ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ: ವಿದ್ಯಾರ್ಥಿಗಳಿಂದ ಪ್ರೊಟೆಸ್ಟ್
ಚಿಕ್ಕಮಗಳೂರು ಜನವರಿ 5: ಮೂರು ವರ್ಷದ ಹಿಂದೆ ಹಿಜಬ್ ವಿರುದ್ಧ ಧ್ವನಿ ಎತ್ತಿದ್ದ ಕರ್ನಾಟಕದ ಕೊಪ್ಪದಲ್ಲಿರುವ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳು ಮತ್ತದೇ ವಿಚಾರವನ್ನು ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದ್ದಾರೆ. ಮುಸ್ಲಿಂ ಮಹಿಳೆಯರು ಹಿಜಬ್ ಧರಿಸುವುದನ್ನು ವಿರೋಧಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಬಣ್ಣದ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಇದು ಆಡಳಿತ ಮಂಡಳಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅನುಮತಿ ಕೋರಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆಯ ನಂತರ ಪ್ರಾಂಶುಪಾಲರು ಜನವರಿ 10 ರವರೆಗೆ ಡ್ರೆಸ್ ಕೋಡ್ ಅನ್ನು ಅಮಾನತುಗೊಳಿಸಿದ್ದಾರೆ. ವಿದ್ಯಾರ್ಥಿಗಳ ಡ್ರೆಸ್ ಕೋಡ್ ಬಗ್ಗೆ ನಿರ್ಧರಿಸಲು ಜನವರಿ 10 ರಂದು ಪೋಷಕರ ಸಭೆಗೆ ಹಾಜರಾಗುವಂತೆ ಪ್ರಾಂಶುಪಾಲ, ಪ್ರೊಫೆಸರ್ ಎಸ್ ಅನಂತ ತಿಳಿಸಿದ್ದಾರೆ.
ಕೊಪ್ಪ ತಾಲೂಕಿನ ಬಾಳಗಡಿಯ ಕಾಲೇಜು ಅಧಿಕಾರಿಗಳು ತರಗತಿಯಲ್ಲಿ ಹೊರತುಪಡಿಸಿ ಕ್ಯಾಂಪಸ್ನಲ್ಲಿ ಎಲ್ಲಿ ಬೇಕಾದರೂ ಹಿಜಬ್ ಧರಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಅದಾಗ್ಯೂ ಮುಸ್ಲಿಂ ಹುಡುಗಿಯರು ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿಸಿರುವುದರಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗುವಾಗ ಕೇಸರಿ ಶಾಲುಗಳನ್ನು ಧರಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ 850 ವಿದ್ಯಾರ್ಥಿಗಳು ಇದ್ದಾರೆ. ಇದರಲ್ಲಿ ಸುಮಾರು 50 ವಿದ್ಯಾರ್ಥಿಗಳ ಗುಂಪು ಜನವರಿ 4 ರಂದು ಪ್ರತಿಭಟನೆ ನಡೆಸಿದೆ.

ಹೀಗಾಗಿ ಪ್ರಾಂಶುಪಾಲ ಅನಂತ್ ಅವರು ಜನವರಿ 10 ರಂದು ಪೋಷಕರ ಸಭೆ ಕರೆದಿದ್ದು ಅಲ್ಲಿವರೆಗೂ ಡ್ರೆಸ್ ಕೋಡ್ ಅನ್ನು ಅಮಾನತುಗೊಳಿಸಿದ್ದಾರೆ. ಜನವರಿ 10 ರವರೆಗೆ ಅವರು ಏನು ಬೇಕಾದರೂ ಧರಿಸಲಿ. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆದ ಶಾಸಕ ಟಿ.ಡಿ.ರಾಜೇಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ಸಭೆಗೆ ಪಾಲಕರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಿದ್ದೇವೆ' ಎಂದು ಅವರು ತಿಳಿಸಿದರು.

ಇದಲ್ಲದೆ, ಕಾಲೇಜು ಆಡಳಿತವು ಮುಸ್ಲಿಂ ಮಹಿಳೆಯರಿಗೆ ಕ್ಯಾಂಪಸ್ನಲ್ಲಿ ಹಿಜಬ್ ಧರಿಸದಂತೆ ಪದೇ ಪದೇ ಕೇಳಿಕೊಂಡಿದ್ದರೂ ಅವರು ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ. ಹೀಗಾಗಿ ಸಮಸ್ಯೆ ಬಗೆಹರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications