Get Updates
Get notified of breaking news, exclusive insights, and must-see stories!

ತುಂಗಭದ್ರಾ ಜಲಾಶಯಕ್ಕೂ ಸ್ವಾತಂತ್ರ್ಯಕ್ಕೂ ಇರುವ ಸಂಬಂಧವೇನು? ಸಿದ್ದರಾಮಯ್ಯ ನೀಡಿದ ವಿವರಣೆ ಇಲ್ಲಿದೆ

ಬೆಂಗಳೂರು, ಆಗಸ್ಟ್‌ 15: ಚೈನ್ ಲಿಂಕ್ ಕಟ್ಟಾಗಿ ಕೆಳಕ್ಕೆ ಬಿದ್ದಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ನೀರಾವರಿ ಅಧಿಕಾರಿಗಳಿಂದ ಘಟನೆಯ ಬಗ್ಗೆ ವಿವರಣೆ ಪಡೆದರು. ತುಂಗಭದ್ರಾ ಗೇಟ್ ನಂ.19 ಕ್ಕೆ ಹೊಸ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯ ಬುಧವಾರದಿಂದಲೇ ಆರಂಭವಾಗಿದ್ದು, ಆಗಸ್ಟ್ 17ರೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ತುಂಗಭದ್ರಾ ಜಲಾಶಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತುಂಗಭದ್ರಾ ಜಲಾಶಯದ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ. ತುಂಗಭದ್ರಾ ಜಲಾಶಯ ಮತ್ತೆ ತುಂಬುವ ವಿಶ್ವಾಸವಿದ್ದು, ಬಾಗಿನ ಅರ್ಪಿಸಲು ನಾನು ಮತ್ತೊಮ್ಮೆ ಬರುತ್ತೇನೆ ಎಂದಿದ್ದಾರೆ.

Karnataka CM Siddaramaiah Visited Tungabhadra Reservoir

ತುಂಗಭದ್ರಾ ಜಲಾಶಯದ 19ನೇ ಗೇಟ್ ತುಂಡಾಗಿದೆ. ಜಲಾಶಯದ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೇನೆ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ.

ತುಂಗಭದ್ರಾ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು ಅಂದರೆ 1948ರಲ್ಲಿ ಪ್ರಾರಂಭವಾಗಿ 1953ರಲ್ಲಿ ಪೂರ್ಣಗೊಂಡು, 1954 ರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಪ್ರಾರಂಭಿಸಲಾಯಿತು. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್‌ನ ಚೈನ್ ತುಂಡಾಗಿರಲಿಲ್ಲ.

ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ. ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ.

Karnataka CM Siddaramaiah Visited Tungabhadra Reservoir

ಗೇಟ್‌ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗಲಿದೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ.

ಕರ್ನಾಟಕದಲ್ಲಿ ಸುಮಾರು 9 ಲಕ್ಷ ಹಾಗೂ ಆಂಧ್ರ ತೆಲಂಗಾಣಗಳಲ್ಲಿ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಕಿರುವ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅದಲ್ಲದೇ, ಆಗಸ್ಟ್ 17ರಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಬರುವ ನಿರೀಕ್ಷೆ ಇದೆ.

2019ರಲ್ಲಿ ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್‌ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ. 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೇಟ್‌ನ ಸರಪಳಿ ತುಂಡಾಗಿರುವ ಘಟನೆ ನಡೆದಿದೆ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ.

ಕೇಂದ್ರ ಸರ್ಕಾರ ನೇಮಿಸಿದ ತುಂಗಭದ್ರ ಮಂಡಳಿ ಅಸ್ತಿತ್ವದಲ್ಲಿದ್ದು, ಕೇಂದ್ರ ಜಲ ಆಯೋಗ ಹಾಗೂ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಸದಸ್ಯರೂ ಇದರಲ್ಲಿದ್ದಾರೆ. ಇಂತಹ ಘಟನೆಗಳಿಗೆ ಕಾರಣವೇನು ಎಂಬುದರ ಬಗ್ಗೆ ವಿಶ್ಲೇಷಣೆ ಮಾಡುವ ಅಗತ್ಯವಿದೆ. ನವಲಿ ಜಲಾಶಯ ನಿರ್ಮಾಣಕ್ಕೆ 15 ಸಾವಿರ ಕೋಟಿ ರೂ.ಗಳ ಡಿಪಿಆರ್ ತಯಾರಾಗಿದ್ದು, ಇದು ಅಂತರರಾಜ್ಯ ಯೋಜನೆಯಾಗಿದೆ. ಡಿಪಿಆರ್ ಗೆ ಒಪ್ಪಿಗೆ ದೊರೆತ ನಂತರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+