ಲಾಕ್ ಡೌನ್: ಬಡವರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟದ ವ್ಯವಸ್ಥೆ
ಬೆಂಗಳೂರು, ಮಾರ್ಚ್ 23: ಮಾರಣಾಂತಿಕ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಗಟ್ಟಲು ಕರ್ನಾಟಕ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿದೆ. ಕೊರೊನಾ ಭೀತಿಯಿಂದಾಗಿ ಇಡೀ ರಾಜ್ಯವೇ ಸ್ತಬ್ಧವಾಗುವ ಸಾಧ್ಯತೆಯೂ ಇದೆ.
ಇದರಿಂದ ದಿನಗೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಡವರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಲಾಕ್ ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕುವ ಬಡವರಿಗೆ ಉಚಿತ ಆಹಾರ ನೀಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಊಟ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

''ಜೀವನೋಪಾಯಕ್ಕೆ ದೈನಂದಿನ ಆದಾಯದ ಮೇಲೆ ಅವಲಂಬಿತರಾಗಿರುವ ಜನರಿಗೆ ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಇಡೀ ದಿನ ಆಹಾರ ಲಭ್ಯವಿರುತ್ತದೆ'' ಎಂದು ಸಿ.ಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಲಾಕ್ ಡೌನ್ ವೇಳೆ ಹೋಟೆಲ್ ಗಳು ತೆರೆಯಬಹುದು. ಆದ್ರೆ ಹೋಟೆಲ್ ಗಳಲ್ಲಿ ಉಪಹಾರ ಸೇವಿಸಲು ಜನರಿಗೆ ಅವಕಾಶವಿಲ್ಲ. ಪಾರ್ಸೆಲ್ ತೆಗೆದುಕೊಂಡ ಮನೆಗೆ ಹೋಗಿ ತಿನ್ನಬೇಕು. ಇತ್ತ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾತ್ರ ಅಲ್ಲೇ ಸೇವಿಸಲು ಅವಕಾಶ ಕಲ್ಪಿಸಲಾಗಿದೆ.
-
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
ವಾಸ್ತು ಅನುಸರಿಸುವುದು ಏಕೆ ಮುಖ್ಯ? ತಿಳಿಯಿರಿ ಕಾರಣಗಳು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications