"CM, DCM ಕುರ್ಚಿ ಕಿತ್ತಾಟದಲ್ಲಿ ಡಾರ್ಕ್ ಹಾರ್ಸ್ ರೇಸ್ಗೆ ಬರುವ ಸಾಧ್ಯತೆ''
Karnataka CM Tussle: ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಇದೇ ಥರ ಮುಂದುವರೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗುವ ಸಾಧ್ಯತೆ ಇದೆ. ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ. ಡಾರ್ಕ್ ಹಾರ್ಸ್ ರೇಸ್ಗೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಹಗ್ಗ ಜಗ್ಗಾಟ ತೀವ್ರ ಸ್ವರೂಪ ಪಡೆದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ಆಡಳಿತ ಸಂಪೂರ್ಣ ಕುಸಿತಗೊಂಡಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಇದೇ ಥರ ಮುಂದೆ ನಡೆದರೆ ರಾಜ್ಯದ ರಾಜಕೀಯ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಭವಿಷ್ಯ ನುಡಿಸಿದರು.

ಇಬ್ಬರ ಜಗಳ ಮೂರನೇಯವರಿಗೆ ಲಾಭ ಆಗುತ್ತಾ?
ಕೇಂದ್ರದ ಕಾಂಗ್ರೆಸ್ ನಾಯಕರು ಇದನ್ನು ಬಗೆ ಹರಿಸಲು ಎರಡು ಮೂರು ಸೂತ್ರ ಬಿಟ್ಟರೂ, ಇಬ್ಬರೂ ನಾಯಕರೂ ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು ಬೇರೆ ಸೂತ್ರ ತಯಾರು ಮಾಡುವ ಸಾಧ್ಯತೆ ಇದೆ ಅಂತ ಮಾಹಿತಿ ಇದೆ. ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈಗ ಕಾಣದಿರುವ ಕುದುರೆ ಕಾಣಬಹುದು. ಫೋಟೋದಲ್ಲಿ ಇರುವ ಕುದುರೆ ಓಡುವುದಿಲ್ಲ. ರಾಜ್ಯದಲ್ಲಿ ಏನಾದರೂ ಆಗಬಹುದು ಎಂದು ಹೇಳಿದರು.
ಸರ್ಕಾರದ ವಿರುದ್ಧ ಅವಿಶ್ವಾಸ ನೀರ್ಣಯ
ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಿಸೆಂಬರ್ 8 ರವರೆಗೂ ಸಮಯ ಇದೆ. ಅಂತಹ ಸಂದರ್ಭ ಬಂದರೆ ಶ್ವಾಸ ನಿರ್ಣಯ ಮಂಡಿಸುವ ಪ್ರಸಂಗ ಬರಬಹುದು ಎಂದರು.
ಕುದುರೆ ವ್ಯಾಪಾರ ಮಾಡುವುದು ಬಿಜೆಪಿಯವರ ಕೆಲಸ ಕಾಂಗ್ರೆಸ್ನವರ ಕೆಲಸ ಅಲ್ಲ ಎಂದು ಸಚಿವ ಸತಿಶ್ ಬಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಕಾಂಗ್ರೆಸ್ವರು 1969 ರಿಂದಲೇ ಕುದುರೆ ವ್ಯಾಪಾರ ಆರಂಭ ಮಾಡಿದ್ದಾರೆ. ಆಗ ಜಾರಕಿಹೊಳಿಯವರು ಇನ್ನೂ ರಾಜಕಾರಣದಲ್ಲಿಯೇ ಇರಲಿಲ್ಲ, ಕಾಂಗ್ರೆಸ್ ಇತಿಹಾಸ ತೆಗೆದುನೋಡಿದರೆ ಗೊತ್ತಾಗಲಿದೆ. ಮಹಾರಾಷ್ಟ್ರದ ಎಲ್ಲಾ ಶಾಸಕರನ್ನು ಡಿ.ಕೆ. ಶಿವಕುಮಾರ ಕರೆದುಕೊಂಡು ಬಂದು ವಿಲಾಸ್ ರಾವ್ ದೇಶಮುಖ ಅವರನ್ನು ಕಂಟೋಲ್ ನಲ್ಲಿ ಇಟ್ಟುಕೊಂಡಿರುವುದು ಗೊತ್ತಿಲ್ಲವಾ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರದ "ಕೈ'ಲ್ಲಿ ದುಡ್ಡಿಲ್ಲ
ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡುತ್ತಿರುವ ಬಗ್ಗೆ ಮಾತನಾಡಿ, ಮೆಕ್ಕೆಜೋಳ ವಿಚಾರದಲ್ಲಿ ಸುಮ್ಮನೆ ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಮುಖ್ಯಮಂತ್ರಿಗಳು 10 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ಆದೇಶ ಮಾಡಿದ್ದಾರೆ. ಯಾಕೆ ಖರೀದಿ ಮಾಡುತ್ತಿಲ್ಲ. ಯಾಕೆ ಎಜೆನ್ಸಿ ನಿಗದಿ ಮಾಡಿಲ್ಲ. ಯಾಕೆ ಹಣ ಬಿಡುಗಡೆ ಮಾಡಿಲ್ಲ. ತಮ್ಮ ಜವಾಬ್ದರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ಕೇಂದಕ್ಕೆ ನಿಯೋಗ ತೆಗೆದುಕೊಂಡು ಹೋಗುವ ಕುರಿತು ಸಚಿವ ಶಿವಾನಂದ ಪಾಟೀಲರು ಹೇಳಿರುವ ಮಾತಿಗೆ ಪ್ರತಿಕ್ರಿಯಿಸಿದ ಅವರು, ನಿಯೋಗ ತೆಗೆದುಕೊಂಡು ಹೋಗಿ ಏನು ಮಾಡುವುದು. ಅವರು ಮೊದಲು ಖರೀದಿ ಆರಂಭಿಸಿಲಿ, ನಾನು ಅವರ ಜಾಗದಲ್ಲಿ ಇದ್ದಿದ್ದರೆ ಆ ಕಲಸ ಮಾಡುತ್ತಿದ್ದೆ ಎಂದು ತಿರುಗೇಟು ನೀಡಿದರು.
-
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು











Click it and Unblock the Notifications