿ ರಾಕೇಶ್ ಅವರು ಸಕ್ರಿಯವಾಗಿ ಪ್ರಚಾರ ನಡೆಸಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಹೀರೋ ಆಗಲು ಯತ್ನಿಸಿ ವಿಫಲರಾಗಿದ್ದ ರಾಕೇಶ್ ಅವರು ತಮ್ಮ ವೃತ್ತಿ ಬದುಕನ್ನು ರಾಜಕೀಯದಲ್ಲಿ ಕಾಣಲು ಬಯಸಿದ್ದರು. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ನಿಲ್ಲಲಿದ್ದಾರೆ ಎಂಬ ಕನಸು ಈಗ ಭಗ್ನವಾಗಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications