ವಿಡಿಯೋ; ಭಾವುಕರಾಗಿ ರಾಮ ಮಂದಿರ ಭೂಮಿ ಪೂಜೆ ವೀಕ್ಷಿಸಿದ ಬಿಎಸ್ವೈ
ಬೆಂಗಳೂರು, ಆಗಸ್ಟ್ 05 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯನ್ನು ಭಾವುಕರಾಗಿ ವೀಕ್ಷಣೆ ಮಾಡಿದರು. ಕೋವಿಡ್ ಸೋಂಕು ತಗುಲಿರುವ ಯಡಿಯೂರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿದ್ದಾರೆ.
Recommended Video
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದರು. ಮಣಿಪಾಲ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿರುವ ಯಡಿಯೂರಪ್ಪ ಅವರು ಅಲ್ಲಿಯೇ ಟಿವಿಯಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಿದರು.
ಆಸ್ಪತ್ರೆಯಲ್ಲೂ ಕಡತ ಪರಿಶೀಲನೆ ಮಾಡುತ್ತಿರುವ ಯಡಿಯೂರಪ್ಪ!
ಮಂಗಳವಾರ ಯಡಿಯೂರಪ್ಪ ಅವರು "ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ದೇಗುಲಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ" ಎಂದು ಟ್ವೀಟ್ ಮಾಡಿದ್ದರು.
ಜನರಿಗೆ ಆಸ್ಪತ್ರೆಯಿಂದ ಯಡಿಯೂರಪ್ಪ ವಿಡಿಯೋ ಸಂದೇಶ
ಬುಧವಾರ ನರೇಂದ್ರ ಮೋದಿ ಅವರು ಭೂಮಿಪೂಜೆ ಮಾಡುವ ಐತಿಹಾಸಿಕ ಕಾರ್ಯಕ್ರಮದ ನೇರಪ್ರಸಾರವನ್ನು ಆಸ್ಪತ್ರೆಯಿಂದಲೇ ಭಾವುಕರಾಗಿ ವೀಕ್ಷಿಸಿದರು. ಯಡಿಯೂರಪ್ಪ ಕಾರ್ಯಕ್ರಮ ನೋಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಟೆಂಟಿನಲ್ಲಿದ್ದ ರಾಮ ಭವ್ಯ ಮಂದಿರಕ್ಕೆ ಬಂದ: ಪ್ರಧಾನಿ ಮೋದಿ
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾನುವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿದೆ. ಆದರೆ, ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ, ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಟಿವಿಯಲ್ಲಿ ರಾಮ ಮಂದಿರ ಭೂಮಿ ಪೂಜೆ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು.#Yediyurappa #RamMandir #AyodhyaBhoomipoojan pic.twitter.com/hXfSul84Lj
— oneindiakannada (@OneindiaKannada) August 5, 2020
ಸೋಮವಾರ ಆಸ್ಪತ್ರೆಯಿಂದಲೇ ಯಡಿಯೂರಪ್ಪ ರಾಜ್ಯದ ಜನರಿಗೆ ವಿಡಿಯೋ ಸಂದೇಶ ರವಾನೆ ಮಾಡಿದ್ದರು. ಮಂಗಳವಾರ ಆಸ್ಪತ್ರೆಯಿಂದ ಕೆಲಸ ಮಾಡುವ ಫೋಟೋ ಬಿಡುಗಡೆಯಾಗಿತ್ತು.