ವಿಡಿಯೋ; ಭಾವುಕರಾಗಿ ರಾಮ ಮಂದಿರ ಭೂಮಿ ಪೂಜೆ ವೀಕ್ಷಿಸಿದ ಬಿಎಸ್ವೈ
ಬೆಂಗಳೂರು, ಆಗಸ್ಟ್ 05 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯನ್ನು ಭಾವುಕರಾಗಿ ವೀಕ್ಷಣೆ ಮಾಡಿದರು. ಕೋವಿಡ್ ಸೋಂಕು ತಗುಲಿರುವ ಯಡಿಯೂರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ.
Recommended Video
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು. ಮಣಿಪಾಲ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿರುವ ಯಡಿಯೂರಪ್ಪ ಅವರು ಅಲ್ಲಿಯೇ ಟಿವಿಯಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಿದರು.
ಮಂಗಳವಾರ ಯಡಿಯೂರಪ್ಪ ಅವರು "ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ" ಎಂದು ಟ್ವೀಟ್ ಮಾಡಿದ್ದರು.

ಬುಧವಾರ ನರೇಂದ್ರ ಮೋದಿ ಅವರು ಭೂಮಿಪೂಜೆ ಮಾಡುವ ಐತಿಹಾಸಿಕ ಕಾರ್ಯಕ್ರಮದ ನೇರಪ್ರಸಾರವನ್ನು ಆಸ್ಪತ್ರೆಯಿಂದಲೇ ಭಾವುಕರಾಗಿ ವೀಕ್ಷಿಸಿದರು. ಯಡಿಯೂರಪ್ಪ ಕಾರ್ಯಕ್ರಮ ನೋಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾನುವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿದೆ. ಆದರೆ, ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ, ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಟಿವಿಯಲ್ಲಿ ರಾಮ ಮಂದಿರ ಭೂಮಿ ಪೂಜೆ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು.#Yediyurappa #RamMandir #AyodhyaBhoomipoojan pic.twitter.com/hXfSul84Lj
— oneindiakannada (@OneindiaKannada) August 5, 2020
ಸೋಮವಾರ ಆಸ್ಪತ್ರೆಯಿಂದಲೇ ಯಡಿಯೂರಪ್ಪ ರಾಜ್ಯದ ಜನರಿಗೆ ವಿಡಿಯೋ ಸಂದೇಶ ರವಾನೆ ಮಾಡಿದ್ದರು. ಮಂಗಳವಾರ ಆಸ್ಪತ್ರೆಯಿಂದ ಕೆಲಸ ಮಾಡುವ ಫೋಟೋ ಬಿಡುಗಡೆಯಾಗಿತ್ತು.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications