ಕರ್ನಾಟಕ: ಪ್ರಾಧ್ಯಾಪಕರ ವರ್ಗ ಶುರು, ಜು.16ಕ್ಕೆ ತಾತ್ಕಾಲಿಕ ಪಟ್ಟಿ ಬಿಡುಗಡೆ
ಬೆಂಗಳೂರು, ಜುಲೈ 15: ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಧ್ಯಾಪಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಜು.16ಕ್ಕೆ ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜು.27ರಿಂದ 3 ದಿನಗಳ ಕಾಲ ಸಾಮಾನ್ಯ ಕೌನ್ಸೆಲಿಂಗ್ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಜು.14 ಕೊನೆಯ ದಿನವಾಗಿತ್ತು, ಜು.16ರಂದು ಆದ್ಯತಾ ಪಟ್ಟಿ ಪ್ರಕಟಿಸಲಾಗುವುದು, ಜು.20ರಂದು ವಿಶೇಷ ಪ್ರಕಟಣಗಳ ಆದ್ಯತಾ ಪಟ್ಟಿ ಪ್ರಕಟವಾಗಲಿದೆ.
ಜು.22ರಂದು ವಿಶೇಷ ಪ್ರಕರಣಗಳ ವರ್ಗಾವಣೆ ಕೌನ್ಸೆಲಿಂಗ್ ಹಾಗೂ 27 ರಿಂದ 29ರವರೆಗೆ ಸಾಮಾನ್ಯ ಅಭ್ಯರ್ಥಿಗಳ ಕೌನ್ಸೆಲಿಂಗ್ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಮಹಾನಗರ ವ್ಯಾಪ್ತಿಯನ್ನು ವಲಯ ಎ ಎಂದು, ಇತರೆ ಎಲ್ಲಾ ಮಹಾನಗರ ಪಾಲಿಕೆಗಳನ್ನು ಹೊಂದಿರುವ ನಗರಗಳ ವ್ಯಾಪ್ತಿಯನ್ನು( ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ, ಕಲಬುರಗಿ, ಬಲ್ಳಾರಿ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು)- ವಲಯ ಬಿ, ಜಿಲ್ಲಾ ಕೇಂದ್ರಗಳು ಹಾಗೂ ನಗರಸಭೆಗಳನ್ನು ಹೊಂದಿರುವ ನಗರಗಳು ವಲಯ ಸಿ, ಎಲ್ಲ ತಾಲೂಕು ಕೇಂದ್ರಗಳು ಹಾಗೂ ಪುರಸಭೆಯನ್ನು ಹೊಂದಿರುವ ನಗರಗಳು ವಲಯ ಡಿ ಹಾಗೂ ಉಳಿದ ಎಲ್ಲಾ ಪ್ರದೇಶಗಳು ವಲಯ ಇ ಎಂದು ವಿಂಗಡಿಸಲಾಗಿದೆ.
ಪ್ರಸ್ತುತ ರೂಪಿಸಿರುವ ನಿಯಮಗಳಲ್ಲಿ ಬೋಧಕರ ಕಡ್ಡಾಯ ವರ್ಗಾವಣೆ ಪ್ರಮುಖ ಅಂಶವಾಗಿದೆ. ಒಟ್ಟು ಬೋಧಕ ಹುದ್ದೆಗಳ ಪೈಕಿ ಶೇ.15ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.












Click it and Unblock the Notifications